Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂದು ಭಾರತ-ವೆಸ್ಟ್ಇಂಡೀಸ್ ಎರಡನೇ ಏಕದಿನ...

ಇಂದು ಭಾರತ-ವೆಸ್ಟ್ಇಂಡೀಸ್ ಎರಡನೇ ಏಕದಿನ ಪಂದ್ಯ

ವಾರ್ತಾಭಾರತಿವಾರ್ತಾಭಾರತಿ10 Aug 2019 11:13 PM IST
share
ಇಂದು ಭಾರತ-ವೆಸ್ಟ್ಇಂಡೀಸ್ ಎರಡನೇ ಏಕದಿನ ಪಂದ್ಯ

ಪೋರ್ಟ್ ಆಫ್ ಸ್ಪೇನ್, ಆ.10: ಭಾರತ ಮತ್ತು ವೆಸ್ಟ್‌ಇಂಡೀಸ್ ತಂಡಗಳ ನಡುವೆ ಎರಡನೇ ಏಕದಿನ ಅಂತರ್‌ರಾಷ್ಟ್ರೀಯ ಪಂದ್ಯ ರವಿವಾರ ನಡೆಯಲಿದೆ.

 ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಕೇವಲ 13 ಓವರ್‌ಗಳ ಆಟ ಸಾಧ್ಯವಾಗಿತ್ತು. ಎರಡನೇ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ದೂರವಾಗಿದೆ. ಈ ಮೊದಲು ನಡೆದ ಟ್ವೆಂಟಿ-20 ಸರಣಿಯನ್ನು ಭಾರತ 3-0 ಅಂತರದಲ್ಲಿ ವಶಪಡಿಸಿಕೊಂಡಿತ್ತು. ಶ್ರೇಯಸ್ ಅಯ್ಯರ್ ಅವಕಾಶಕ್ಕಾಗಿ ಎದುರು ನೋಡುತ್ತಿದ್ದಾರೆ. ತಂಡದ ನಾಲ್ಕನೇ ಕ್ರಮಾಂಕ ಖಾಲಿಯಾಗಿದ್ದು, ಅಯ್ಯರ್ ತೆರವಾಗಿರುವ ಸ್ಥಾನವನ್ನು ತುಂಬುವ ವಿಶ್ವಾಸದಲ್ಲಿದ್ದಾರೆ.

ಅಯ್ಯರ್ ಟ್ವೆಂಟಿ-20 ಪಂದ್ಯಗಳಲ್ಲಿ ಆಡಿರಲಿಲ್ಲ. ಮೊದಲ ಏಕದಿನ ತಂಡದ ಅಂತಿಮ ಹನ್ನೊಂದರ ಬಳಗದಲ್ಲಿದ್ದರೂ, ಆಡುವ ಅವಕಾಶ ಸಿಕ್ಕಿರಲಿಲ್ಲ. ಆದರೆ ಅವರಿಗೆ ಕೇವಲ 2 ಪಂದ್ಯಗಳಲ್ಲಿ ಉತ್ತಮವಾಗಿ ಆಡಿದ ತಕ್ಷಣ ತನ್ನ ಸ್ಥಾನವನ್ನು ಭದ್ರಪಡಿಸಲು ಸಾಧ್ಯವಿಲ್ಲ. ಇನ್ನೂ ಹಲವು ಪಂದ್ಯಗಳಲ್ಲಿ ಚೆನ್ನಾಗಿ ಆಡಬೇಕಿದೆ.

     ಈಗಾಗಲೇ ವೆಸ್ಟ್‌ಇಂಡೀಸ್‌ನಲ್ಲಿ ನಡೆದ ವೆಸ್ಟ್ ಇಂಡೀಸ್ ’ಎ ತಂಡದ ವಿರುದ್ಧದ ಸರಣಿಯಲ್ಲಿ ಭಾರತ ಎ’ ತಂಡದಲ್ಲಿ ಆಡಿದ್ದ ಅಯ್ಯರ್ ಎರಡು ಅರ್ಧಶತಕಗಳನ್ನು ಸಿಡಿಸಿದ್ದರು. ವಿಶ್ವಕಪ್‌ನ ವೇಳೆ ಗಾಯಗೊಂಡು ಹೊರಗುಳಿದಿದ್ದ ಶಿಖರ್ ಧವನ್ ತಂಡಕ್ಕೆ ವಾಪಸಾಗಿದ್ದಾರೆ. ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಧವನ್ ಮತ್ತು ರೋಹಿತ್ ಶರ್ಮಾ ಇವರಲ್ಲಿ ಯಾರಾದರು ಒಬ್ಬರು ಗಾಯದಿಂದ ಅಥವಾ ಇತರ ಯಾವುದಾದರೂ ಕಾರಣದಿಂದ ಹೊರಗುಳಿದರೆ ಲೋಕೇಶ್ ರಾಹುಲ್ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಕಣಕ್ಕಿಳಿಯಲಿದ್ದಾರೆ. ಕೇದಾರ್ ಜಾಧವ್‌ಗೂ ಈ ಸರಣಿ ಅತ್ಯಂತ ಮಹತ್ವದ್ದಾಗಿದೆ. ಯುವ ಆಟಗಾರ ಶುಭಮನ್ ಗಿಲ್ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಅವರು ವಿಂಡೀಸ್ ‘ಎ ವಿರುದ್ಧ ಮೂರನೇ ಹಾಗೂ ಅಂತಿಮ ಅನಧಿಕೃತ ಟೆಸ್ಟ್‌ನಲ್ಲಿ ದ್ವಿಶತಕ ದಾಖಲಿಸಿದ್ದರು.ಅವರು ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜ ಅಂತಿಮ ಹನ್ನೊಂದರ ಬಳಗದಲ್ಲಿ ಆಡಲಿದ್ದಾರೆ. ಆದರೆ ಅವರ ಸೇವೆ ಎಷ್ಟರ ಮಟ್ಟಿಗೆ ತಂಡ ಕ್ಕೆ ಉಪಯುಕ್ತವಾಗಲಿದೆ ಎನ್ನುವುದನ್ನು ಕಾದು ನೋಡಬೇಕಾಗಿದೆ.

  ಒಂದು ವೇಳೆ ಭುವನೇಶ್ವರ ಕುಮಾರ್ ಅವರಿಗೆ ವಿಶ್ರಾಂತಿ ನೀಡಿದರೆ ನವದೀಪ್ ಸೈನಿ ಅವಕಾಶ ಪಡೆಯಲಿದ್ದಾರೆ. ಹೆಚ್ಚುವರಿ ಆಗಿ ಸ್ಪಿನ್ನರ್ ಆಗಿ ಯಜುವೇಂದ್ರ ಚಹಾಲ್ ಅವರನ್ನು ಕಣಕ್ಕಿಳಿಸಿದರೆ ವೇಗಿ ಖಲೀಲ್ ಅಹ್ಮದ್ ಅಂತಿಮ ಹನ್ನೊಂದರ ಬಳಗದಿಂದ ಹೊರಗುಳಿಯಬೇಕಾಗುತ್ತದೆ.

► ಭಾರತ: ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ರವೀಂದ್ರ ಜಡೇಜ, ಶಿಖರ್ ಧವನ್, ಭುವನೇಶ್ವರ ಕುಮಾರ್, ಕೇದಾರ್ ಜಾಧವ್, ಮುಹಮ್ಮದ್ ಶಮಿ, ಕುಲದೀಪ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿಕೆಟ್ ಕೀಪರ್), ಖಲೀಲ್ ಅಹ್ಮದ್, ಮನೀಷ್ ಪಾಂಡೆ, ಯಜುವೇಂದ್ರ ಚಹಾಲ್, ಲೋಕೇಶ್ ರಾಹುಲ್ , ನವ್‌ದೀಪ್ ಸೈನಿ.

► ವೆಸ್ಟ್‌ಇಂಡೀಸ್: ಜೇಸನ್ ಹೋಲ್ಡರ್(ನಾಯಕ), ಕ್ರಿಸ್ ಗೇಲ್, ಕೇಮರ್ ರೋಚ್, ಕಾರ್ಲೊಸ್ ಬ್ರಾಥ್‌ವೇಟ್, ಎವಿನ್ ಲೆವಿಸ್, ಶೆಲ್ಡಾನ್ ಕೊಟ್ರೆಲ್, ನಿಕೊಲಾಸ್ ಪೂರನ್, ಫ್ಯಾಬಿಯನ್ ಆ್ಯಲೆನ್, ಶಿಮ್ರಾನ್ ಹೆಟ್ಮೆಯರ್, ಶಾಹಿ ಹೋಪ್(ವಿಕೆಟ್ ಕೀಪರ್), ರೋಸ್ಟನ್ ಚೇಸ್, ಜೋನ್ ಕ್ಯಾಂಪ್‌ಬೆಲ್, ಕೆಮೊ ಪಾಲ್ , ಒಶಾನೆ ಥಾಮಸ್.

►ಪಂದ್ಯದ ಸಮಯ: ರಾತ್ರಿ 7:00 ಗಂಟೆಗೆ ಆರಂಭ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X