Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಂದುವರಿದ ಮಳೆ: ಉಳ್ಳಾಲ ನಗರ ಪ್ರದೇಶ...

ಮುಂದುವರಿದ ಮಳೆ: ಉಳ್ಳಾಲ ನಗರ ಪ್ರದೇಶ ಜಲಾವೃತ್ತ

ನಿರಾಶ್ರಿತರಿಗೆ ಗಂಜಿ ಕೇಂದ್ರದ ವ್ಯವಸ್ಥೆ, 150 ಕುಟುಂಬ ಸ್ಥಳಾಂತರ

ವಾರ್ತಾಭಾರತಿವಾರ್ತಾಭಾರತಿ10 Aug 2019 10:42 PM IST
share
ಮುಂದುವರಿದ ಮಳೆ: ಉಳ್ಳಾಲ ನಗರ ಪ್ರದೇಶ ಜಲಾವೃತ್ತ

ಉಳ್ಳಾಲ: ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉಳ್ಳಾಲ ನಗರಸಭ ವ್ಯಾಪ್ತಿಯ ಹಲವು ಮನೆಗಳು ಜಲಾವೃತ್ತವಾಗಿದ್ದು, ನೀರು ಮನೆಯೊಳಗೆ ನುಗ್ಗಿ ಅಪಾರ ಹಾನಿ ಸಂಭವಿಸಿದೆ.

ನಗರ ಸಭಾ ವ್ಯಾಪ್ತಿಯ ಕಲ್ಲಾಪು, ಉಳಿಯ, ಮಂಚಿಲ, ಪಾಂಡೆಲ್‍ಪಕ್ಕ, , ಬಂಡಿಕೊಟ್ಯ ಸೇರಿದಂತೆ ಕೆಲವು ಕಡೆಗಳಲ್ಲಿ ಒಟ್ಟು 150ಕ್ಕೂ ಅಧಿಕ ಮನೆಗಳು ಜಲಾವೃತ್ತವಾಗಿದ್ದು, ಇದರಲ್ಲಿ 30 ಮನೆಗಳು ಅಪಾಯಮಟ್ಟದಲ್ಲಿವೆ. ಈಗಾಗಲೇ 150 ಮನೆಗಳಲ್ಲಿ ವಾಸವಿರುವ ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ. ಈ ಪೈಕಿ ಬಹಳಷ್ಟು ಕುಟುಂಬಗಳು ಅವರವರ ಕುಟುಂಬಸ್ಥರ ಮನೆಗಳಿಗೆ ಸ್ಥಳಾಂತರಗೊಂಡಿದ್ದಾರೆ. ಮನೆ ಅಪಾಯಮಟ್ಟದಲ್ಲಿದ್ದು, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಂಡ  ಕುಟುಂಬಗಳಿಗೆ ಈಗಾಗಲೇ   ಮೂರು ಕಡೆ ಗಂಜಿ  ಕೇಂದ್ರವನ್ನು ತೆರೆಯಲಾಗಿದೆ.

ಉಳ್ಳಾಲದಲ್ಲಿರುವ ಶಾರದಾನಿಕೇತನ, ಉಳ್ಳಾಲ ದರ್ಗಾ ಮತ್ತು ಪೆರ್ಮನ್ನೂರು ಚರ್ಚ್ ನಲ್ಲಿ ಅವರ ಅನುಮತಿ ಪಡೆದು ಸರಕಾರದ ವತಿಯಿಂದ ಗಂಜಿ ಕೇಂದ್ರ ತೆರೆಯಲಾಗಿದೆ. ಆಯಾ ವಾರ್ಡ್‍ನಲ್ಲಿ ಅತಂತ್ರ  ಸ್ಥಿತಿಯಲ್ಲಿರುವ ಕುಟುಂಬಗಳಿಗೆ  ಗಂಜಿ ವ್ಯವಸ್ಥೆ ಮಾಡಲು  ಆಯಾ ವಾರ್ಡ್‍ನ ಕೌನ್ಸಿಲರ್‍ಗೆ ಜವಾಬ್ದಾರಿ ಕೊಡಲಾಗಿದೆ. ಜಲಾವೃತ್ತಗೊಂಡಿರುವ ಮನೆಗಳಲ್ಲಿ ಉಳಕೊಂಡಿರುವ ಕುಟುಂಬಗಳಿಗೆ ಹೊರಗಡೆ ಹೋಗಲು ದೋಣಿ ವ್ಯವಸ್ಥೆ ಮಾಡಲಾಗಿದೆ.

ಸುಮಾರು 150ಕ್ಕೂ ಅಧಿಕ ಮನೆಗಳಿಗೆ  ಹಾನಿಯಾಗಿದ್ದು, ಈ ಬಗ್ಗೆ ನೀರಿನ ಮಟ್ಟ ಕಡಿಮೆಯಾದ ಮೇಲೆ ಪರಿಶೀಲನೆ ಮಾಡಿ ಹಾಣಿಗೊಳಗಾದ ಮನೆಗಳ ಮತ್ತು ಅಂದಾಜು ನಷ್ಟದ ಬಗ್ಗೆ ತಹಶೀಲ್ದಾರ್‍ಗೆ ವರದಿ ಸಲ್ಲಿಸಲಾಗುವುದು ಎಂದು ಉಳ್ಳಾಲ ನಗರಸಭಾ ಗ್ರಾಮಕರಣಿಕ ಪ್ರಮೋದ್ ಪತ್ರಿಕೆಗೆ ತಿಳಿಸಿದ್ದಾರೆ. 

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಶಾಸಕ ಖಾದರ್, ತಹಶೀಲ್ದಾರ್ ಗುರುಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತೊಂದರೆಗೊಳಗಾದ ಕುಟುಂಬಗಳಿಗೆ ಶೀಘ್ರ ಪರಿಹಾರ ವ್ಯವಸ್ಥೆ ಆಗಬೇಕಿದ್ದು, ಇದಕ್ಕಾಗಿ ಕ್ರಮ ಕೈಕೊಳ್ಳಬೇಕಾಗಿದೆ. ತೊಂದರೆಗೊಳಗಾದ ಕುಟುಂಬಗಳ ವರದಿ ಶೀಘ್ರ ನೀಡಿದಲ್ಲಿ ಪರಿಹಾರ  ಶೀಘ್ರ ನೀಡಲಾಗುವುದು ಎಂದು ಭರವಸೆ ನೀಡಿದರು.

ಸೋಮೇಶ್ವರ ಪುರಸಭೆ

ಸೋಮೇಶ್ವರ ಪುರಸಭೆ ವ್ಯಾಪ್ತಿಯಲ್ಲಿ ಶನಿವಾರ ಸುರಿದ ಭಾರೀ ಮಳೆಯಿಂದಾಗಿ ಕಡಲ್ಕೊರೆತ ಮತ್ತೆ ತೀವ್ರತೆ ಪಡೆದಿದೆ. ಉಚ್ಚಿಲ ಬೆಟ್ಟಪಾಡಿಯಲ್ಲಿ ಕಡಲ್ಕೊರೆತ ತೀವ್ರತೆ ಪಡೆದ ಕಾರಣ ಸಮುದ್ರದ ಸಮೀಪ ಇದ್ದ ವಿದ್ಯುತ್ ಕಂಬಗಳನ್ನು ರಸ್ತೆಯ ಇನ್ನೊಂದು ಬದಿಗೆ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಕಡಲ್ಕೊರೆತದಿಂದ ಯಾವುದೇ ಅಪಾಯ ಸಂಭವಿಸದಂತೆ ಸೂಕ್ತ ಕ್ರಮ ಕೈಗೊಳ್ಳುವ ದೃಷ್ಟಿಯಿಂದ ವಿದ್ಯುತ್ ಕಂಬ ತೆರವುಗೊಳಿಸಲು ಮೆಸ್ಕಾಂಗೆ ಸೋಮೇಶ್ವರ ಪುರಸಭೆ ಸೂಚಿಸಿದ್ದು, ಹಿನ್ನೆಲೆಯಲ್ಲಿ ರಸ್ತೆಯ ಇನ್ನೊಂದು  ಬದಿಗೆ ಪರವಾನಿಗೆ ಪಡೆದು ಸ್ಥಳಾಂತರ ಮಾಡುವ ವ್ಯವಸ್ಥೆ ಆಗಿದೆ. ತೊಂದರೆಗೊಳಗಾದ ಕುಟುಂಬದವರಿಗೆ ಸ್ಥಳಾಂತರಗೊಳ್ಳಲು ಇನ್ನೊಂದು ಕಡೆ ಮನೆ ವ್ಯವಸ್ಥೆ ಇದ್ದು, ಅಗತ್ಯ ಬಂದಲ್ಲಿ ಸ್ಥಳಾಂತರಗೊಳಿಸಲು ನಿರ್ಧರಿಸಿದೆ.

ಕಡಲ್ಕೊರೆತದಿಂದ ತೊಂದರೆಗೊಳಗಾದ ಕುಟುಂಬಗಳಿಗೆ, ಮನೆಯಿಂದ ಸುರಕ್ಷಿತ ಜಾಗಕ್ಕೆ ತೆರಳಿದ ಕುಟುಂಬಸ್ಥರಿಗೆ ಬೋವಿಕಾನ ಶಾಲೆಯಲ್ಲಿ ಗಂಜಿ  ಕೇಂದ್ರದ ವ್ಯವಸ್ಥೆ ಮಾಡಲಾಗಿದೆ. ಹಾನಿಗೊಳಗಾದ ಕುಟುಂಬದ ಮನೆಗಳನ್ನು ಗುರುತಿಸಿ ಈ ಬಗ್ಗೆ ವರದಿ ಸಂಗ್ರಹಿಸಿ ತಹಶೀಲ್ದಾರರಿಗೆ ಒಪ್ಪಿಸಿ  ಆ ಕುಟುಂಬಗಳಿಗೆ ಪರಿಹಾರ ಒದಗಿಸುವ ಬಗ್ಗೆ ಸೋಮೇಶ್ವರ ಪರಸಭೆ ಕ್ರಮ ಕೈಗೊಂಡಿದೆ.

ಕೋಟೆಕಾರ್ ಪಟ್ಟಣ ಪಂಚಾಯತ್

ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮುಳ್ಳುಗುಡ್ಡೆ ಎಂಬಲ್ಲಿ ಬಶೀರ್ ಎಂಬವರ ಮನೆ ಜಲಾವೃತ್ತವಾಗಿದ್ದು, ತಕ್ಷಣ ಘಟನಾ ಸ್ಥಳಕ್ಕೆ ತೆರಳಿದ ಅಧಿಕಾರಿಗಳು ಮತ್ತು ಮುಖ್ಯಾಧಿಕಾರಿ ಪೂರ್ಣ ಕಲಾ ವೈ.ಕೆ. ಮತ್ತು ಸದಸ್ಯರು ಭೇಟಿ ನೀಡಿ ಮನೆಯ ಸುತ್ತ ತುಂಬಿದ ನೀರನ್ನು  ಚರಂಡಿ ಮೂಲಕ ಹೊರಗೆ ಹೋಗುವಂತೆ ಮಾಡಿ ಮನೆ ಮತ್ತು ಕುಟುಂಬವನ್ನು ರಕ್ಷಿಸಿದ್ದಾರೆ. ಅಲ್ಲದೇ ತುಂಬಿದ ನೀರು ಮುಳ್ಳುಗುಡ್ಡೆಯಲ್ಲಿ ರಸ್ತೆಯಲ್ಲೇ ಹರಿದು ಹೋದ ಪರಿಣಾಮ ರಸ್ತೆ ಸಂಪೂರ್ಣ ಹಾನಿಯಾಗಿದೆ.

ಪಾನೀರು ಬಳಿ 10 ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು, ಇದರಿಂದ ಯಾವುದೇ ಹಾನಿ ಸಂಭವಿಸಿಲ್ಲ. ಈಗಾಗಲೇ ತೊಂದರೆಗೊಳಗಾದ ಎರಡು ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸುವ ಬಗ್ಗೆ  ಕೋಟೆಕಾರ್ ಪ.ಪಂ. ಕ್ರಮ ಕೈಗೊಂಡಿದೆ.  ಕುತ್ತಾರು ರಾಣಿಪುರ ಚರ್ಚ್ ಬಳಿ ಹೊಸದೋಟ ನಾರಾಯಣ ಎಂಬವರ ಮನೆಗೆ ಬೃಹತ್ ಮರಬಿದ್ದು ಭಾಗಶಃ ಹಾನಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X