Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭವಿಷ್ಯ ನಿರಾಶಾದಾಯಕವಾಗಿದೆ: ಕಾಶ್ಮೀರ...

ಭವಿಷ್ಯ ನಿರಾಶಾದಾಯಕವಾಗಿದೆ: ಕಾಶ್ಮೀರ ಪ್ರವಾಸೋದ್ಯಮ ಕ್ಷೇತ್ರದ ಅಳಲು

ವಾರ್ತಾಭಾರತಿವಾರ್ತಾಭಾರತಿ10 Aug 2019 9:13 PM IST
share
ಭವಿಷ್ಯ ನಿರಾಶಾದಾಯಕವಾಗಿದೆ: ಕಾಶ್ಮೀರ ಪ್ರವಾಸೋದ್ಯಮ ಕ್ಷೇತ್ರದ ಅಳಲು

ಶ್ರೀನಗರ, ಆ.10: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಹಿಂದೆಗೆದುಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಠಿಣ ನಿರ್ಬಂಧಗಳು ಜಾರಿಯಲ್ಲಿವೆಯಾದರೂ ದೇಶವಿದೇಶಗಳಲ್ಲಿರುವ ಕಾಶ್ಮೀರಿಗಳು ಬಕ್ರೀದ್‌ ಗಾಗಿ ತಮ್ಮ ಮನೆಗಳಿಗೆ ಮರಳುತ್ತಿರುವುದರಿಂದ ಶನಿವಾರ ಶ್ರೀನಗರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿಗಳಿಗೆ ಭಾರೀ ಬೇಡಿಕೆಯಿತ್ತು,ಆದರೆ ಮುಂಬರುವ ದಿನಗಳ ಬಗ್ಗೆ ಆತಂಕ ಟ್ಯಾಕ್ಸಿ ನಿರ್ವಾಹಕರಲ್ಲಿ ಉಳಿದುಕೊಂಡಿದೆ.

ಕಾಶ್ಮೀರದಲ್ಲಿ ಸಹಜತೆ ಮರಳುವವರೆಗೆ ಮತ್ತು ಪ್ರವಾಸಿಗಳ ಪುನರಾಗಮನದವರೆಗೆ ತಮ್ಮ ಉದ್ಯಮವು ಕಷ್ಟಗಳನ್ನು ಅನುಭವಿಸಲಿದೆ ಎನ್ನುವುದು ಟ್ಯಾಕ್ಸಿ ನಿರ್ವಾಹಕರು ಮತ್ತು ಪ್ರವಾಸೋದ್ಯಮದ ಇತರ ಪಾಲುದಾರರ ಕಳವಳವಾಗಿದೆ.

ಕೇಂದ್ರದ ನಿರ್ಧಾರ ಪ್ರಕಟಗೊಳ್ಳುವ ಎರಡು ದಿನಗಳ ಮೊದಲು ಆ.2ರಂದು ಅಮರನಾಥ ಯಾತ್ರೆಯನ್ನು ಮೊಟಕುಗೊಳಿಸಿದ್ದ ಜಮ್ಮು-ಕಾಶ್ಮೀರ ಆಡಳಿತವು,ಕಾಶ್ಮೀರ ಕಣಿವೆಯನ್ನು ತೊರೆಯುವಂತೆ ಪ್ರವಾಸಿಗಳಿಗೆ ಸೂಚಿಸಿತ್ತು.

ಪ್ರವಾಸೋದ್ಯಮವು ಕಾಶ್ಮೀರದ ಆರ್ಥಿಕತೆಯ ಬೆನ್ನೆಲುಬಾಗಿದ್ದು,ಪ್ರತಿ ಬಾರಿ ತೀವ್ರ ಹಿನ್ನಡೆಯಾದಾಗಲೂ ಮತ್ತೆ ಪುಟಿದೇಳುವ ಮೂಲಕ ಮೂರೂವರೆ ದಶಕಗಳ ಉಗ್ರವಾದದ ಇತಿಹಾಸದಲ್ಲಿಯೂ ತನ್ನ ಅಸ್ತಿತ್ವನ್ನು ಉಳಿಸಿಕೊಂಡಿದೆ.

ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿ,ಬಾಲಕೋಟ್ ವಾಯುದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನಗಳ ನಡುವೆ ಹೆಚ್ಚಿದ ಉದ್ವಿಗ್ನತೆ,ಸಂಸದೀಯ ಚುನಾವಣೆಗಳಿಗಾಗಿ ಭದ್ರತಾ ಪಡೆಗಳ ಸುಗಮ ರವಾನೆಗಾಗಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದಾರಿಯಲ್ಲಿ ಭದ್ರತಾ ನಿರ್ಬಂಧಗಳಿಂದಾಗಿ ಈ ವರ್ಷ ಪ್ರವಾಸೋದ್ಯಮದ ಹಂಗಾಮು ತಡವಾಗಿ ಆರಂಭಗೊಂಡಿತ್ತು.

ಪ್ರವಾಸಿಗಳ ಹಂಗಾಮು ಮುಗಿದಿದೆ ಮತ್ತು ನಮಗೆ ಮುಂದಿನ ಭವಿಷ್ಯ ನಿರಾಶಾದಾಯಕವಾಗಿ ಕಾಣುತ್ತಿದೆ. ವಿಧಿ 370ರ ರದ್ದತಿಯ ಹಿನ್ನೆಲೆಯಲ್ಲಿ ಕಣಿವೆಯಲ್ಲಿನ ವಾತಾವರಣವನ್ನು ಪರಿಗಣಿಸಿದರೆ ಮುಂದಿನ ವರ್ಷದ ಮಾರ್ಚ್ ವರೆಗೂ ಪ್ರವಾಸೋದ್ಯಮವು ಚೇತರಿಸಿಕೊಳ್ಳುವ ಸಾಧ್ಯತೆಗಳು ಕಂಡು ಬರುತ್ತಿಲ್ಲ ಎಂದು ವಿಮಾನ ನಿಲ್ದಾಣದ ಟ್ಯಾಕ್ಸಿ ನಿರ್ವಾಹಕರ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಅಶ್ರಫ್ ಲೋನೆ ತಿಳಿಸಿದರು. ಸರಕಾರದ ಕ್ರಮಗಳ ಮುನ್ನ ಉತ್ತಮ ಪ್ರವಾಸಿ ಹಂಗಾಮನ್ನು ತಾವು ನಿರೀಕ್ಷಿಸಿದ್ದೆವು ಎಂದರು.

ಕನಿಷ್ಠ ಸ್ಥಿರ ದೂರವಾಣಿಗಳನ್ನಾದರೂ ಪುನರಾರಂಭಿಸಬೇಕು ಮತ್ತು ಟ್ಯಾಕ್ಸಿ ನಿರ್ವಾಹಕರಿಗೆ ಕರ್ಫ್ಯೂ ಪಾಸ್‌ಗಳನ್ನು ವಿತರಿಸಬೇಕು ಎಂದು ಅವರು ಆಗ್ರಹಿಸಿದರು.

ವಿಮಾನ ನಿಲ್ದಾಣದ ಪಾರ್ಕ್‌ನಲ್ಲಿಯ 200ಕ್ಕೂ ಅಧಿಕ ಟ್ಯಾಕ್ಸಿಗಳ ಪೈಕಿ ಶೇ.85ರಷ್ಟು ಟ್ಯಾಕ್ಸಿಗಳು ಬ್ಯಾಂಕ್ ಸಾಲ ಹೊಂದಿದ್ದು,ಕಂತುಗಳನ್ನು ಮರುಪಾವತಿಲೂ ಸಾಧ್ಯವಾಗುತ್ತಿಲ್ಲ ಎಂದರು.

ಉದ್ಯಮದಲ್ಲಿ ಹಾನಿಯ ಬಗ್ಗೆ ಟ್ಯಾಕ್ಸಿ ನಿರ್ವಾಹಕರು ಮಾತ್ರವಲ್ಲ,ಹೋಟೆಲ್‌ಗಳ ಮಾಲಿಕರು,ಹೌಸ್ ಬೋಟ್‌ಗಳ ಮಾಲಿಕರು,ಟೂರ್ ಮತ್ತು ಟ್ರಾವೆಲ್ ಏಜೆಂಟರೂ ಕಳವಳಗಳನ್ನು ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X