Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಿನಂಗಡಿ: 24 ಗಂಟೆಯಿಂದ ಸಂಗಮ...

ಉಪ್ಪಿನಂಗಡಿ: 24 ಗಂಟೆಯಿಂದ ಸಂಗಮ ಸ್ಥಿತಿಯಲ್ಲಿಯೇ ಇರುವ ನದಿಗಳು

ವಾರ್ತಾಭಾರತಿವಾರ್ತಾಭಾರತಿ10 Aug 2019 11:06 PM IST
share
ಉಪ್ಪಿನಂಗಡಿ:  24 ಗಂಟೆಯಿಂದ ಸಂಗಮ ಸ್ಥಿತಿಯಲ್ಲಿಯೇ ಇರುವ ನದಿಗಳು

ಉಪ್ಪಿನಂಗಡಿ: ಶುಕ್ರವಾರ ದೇವಳದ ಮುಂಭಾಗದಲ್ಲಿ ಸಂಗಮಿಸಿದ ಉಭಯ ನದಿಗಳು ಶನಿವಾರವಿಡೀ ಸಂಗಮಿಸಿದ ಸ್ಥಿತಿಯಲ್ಲಿಯೇ ನೀರಿನ ಹರಿವು ಮುಂದುವರೆಸಿದ್ದು, ಆದ್ದರಿಂದ ಶ್ರೀ ಮಹಾಕಾಳಿ ಅಮ್ಮನವರಿಗೆ ಶುಕ್ರವಾರ ರಾತ್ರಿ, ಶನಿವಾರ ಬೆಳಗ್ಗೆ ಮತ್ತು ಮಧ್ಯಾಹ್ನದ ಪೂಜೆಯನ್ನು ಅರ್ಚಕರು ದೋಣಿಯಲ್ಲಿ ತೆರಳಿ ನೆರವೇರಿಸಿದರು.

1974ರ ದೊಡ್ಡ ನೆರೆ ಬಂದ ಬಳಿಕ ಶ್ರೀ ದೇವರಿಗೆ ದೋಣಿಯಲ್ಲಿ ತೆರಳಿ ಪೂಜೆ ಸಲ್ಲಿಸಬೇಕಾದ ಅನಿವಾರ್ಯತೆ ಎದುರಾಗಿದ್ದು ಇದೇ ಮೊದಲು ಎಂದು ಸ್ಥಳೀಯರು ತಿಳಿಸಿದ್ದಾರೆ.

ನೇತ್ರಾವತಿ- ಕುಮಾರಧಾರ ನದಿಗಳು ಶುಕ್ರವಾರ ಉಕ್ಕೇರಿ ಹರಿದಿದ್ದು,  ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಎಡ ಹಾಗೂ ಬಲ ಭಾಗದಿಂದ ಬಂದ ಎರಡೂ ನದಿಗಳು ರಾತ್ರಿ ಏಳು ಗಂಟೆಗೆ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಮುಂಭಾಗದಲ್ಲಿ ಒಂದಕ್ಕೊಂದು ಸಂಧಿಸಿ, ಸಂಗಮ ನಡೆದಿತ್ತು. ಹೀಗೆ ನಡೆದ ಸಂಗಮ ಶನಿವಾರ ರಾತ್ರಿ 7ಗಂಟೆಯಾದರೂ ಇಳಿದಿಲ್ಲ. ಸಂಗಮಿಸಿದ  ಸ್ಥಿತಿಯಲ್ಲಿಯೇ ನೀರಿನ ಹರಿವು ಮುಂದುವರೆದಿತ್ತು.

ಈ ಹಿಂದೆ ನದಿಗಳು ಸಂಗಮವಾದರೆ ಕೆಲ ತಾಸುಗಳಲ್ಲೇ ನೆರೆ ನೀರು ಇಳಿದುಹೋಗುತ್ತಿತ್ತು. ಆದರೆ ಈ ಬಾರಿ ಶನಿವಾರ ನೇತ್ರಾವತಿಯ ಹರಿಯುವಿಕೆ ಶಾಂತವಾಗಿದ್ದರೂ, ಕುಮಾರಧಾರ ನದಿಯ ಹರಿವಿನಲ್ಲಿ ಭಾರೀ ಹೆಚ್ಚಳವಾದ ಹಿನ್ನೆಲೆಯಲ್ಲಿ ನದಿಗಳ ಸಹಜ ಸಂಗಮ ಸ್ಥಳದಲ್ಲಿ ನೇತ್ರಾವತಿ ನದಿಯ ಹರಿಯುವಿಕೆಗೆ ಕುಮಾರಧಾರಾ ನದಿಯ ನೀರಿನ ಹರಿವು ತಡೆಯೊಡ್ಡಿದ ಪರಿಣಾಮ ಉಪ್ಪಿನಂಗಡಿಯ ಸಂಗಮ ಸ್ಥಿತಿ ಶನಿವಾರವೂ ಮುಂದುವರೆದಿತ್ತು.

ಈ ಬಗ್ಗೆ ಮಾಹಿತಿ ನೀಡಿದ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ವ್ಯವಸ್ಥಾಪಕ ವೆಂಕಟೇಶ್ ಭಟ್, ನೆರೆಯಿಂದ ಶ್ರೀ ಮಹಾಕಾಳಿ ದೇವಾಲಯ ಸುತ್ತಲೂ ಜಲಾವೃತವಾಗಿದ್ದು, ಇಲ್ಲಿಗೆ ನಡೆದುಕೊಂಡು ತೆರಳಲು ಸಾಧ್ಯವಾಗದ ಕಾರಣ ಶ್ರೀ ಮಹಾಕಾಳಿ ಅಮ್ಮನವರಿಗೆ ಶುಕ್ರವಾರ ರಾತ್ರಿ, ಶನಿವಾರ ಬೆಳಗ್ಗೆ ಮತ್ತು ಮಧ್ಯಾಹ್ನದ ಪೂಜೆಯನ್ನು ಅರ್ಚಕರು ದೋಣಿಯಲ್ಲಿ ತೆರಳಿ ನೆರವೇರಿಸಿದರು. 1974ರಲ್ಲಿ ಬಂದ ದೊಡ್ಡ ನೆರೆಯ ಬಳಿಕ ಶ್ರೀ ದೇವರಿಗೆ ದೋಣಿಯಲ್ಲಿ ತೆರಳಿ ಪೂಜೆ ಸಲ್ಲಿಸಿರುವುದು ಇದೇ ಮೊದಲು ಎಂದು ತಿಳಿಸಿದ್ದಾರೆ.

1974ರ ದೊಡ್ಡ ನೆರೆ: ಲಭ್ಯ ದಾಖಲೆ ಪ್ರಕಾರ 26.7.1974ರಂದು ಉಪ್ಪಿನಂಗಡಿಯಲ್ಲಿ ಅತೀ ದೊಡ್ಡ ನೆರೆ ಬಂದಿತ್ತು. ಈ ಸಂದರ್ಭ ಸಂಗಮವಾಗಿತ್ತು. ಆ ಬಳಿಕದ ದೊಡ್ಡ ನೆರೆ ಈ ಬಾರಿಯದ್ದಾಗಿದೆ. ಅದಲ್ಲದೆ, 27.8.1997, 13.8.2008 ಹಾಗೂ 18.7.09 ಹಾಗೂ 2013ರಂದು ಉಪ್ಪಿನಂಗಡಿಯಲ್ಲಿ ಸಂಗಮವಾಗಿತ್ತು. 2018 ರಂದು ಆ. 14 ಮತ್ತು 16ರಂದು 2018ರಲ್ಲಿ ಆ 14ರಂದು ಮತ್ತು ಆ.16ರಂದು ಸಂಗಮವಾಗಿತ್ತು. ಲಭ್ಯ ಇತಿಹಾಸದ ಪ್ರಕಾರ ಒಂದೇ ವರ್ಷದಲ್ಲಿ ಎರಡು ಬಾರಿ ಸಂಗಮವಾಗುವುದು ಇದೇ ಪ್ರಥಮವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X