Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಐಟಿ-ಬಿ ಘಟಿಕೋತ್ಸವದಲ್ಲಿ ಹುಸಿಬಾಂಬ್...

ಐಐಟಿ-ಬಿ ಘಟಿಕೋತ್ಸವದಲ್ಲಿ ಹುಸಿಬಾಂಬ್ ಸಿಡಿಸಿದ ಕೇಂದ್ರ ಸಚಿವ ನಿಶಾಂಕ್ !

ವಾರ್ತಾಭಾರತಿವಾರ್ತಾಭಾರತಿ11 Aug 2019 9:44 AM IST
share
ಐಐಟಿ-ಬಿ ಘಟಿಕೋತ್ಸವದಲ್ಲಿ ಹುಸಿಬಾಂಬ್ ಸಿಡಿಸಿದ ಕೇಂದ್ರ ಸಚಿವ ನಿಶಾಂಕ್ !

ಮುಂಬೈ: ಸಂಸ್ಕೃತದ ಬಗೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಸುಳ್ಳು ಮಾಹಿತಿಯನ್ನು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ ಪ್ರಸಂಗ ನಡೆದಿದೆ.

ಅದು ಕೂಡಾ ಮುಂಬೈ ಐಐಟಿ ಪದವಿ ಪ್ರದಾನ ಸಮಾರಂಭದಲ್ಲಿ !

"ಕಂಪ್ಯೂಟರ್ ಪ್ರೋಗ್ರಾಮಿಂಗ್‌ಗೆ ಸಂಸ್ಕೃತ ಅತ್ಯಂತ ಸೂಕ್ತ ಭಾಷೆ ಎನ್ನುವುದು ನಾಸಾ ವಿಜ್ಞಾನಿಗಳ ಅಭಿಮತ" ಎಂದು ಶನಿವಾರ ಮುಂಬೈ ಐಐಟಿಯ 57ನೇ ಘಟಿಕೋತ್ಸವ ಭಾಷಣದಲ್ಲಿ ನಿಶಾಂಕ್ ಈ ಅಂಶ ಉಲ್ಲೇಖಿಸಿದರು.

ಸದ್ಯೋಭವಿಷ್ಯದಲ್ಲಿ ಕಂಪ್ಯೂಟರ್‌ಗಳು ಮಾತನಾಡಬೇಕಾದರೆ, ಸಂಸ್ಕೃತದ ಬಲದಿಂದಷ್ಟೇ ಹಾಗೆ ಮಾಡಲು ಸಾಧ್ಯ; ಇಲ್ಲದಿದ್ದರೆ ಕಂಪ್ಯೂಟರ್‌ಗಳು ಕ್ರ್ಯಾಷ್ ಆಗುತ್ತವೆ; ಏಕೆಂದರೆ ಸಂಸ್ಕೃತ ವೈಜಾನಿಕ ಭಾಷೆ" ಎಂದು ಸಚಿವರು ನುಡಿದರು.

ಐಐಟಿ ವಿದ್ಯಾರ್ಥಿಗಳ ಪ್ರಕಾರ, ಸಚಿವರು ಉಲ್ಲೇಖಿಸಿದ್ದು ಹುಸಿ ಮಾಹಿತಿ. ನಾಸಾದ "ಮಿಷನ್ ಸಂಸ್ಕೃತ" ಎಂಬ ಬರಹ ಇಂಟರ್‌ನೆಟ್‌ನಲ್ಲಿ ಹಲವು ವರ್ಷಗಳಿಂದ ವೈರಲ್ ಆಗಿದೆ. ಈ ಮಾಹಿತಿಯನ್ನು ಸಚಿವರು ತಮ್ಮ ಭಾಷಣ ದಲ್ಲಿ ಉಲ್ಲೇಖಿಸಿದ್ದಾರೆ. ಆದರೆ ವಾಸ್ತವವಾಗಿ ಇದಕ್ಕೆ ಯಾವುದೇ ಆಧಾರ ಇಲ್ಲ.

ಸಾಮಾಜಿಕ ಜಾಲತಾಣಗಳಲ್ಲಿ ಕೂಡಾ ಸಚಿವರ ಭಾಷಣ ತಮಾಷೆಯ ವಸ್ತುವಾಗಿದೆ. "ಸಚಿವರು ಭಾಷಣ ಮಾಡುವ ಮುನ್ನ ಸತ್ಯಾಂಶಗಳನ್ನು ಪರಿಶೀಲಿಸಿ ದೃಢೀಕರಿಸಲು ಇದು ಸಕಾಲ" ಎಂದು ವಿದ್ಯಾರ್ಥಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

"ಐಐಟಿ-ಬಿ ಘಟಿಕೋತ್ಸವದಲ್ಲಿ ನಿಶಾಂಕ್ ಅವರು ಪೋರ್ಟೆಲ್ ಸತ್ಯದ ಬಾಂಬ್ ಸಿಡಿಸಿದ್ದಾರೆ; ವೇದಕಾಲದಲ್ಲಿ ಸಾಧುಗಳು ಬಾಹ್ಯಾಕಾಶಯಾನ ಸಂಶೋಧಿಸಿದ್ದರು. ನಾಸಾ ಅಧಿಕೃತವಾಗಿ ಇದನ್ನು ಒಪ್ಪಿಕೊಂಡಿದೆ" ಎಂದು ಮತ್ತೊಂದು ಪೋಸ್ಟ್‌ನಲ್ಲಿ ವ್ಯಂಗ್ಯ ವ್ಯಕ್ತವಾಗಿದೆ.

ಭಾರತೀಯ ಶಿಕ್ಷಣದ ಗತವೈಭವ ಮರುಕಳಿಸಬೇಕು ಎಂದೂ ಸಚಿವರು ಆಶಿಸಿದ್ದಾರೆ. "ಇಡೀ ವಿಶ್ವದಲ್ಲಿ ಏನೂ ಇಲ್ಲದಿದ್ದಾಗ ನಮ್ಮಲ್ಲಿ ತಕ್ಷಶಿಲೆ, ನಳಂದ ಮತ್ತು ವಿಕ್ರಮಶಿಲೆಯಂಥ ಸಂಸ್ಥೆಗಳಿದ್ದವು; ಇವು ಜ್ಞಾನ ಹಾಗೂ ವಿಜ್ಞಾನ ಮೂಲಗಳು" ಎಂದು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X