Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋಉತ್ಪನ್ನಗಳ ಸಂಶೋಧನೆಗೆ ಆರ್ಥಿಕ ಅಡಚಣೆ:...

ಗೋಉತ್ಪನ್ನಗಳ ಸಂಶೋಧನೆಗೆ ಆರ್ಥಿಕ ಅಡಚಣೆ: ಪ್ರಗತಿ ಕಾಣದ ಕೇಂದ್ರದ ‘ಪಂಚಗವ್ಯ’ ಯೋಜನೆ

ವಾರ್ತಾಭಾರತಿವಾರ್ತಾಭಾರತಿ11 Aug 2019 9:19 PM IST
share
ಗೋಉತ್ಪನ್ನಗಳ ಸಂಶೋಧನೆಗೆ ಆರ್ಥಿಕ ಅಡಚಣೆ: ಪ್ರಗತಿ ಕಾಣದ ಕೇಂದ್ರದ ‘ಪಂಚಗವ್ಯ’ ಯೋಜನೆ

 ಹೊಸದಿಲ್ಲಿ,ಆ.11: ಗೋ ಮೂತ್ರ ಸೇರಿದಂತೆ ಗೋಉತ್ಪನ್ನಗಳ ಕುರಿತು ವೈಜ್ಞಾನಿಕ ಸಂಶೋಧನೆ ನಡೆಸುವ ಉದ್ದೇಶದಿಂದ ಎರಡು ವರ್ಷಗಳ ಹಿಂದೆ ಕೇಂದ್ರ ಸರಕಾರ ಆರಂಭಿಸಿರುವ ಮಹತ್ವಾಕಾಂಕ್ಷಿ ಯೋಜನೆ ‘ಪಂಚಗವ್ಯ’ ಈವರೆಗೆ ಯಾವುದೇ ಪ್ರಗತಿಯನ್ನು ಸಾಧಿಸಿಲ್ಲ. ಈ ಯೋಜನೆಗಾಗಿ 100 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದ್ದು, ನಾಲ್ಕು ಸಚಿವಾಲಯಗಳು ಒಟ್ಟಾಗಿ ಅದನ್ನು ಮಂಜೂರು ಮಾಡಬೇಕಾಗಿತ್ತು. ಆದರೆ ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವಾಲಯವು ಕೇವಲ 30 ಕೋಟಿರೂ. ಮಾತ್ರ ಮಂಜೂರು ಮಾಡಿದೆಯೆಂದು ದಿಲ್ಲಿ ಐಐಟಿಯ ಗ್ರಾಮೀಣ ಅಭಿವೃದ್ಧಿ ಹಾಗೂ ತಂತ್ರಜ್ಞಾನ ಕೇಂದ್ರದ ವರಿಷ್ಠ ಹಾಗೂ ಪಂಚಗವ್ಯ ಯೋಜನೆಯ ಸಂಶೋಧನೆ ಹಾಗೂ ವೈಜ್ಞಾನಿಕ ವೌಲ್ಯೀಕರಣ ಕುರಿತ ಸಂಚಾಲಕ ವಿ.ಕೆ. ವಿಜಯ್ ತಿಳಿಸಿದ್ದಾರೆ.

ಪಂಚಗವ್ಯ ಯೋಜನೆಯಲ್ಲಿ ಕೇಂದ್ರ ಕೃಷಿ ಸಚಿವಾಲಯ, ನವೀಕರಣಯೋಗ್ಯ  ಇಂಧನ, ಸಚಿವಾಲಯ, ಆಯುಶ್ ಸಚಿವಾಲಯ ಹಾಗೂ ಮಧ್ಯಮ, ಸಣ್ಣ ಹಾಗೂ ಕಿರು ಉದ್ಯಮಗಳ ಸಚಿವಾಲಯವು ಪಾಲ್ಗೊಂಡಿವೆಯಾದರೂ, ತಮ್ಮ ಪಾಲಿನ ಹಣವನ್ನು ಅವು ಇನ್ನಷ್ಟೇ ಮಂಜೂರುಗೊಳಿಸಬೇಕಾಗಿದೆಯೆಂದು ವಿಜಯ್ ತಿಳಿಸಿದರು.

‘‘ಈ ಯೋಜನೆಯಲ್ಲಿ ಯಾವುದೇ ಪ್ರಗತಿಯುಂಟಾಗಿಲ್ಲ. ಇದೀಗ ಗಿರಿರಾಜ್‌ಸಿಂಗ್ ನೇತೃತ್ವದಲ್ಲಿ ನೂತನ ಸಚಿವಾಲಯ (ಪಶುಸಂಗೋಪನೆ,ಡೈರಿ ಹಾಗೂ ಮೀನುಗಾರಿಕೆ) ಕಾರ್ಯಾರಂಭಿಸಿದೆ. ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆಂದು ನಾನು ಭಾವಿಸುತ್ತೇನೆ’ ಎಂದವರು ಹೇಳಿದರು.

  ‘‘ಈ ಯೋಜನೆಗಾಗಿ ನಾವು 100 ಕೋಟಿ ರೂ. ನಿಗದಿಪಡಿಸಿದ್ದೇವೆ. ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯು 30 ಕೋಟಿ ರೂ. ಅನುಮೋದನೆ ನೀಡಿದೆ. ಆದರೆ ಇತರ ಸಚಿವಾಲಯಗಳು ನಿಧಿಗಳನ್ನು ಬಿಡುಗಡೆಗೊಳಿಸದೆ ಹೋದಲ್ಲಿ , ಅದು ಅನುಮೋದನೆ ನೀಡಲಾರದು. ಎಲ್ಲಾ ಸಚಿವಾಲಯಗಳು ಸಮಾನವಾಗಿ ದೇಣಿಗೆ ನೀಡಬೇಕಾಗಿದೆ ’’ ಎಂದು ವಿಜಯ್ ಹೇಳಿದರು.

    2017ರ ಎಪ್ರಿಲ್‌ನಲ್ಲಿ ಕೇಂದ್ರ ಸರಕಾರವು ಗೋಮೂತ್ರ ಸೇರಿದಂತೆ ಗೋ ಉತ್ಪನ್ನಗಳ ವೈಜ್ಞಾನಿಕ ಮೌಲ್ಯೀಕರಣವನ್ನು ನಡೆಸಲು ಆರೆಸ್ಸೆಸ್ ಹಾಗೂ ವಿಎಚ್‌ಪಿ ಜೊತೆ ಸಂಪರ್ಕ ಹೊಂದಿರುವ ಮೂವರು ಸದಸ್ಯರ ಸಮಿತಿಯನ್ನು ಸ್ಥಾಪಿಸಿತ್ತು.

 ಪೌಷ್ಟಿಕತೆ, ಆರೋಗ್ಯ ಹಾಗೂ ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗೋವಿನ ಸಗಣಿ, ಗೋಮೂತ್ರ, ಹಾಲು, ಮೊಸರು ಹಾಗೂ ತುಪ್ಪ ಇವುಗಳ ಸಮ್ಮಿಶ್ರಣವಾದ ಪಂಚಗವ್ಯದ ವೈಜ್ಞಾನಿಕ ಮೌಲ್ಯೀಕರಣವನ್ನು ನಡೆಸುವ ಉದ್ದೇಶದಿಂದ ವಿವಿಧ ಯೋಜನೆಗಳನ್ನು ರೂಪಿಸುವುದಕ್ಕಾಗಿ ವಿಜ್ಞಾನ ಹಾಗೂ ತಂತ್ರಜ್ಞಾನ ಖಾತೆ ಸಚಿವರಾಗಿದ್ದ ಹರ್ಷವರ್ಧನ್ ನೇತತ್ವದಲ್ಲಿ ಸಮಿತಿಯ ರಚನೆಯಾಗಿತ್ತು.

 ಈ ಸಮಿತಿಯಲ್ಲಿ ಆರೆಸ್ಸೆಸ್ ಹಾಗೂ ವಿಶ್ವಹಿಂದೂಪರಿಷತ್‌ನ ಸಹಸಂಘಟನೆಗಳಾದ ವಿಜ್ಞ್ಞಾನ್ ಭಾರತಿ ಹಾಗೂ ಗೋ-ವಿಜ್ಞಾನ ಅನುಸಂಧಾನ ಕೇಂದ್ರದ ಮೂವರು ಸದಸ್ರು ಕೂಡಾ ಒಳಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X