Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇಶದಲ್ಲಿ ಕಾರ್ಮಿಕರ ಸ್ಥಿತಿ ಇನ್ನಷ್ಟು...

ದೇಶದಲ್ಲಿ ಕಾರ್ಮಿಕರ ಸ್ಥಿತಿ ಇನ್ನಷ್ಟು ಸಂಕಷ್ಟದಲ್ಲಿ: ಅಮರಜೀತ್ ಕೌರ್ ಆತಂಕ

ಬಿ.ವಿ.ಕಕ್ಕಿಲ್ಲಾಯರ ಜನ ಶತಾಬ್ದಿ ಕಾರ್ಯಕ್ರಮಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ10 Aug 2019 2:08 PM IST
share
ದೇಶದಲ್ಲಿ ಕಾರ್ಮಿಕರ ಸ್ಥಿತಿ ಇನ್ನಷ್ಟು ಸಂಕಷ್ಟದಲ್ಲಿ: ಅಮರಜೀತ್ ಕೌರ್ ಆತಂಕ

ಮಂಗಳೂರು, ಆ.10: ಕಾರ್ಮಿಕರ ಹಿತಾಸಕ್ತಿ ಕಡೆಗಣಿಸುವ ನೀತಿಯನ್ನು ದೇಶದಲ್ಲಿ ಸರಕಾರ ಅನುಸರಿಸುತ್ತಿರುವುದರಿಂದ 2014ರಿಂದ ಕಾರ್ಮಿಕರ ಸ್ಥಿತಿ ಇನ್ನಷ್ಟು ಸಂಕಷ್ಟಕ್ಕೀಡಾಗಿದೆ ಎಂದು ದೇಶದ ಹಿರಿಯ ಕಾರ್ಮಿಕ ನಾಯಕಿ ಅಮರಜೀತ್ ಕೌರ್ ಆತಂಕ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ ಹೋರಾಟಗಾರ, ಕರ್ನಾಟಕ ಏಕೀಕರಣದ ಧುರೀಣ, ಬಿ.ವಿ.ಕಕ್ಕಿಲ್ಲಾಯರ ಜನ ಶತಾಬ್ದಿಯ ಪ್ರಯುಕ್ತ ಸಮದರ್ಶಿ ವೇದಿಕೆ ಮಂಗಳೂರು, ಎಂ.ಎಸ್.ಕೃಷ್ಣನ್ ಸ್ಮರಣ ಸಂಸ್ಥೆ, ಹೊಸತು ಮಾಸ ಪತ್ರಿಕೆ ಮತ್ತು ನವಕರ್ನಾಟಕ ಪ್ರಕಾಶನ ಬೆಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಬಲ್ಮಠದ ಬಿಷಪ್ ಜತ್ತನ್ನ ಸಭಾಂಗಣ ಸಹೋದಯದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ದೇಶದ ಸಂವಿಧಾನದಲ್ಲಿ ಕಾರ್ಮಿಕರ ಸಂರಕ್ಷಣೆ ಗೆ ಸಾಕಷ್ಟು ಕಾನೂನುಗಳಿದ್ದರೂ ವಾಸ್ತವದಲ್ಲಿ ಈ ಕಾನೂನುಗಳ ಅನುಷ್ಠಾನಗೊಳ್ಳುತ್ತಿಲ್ಲ. 2014ರಿಂದ 2019ವರೆಗಿನ ಸರಕಾರದ ನೀತಿಯನ್ನು ಗಮನಿಸಿದರೆ ಸಂಸತ್ತಿನಲ್ಲೇ ಕಾರ್ಮಿಕರ ಹಕ್ಕುಗಳ ಮೇಲೆ ಸವಾರಿ ಮಾಡುತ್ತಿರುವಂತೆ ಕಾಣುತ್ತಿದೆ. ಕಾರ್ಮಿಕರು ಕಾರ್ಯನಿರ್ವಹಿಸುತ್ತಿರುವ ಸ್ಥಳಕ್ಕೆ ಸಂಬಂಧಿಸಿ ರೂಪಿಸುತ್ತಿರುವ ನೀತಿ ಕಾರ್ಮಿಕ ಸಾಮಾಜಿಕ ಭದ್ರತಾ ನೀತಿ, ಕಾರ್ಮಿಕರ ಕನಿಷ್ಠ ಕೂಲಿಗೆ ಸಂಬಂಧಿಸಿದ ನೀತಿ ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧ ವಾಗಿದೆ ಎಂದರು.

ದೇಶದಲ್ಲಿ ಶೇ.95ರಷ್ಟು ಕಾರ್ಮಿಕರು ಅಸಂಘಟಿತ ವಲಯದ ಕಾರ್ಮಿಕರಾ ಗಿದ್ದಾರೆ. ಸರಕಾರದ ಹಾಗೂ ಸಾರ್ವಜನಿಕ ವಲಯದ ಬಹುತೇಕ ಉದ್ಯೋಗ ಗಳನ್ನು ಹೊರಗುತ್ತಿಗೆ ನೀಡಲಾಗುತ್ತಿದೆ. ಅವರು ಸರಕಾರಿ ಉದ್ಯೋಗಿಗಳ ಮೂರನೇ ಒಂದರಷ್ಟು ವೇತನವನ್ನು ಪಡೆಯಲು ಸಾದ್ಯವಾಗದ ಪರಿಸ್ಥಿತಿಯನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದವರು ತಿಳಿಸಿದರು.

ಎಐಟಿಯುಸಿ ದೇಶದಲ್ಲಿ ಪ್ರಥಮ ಬಾರಿಗೆ ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಾ ಬಂದಿದೆ. ಜೊತೆಗೆ ದೇಶದಲ್ಲಿ ಪ್ರಥಮ ಬಾರಿಗೆ ಮಾನವ ಹಕ್ಕುಗಳ ಬಗ್ಗೆ ಧ್ವನಿ ಎತ್ತಿದ ಸಂಘಟನೆಯಾಗಿದೆ. ಸ್ವಾತಂತ್ರ ಹೋರಾಟದಲ್ಲಿ ತೊಡಗಿಸಿಕೊಂಡ ಎಐಟಿಯುಸಿ ದೇಶದಲ್ಲಿ ಪ್ರಥಮ ಬಾರಿಗೆ 1921ರಲ್ಲಿ ಪೂರ್ಣ ಸ್ವಾತಂತ್ರ ಬೇಕು ಎಂದು ನಿರ್ಣಯ ಕೈಗೊಂಡು ಹೋರಾಟ ನಡೆಸಿದ ಸಂಘಟನೆ. ಎಂಟು ವರ್ಷದ ಬಳಿಕ ದೇಶ ಮುಂಚೂಣಿಯಲ್ಲಿ ಹೋರಾಟದಲ್ಲಿ ತೊಡಗಿದ್ದ ಸ್ವಾತಂತ್ರ ಹೋರಾಟಗಾರರು ಪೂರ್ಣ ಸ್ವರಾಜ್ಯದ ತೀರ್ಮಾನ ತೆಗೆದುಕೊಂಡರು. ದೇಶದಲ್ಲಿ ಕಾರ್ಮಿಕ ರಕ್ಷಣೆಯ ಕಾನೂನು ಹೋರಾಟದಿಂದ. ಈ ಹೋರಾಟ ಕಾರ್ಮಿಕರೆಲ್ಲರ ಸಂಘಟನೆಯೊಂದಿಗೆ ಮತ್ತೆ ಮುಂದುವರಿಸಬೇಕಾಗಿದೆ ಎಂದು ಅಮರ ಜೀತ್ ಹೇಳಿದರು.

ಕನ್ಹಯ್ಯ ಕುಮಾರ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಘಟಕ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X