Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರ್ವಾಧಿಕಾರಿಗಳ ಹಿಡಿತದಿಂದ ಲೇಖಕರು...

ಸರ್ವಾಧಿಕಾರಿಗಳ ಹಿಡಿತದಿಂದ ಲೇಖಕರು ಹೊರಬರಬೇಕು: ಡಾ.ನರಹಳ್ಳಿ ಬಾಲಸುಬ್ರಮಣ್ಯ

ವಾರ್ತಾಭಾರತಿವಾರ್ತಾಭಾರತಿ10 Aug 2019 10:19 PM IST
share

ಬೆಂಗಳೂರು, ಆ 10: ಇಂದಿನ ಲೇಖಕರು ಸಾಹಿತ್ಯ ಕ್ಷೇತ್ರದಲ್ಲಿ ಸ್ವಾಯತ್ತ ಪ್ರಜ್ಞೆಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿರುವ ಸರ್ವಾಧಿಕಾರಿಗಳ ಹಿಡಿತದಿಂದ ಹೊರಬರಬೇಕಿದೆ ಎಂದು ಸಾಹಿತಿ ಹಾಗೂ ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಮಣ್ಯ ಹೇಳಿದ್ದಾರೆ.

ಶನಿವಾರ ನಗರದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅಭಿನವ ಪ್ರಕಾಶನದ 25 ನೇ ಬೆಳ್ಳಿ ಬೆಳಕು ಸಂಭ್ರಮಾಚರಣೆಯ ಸಂಬಂಧ ಕನ್ನಡ ಜನಶಕ್ತಿ ಕೇಂದ್ರ ಹಾಗೂ ನರಹಳ್ಳಿ ಅಭಿಮಾನಿಗಳ ಬಳಗ ವತಿಯಿಂದ ಆಯೋಜಿಸಿದ್ದ ಬೆಳ್ಳಿ ಬೆಡಗು ಮಾಲಿಕೆಯ ಎರಡು ಕಂತಿನ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಲೇಖಕರು ನಿಬಂಧನೆ, ಒತ್ತಡಕ್ಕೆ ಒಳಗಾಗದೆ ಸ್ವಾಯತ್ತ ಪ್ರಜ್ಞೆ ಬೆಳೆಸಿಕೊಳ್ಳುವ ಅವಶ್ಯಕತೆ ಇದೆ. ಇಂದಿನ ಲೇಖಕರ ಸ್ವಾಯತ್ತ ಪ್ರಜ್ಞೆಯನ್ನು ಇನ್ಯಾರೋ ನಿಯಂತ್ರಿಸುವಂತಾಗಿದೆ. ಲೇಖಕರಿಗೆ ನಿಬಂಧನೆ, ಒತ್ತಡ ಹೇರಲಾಗುತ್ತಿದೆ. ಇದರಿಂದ ಹೊರಬರುವ ಮೂಲಕ ಸ್ವಂತ ಆಲೋಚನೆಯಿಂದ ಸಾಹಿತ್ಯ ರಚಿಸುವಂತಾಗಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ನಮ್ಮ ನಡುವೆ ಒಟ್ಟಾಗಿ ಓದುವ ಪದ್ಧತಿಯೇ ಮರೆಯಾಗಿದೆ. ವಸಾಹತುಶಾಹಿಯ ಪರಿಣಾಮದಿಂದಾಗಿ ನಮ್ಮಲ್ಲಿನ ಓದುವ ಪದ್ಧತಿ, ಪರಂಪರೆಯನ್ನು ನಾಶ ಮಾಡಿದೆ. ಆಧುನಿಕತೆ ಹಾಗೂ ಪರಂಪರೆಯ ನಡುವೆ ಸಹ್ಯವಾಗಲೇ ಇಲ್ಲ. ಕುವೆಂಪು, ದ.ರಾ.ಬೇಂದ್ರೆ ಅವರ ಜೊತೆಗೆ ಹರಿಹರ, ಪಂಪ, ರಾಘವಾಂಕರನ್ನು ಒಳಗೊಂಡು ಓದುವ ಪ್ರಯತ್ನಗಳೇ ನಡೆಯ ಲಿಲ್ಲ. ಹೀಗಾಗಿ, ನಮಗೆ ಪಸ್ತುತ ಸಮಗ್ರ ಓದು ಅಗತ್ಯವಿದೆ ಎಂದು ಹೇಳಿದರು.

ಇಪ್ಪತ್ತನೆಯ ಶತಮಾನ ಅನೇಕ ಪ್ರಬುದ್ಧ ಲೇಖಕರನ್ನು ಕಂಡಿದೆ. ನವ್ಯ ಕಾವ್ಯಗಳ ಮೂಲಕ ಸಾತ್ಯ ಲೋಕಕ್ಕೆ ಮೆರಗು ತಂದುಕೊಟ್ಟ ಕುವೆಂಪು, ಬೇಂದ್ರೆ, ಕಾರಂತ, ಮಾಸ್ತಿ, ಅನಕೃ, ಶಿವರುದ್ರಪ್ಪ ಸೇರಿದಂತೆ ಅನೇಕ ಲೇಖಕರು ಹಾಗೂ ಸಾತಿಗಳು ಸಾಂಸ್ಕೃತಿಕ, ಸಾಮಾಜಿಕ ಹಾಗೂ ಪರಂಪರೆಯ ಇತಿಹಾಸವನ್ನು ತಮ್ಮ ಕೃತಿಗಳ ಮೂಲಕ ನೀಡಿ ಕನ್ನಡ ಸಾಹಿತ್ಯ ಲೋಕ ಉಜ್ವಲವಾಗಿ ಬೆಳಗಲು ಕಾರಣೀಭೂತರಾಗಿದ್ದಾರೆ ಎಂದು ಬಣ್ಣಿಸಿದರು.

ಕುವೆಂಪು ಅವರನ್ನು ಸಮಗ್ರವಾಗಿ ನೋಡುವ ಮೊದಲ ಪ್ರಯತ್ನವನ್ನು ನನ್ನ ಕೃತಿಯ ಮೂಲಕ ಮಾಡಿದ್ದೇನೆ. ಸಾಹಿತ್ಯಿಕವಾಗಿ ಅಲ್ಲದೆ, ಸಾಂಸ್ಕತಿಕವಾಗಿ ಮಹತ್ವದ ಲೇಖಕರು ಅವರು, ಕನ್ನಡಕ್ಕೆ ನವೋದಯವನ್ನು ತಂದವರು. ಅವರನ್ನು ಬಿಡಿಬಿಡಿಯಾಗಿ ಓದದೇ, ಇಡಿಯಾಗಿ ಸಮಗ್ರ ಸಾಹಿತ್ಯವನ್ನು ಅಧ್ಯಯನ ಮಾಡಿರುವುದು ನನ್ನಲ್ಲಿ ಧನ್ಯತಾಭಾವ ಮೂಡಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಮನುಬಳಿಗಾರ್ ಚಂದ್ರಿಕಾ ಅವರ ‘ಮೋದಾಳಿ’ ನಾಟಕ ಕುರಿತು ಮಾತನಾಡಿ, ದೇಶದಲ್ಲಿ ಮಹಿಳೆಯರ ಶೋಷಣೆ ನಿರಂತರವಾಗಿ ನಡೆಯುತ್ತಲೇ ಬಂದಿದ್ದು, ಇಂದಿಗೂ ಅದು ಮುಂದುವರಿದಿದೆ. ಇಂದೂ ಮಹಿಳೆಯು ಸಮಾನತೆ ಸಾಧಿಸಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ವ್ಯವಸ್ಥಿತವಾಗಿ ಅವರನ್ನು ಶಿಕ್ಷಣದಿಂದ ದೂರವಿಟ್ಟಿದ್ದರು.

ಈ ವೇಳೆ ಚಂದ್ರಿಕಾ ಅವರ ಮೋದಾಳಿ ನಾಟಕ ಹನ್ನೊಂದನೇ ಶತಮಾನದ ಜೈನ ಪುರಾಣದ ವಡ್ಡಾರಾಧನೆಯ ಒಂದು ಎಳೆ. ಸ್ತ್ರೀಯರ ಮೇಲೆ ನಡೆಯುವ ದೌರ್ಜನ್ಯ ಶೋಷಣೆಯ ಬಗ್ಗೆ ನಾಟಕದಲ್ಲಿ ಸಮಗ್ರವಾಗಿ ಬಿಂಬಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಅವರ ‘ಬಾ ಕುವೆಂಪು ದರ್ಶನಕ್ಕೆ’, ಡಾ.ಪಿ.ಚಂದ್ರಿಕಾ ಅವರ ‘ಮೋದಾಳಿ’ ಮತ್ತು ಡಾ.ಓ.ಎಲ್.ನಾಗಭೂಷಣಸ್ವಾಮಿ ಅವರ ‘ಮುಗ್ಧ ಪ್ರಬುದ್ಧ’ ಅನುವಾದ ಕೃತಿಯನ್ನು ಬಿಡುಗಡೆ ಮಾಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X