Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಜ್: ಅರಫಾ ಬೆಟ್ಟದಲ್ಲಿ ಲಕ್ಷಾಂತರ...

ಹಜ್: ಅರಫಾ ಬೆಟ್ಟದಲ್ಲಿ ಲಕ್ಷಾಂತರ ಮುಸ್ಲಿಮರು

ವಾರ್ತಾಭಾರತಿವಾರ್ತಾಭಾರತಿ10 Aug 2019 9:59 PM IST
share
ಹಜ್: ಅರಫಾ ಬೆಟ್ಟದಲ್ಲಿ ಲಕ್ಷಾಂತರ ಮುಸ್ಲಿಮರು

ಅರಫಾ (ಸೌದಿ ಅರೇಬಿಯ), ಆ. 10: ಹಜ್ ಯಾತ್ರೆಯಲ್ಲಿ ಪಾಲ್ಗೊಂಡಿರುವ ಸುಮಾರು 25 ಲಕ್ಷ ಮುಸ್ಲಿಮರು ಯಾತ್ರೆಯ ಎರಡನೇ ದಿನವಾದ ಶನಿವಾರ ಅರಫಾ ಬೆಟ್ಟಕ್ಕೆ ಆಗಮಿಸಿದ್ದಾರೆ.

ಪುರುಷ ಮತ್ತು ಮಹಿಳಾ ಯಾತ್ರಿಗಳು ದೇವರ ನಾಮ ಪಠಿಸುತ್ತಾ ಬೆಟ್ಟವನ್ನು ಹತ್ತಿದರು.

ಪ್ರವಾದಿ ಮುಹಮ್ಮದರು ತನ್ನ ಕೊನೆಯ ಪ್ರವಚನವನ್ನು ನೀಡಿದ ಬೆಟ್ಟಕ್ಕೆ ಹೆಚ್ಚಿನ ಯಾತ್ರಿಕರು ಶನಿವಾರ ಮುಂಜಾನೆಯೇ ನಡೆದುಕೊಂಡು ಹೋದರು.

ಭೂಮಿ ಮೇಲಿನ ಅತಿ ದೊಡ್ಡ ಧಾರ್ಮಿಕ ಸಮಾವೇಶಗಳ ಪೈಕಿ ಒಂದಾಗಿರುವ ಹಜ್ ಆಚರಣೆಯ ಎರಡನೇ ದಿನವು ಯಾತ್ರಿಗಳಿಗೆ ಅತ್ಯಂತ ಸ್ಮರಣೀಯವಾಗಿದೆ. ಶುಕ್ರವಾರ ರಾತ್ರಿ ಮಿನಾದಲ್ಲಿ ತಂಗಿದ ಯಾತ್ರಿಕರು ಶನಿವಾರ ಸೂರ್ಯೋದಯದ ಬಳಿಕ ಅರಫಾ ಬೆಟ್ಟದತ್ತ ಸಾಗಿದರು.

ರಸ್ತೆಗಳಲ್ಲಿ ಯಾತ್ರಿಕರ ಸಂಚಾರವನ್ನು ನಿಯಂತ್ರಿಸಿದ ಭದ್ರತಾ ಸಿಬ್ಬಂದಿ, ಅವರಿಗೆ ಮಾರ್ಗದರ್ಶನ ನೀಡಿದರು. ವಿವಿಧ ಸರಕಾರ ಸಂಸ್ಥೆಗಳು ಯಾತ್ರಿಗಳಿಗೆ ಆಹಾರ ಮತ್ತು ಔಷಧಗಳನ್ನು ಪೂರೈಸಿದರು.

► ಯಾತ್ರಿಕರ ಮೇಲೆ ಸುರಿದ ಜಡಿ ಮಳೆ

ಶನಿವಾರ ಅರಫಾ ಬೆಟ್ಟದಲ್ಲಿ ಹಜ್‌ನ ಎರಡನೇ ದಿನದ ವಿಧಿ ವಿಧಾನಗಳನ್ನು ಯಾತ್ರಿಕರು ಪೂರೈಸುತ್ತಿದ್ದಂತೆಯೇ, ಭಾರೀ ಮಳೆ ಸುರಿಯಿತು.

ಕೆಲವರು ಆಶ್ರಯಕ್ಕಾಗಿ ಓಡಿದರೆ, ಹಲವರು ಪ್ರಾರ್ಥನೆ ಸಲ್ಲಿಸುವುದಕ್ಕಾಗಿ ರಸ್ತೆಗಳಿಗೆ ಓಡಿದರು.

ಮಳೆ ಸುರಿಯುತ್ತಿರುವಾಗ ಪ್ರಾರ್ಥನೆ ಸಲ್ಲಿಸಿದರೆ ಹೆಚ್ಚಿನ ಪ್ರತಿಫಲ ಸಿಗುತ್ತದೆ ಎಂಬ ನಂಬಿಕೆ ಇಸ್ಲಾಮ್‌ನಲ್ಲಿದೆ.

ಜಡಿ ಮಳೆ ಸುರಿದ ಕೆಲವೇ ನಿಮಿಷಗಳಲ್ಲಿ ರಸ್ತೆಗಳಲ್ಲಿ ಪ್ರವಾಹದ ನೀರು ಹರಿಯಿತು. ರಸ್ತೆಗಳಲ್ಲಿ ಅಲ್ಲಲ್ಲಿ ನೀರು ನಿಂತಿತು ಹಾಗೂ ವಾತಾವರಣ ತಂಪಾಯಿತು.

ಈ ಸಂದರ್ಭದಲ್ಲಿ ಪ್ರವಾಹ ತಲೆದೋರುವ ಸಾಧ್ಯತೆಯಿರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಹಾಗೂ ಲೋಹದ ವಸ್ತುಗಳನ್ನು ಸ್ಪರ್ಶಿಸದಂತೆ ಅಧಿಕಾರಿಗಳು ಯಾತ್ರಿಗಳಿಗೆ ಎಚ್ಚರಿಕೆ ನೀಡಿದರು.

► ಮೂರನೇ ಘಟ್ಟದತ್ತ ಯಾತ್ರಿಕರು

ಶನಿವಾರ ಹಗಲು ಅರಫಾ ಬೆಟ್ಟದಲ್ಲಿ ಕಳೆದ ಬಳಿಕ, ರಾತ್ರಿ ಯಾತ್ರಿಕರು ಹಜ್‌ನ ಮೂರನೇ ಘಟ್ಟದತ್ತ ಸಾಗಿದ್ದಾರೆ.

ಸುಮಾರು 25 ಲಕ್ಷ ಯಾತ್ರಿಕರು ಶನಿವಾರ ರಾತ್ರಿ ಮುಝ್ದಲಿಫದಲ್ಲಿ ಕಳೆಯಲಿದ್ದಾರೆ. ಅವರು ಮಧ್ಯರಾತ್ರಿಯ ಬಳಿಕ, ‘ಸೈತಾನನಿಗೆ ಕಲ್ಲೆಸೆಯುವ’ ವಿಧಿಯಲ್ಲಿ ಪಾಲ್ಗೊಳ್ಳಲು ಮಿನಾಕ್ಕೆ ತೆರಳಲಿದ್ದಾರೆ.

ಮಿನಾದಲ್ಲಿ ಅವರು ಸೈತಾನನ್ನು ಸಂಕೇತಿಸುವ ಗೋಡೆಗೆ ಕಲ್ಲೆಸೆಯಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X