Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾ ಬೆಂಬಲದೊಂದಿಗೆ ಭದ್ರತಾ ಮಂಡಳಿಯಲ್ಲಿ...

ಚೀನಾ ಬೆಂಬಲದೊಂದಿಗೆ ಭದ್ರತಾ ಮಂಡಳಿಯಲ್ಲಿ ಪ್ರಶ್ನೆ: ಪಾಕ್

ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿ

ವಾರ್ತಾಭಾರತಿವಾರ್ತಾಭಾರತಿ11 Aug 2019 10:11 PM IST
share
ಚೀನಾ ಬೆಂಬಲದೊಂದಿಗೆ ಭದ್ರತಾ ಮಂಡಳಿಯಲ್ಲಿ ಪ್ರಶ್ನೆ: ಪಾಕ್

ಇಸ್ಲಾಮಾಬಾದ್, ಆ. 11: ಜಮ್ಮು ಮತ್ತು ಕಾಶ್ಮೀರದ ಸ್ವಾಯತ್ತೆಯನ್ನು ರದ್ದುಪಡಿಸಿ, ರಾಜ್ಯವನ್ನು ಎರಡು ಭಾಗಗಳಾಗಿ ವಿಭಜಿಸುವ ಭಾರತದ ಕ್ರಮವನ್ನು ಖಂಡಿಸಿ ಚೀನಾದ ಬೆಂಬಲದೊಂದಿಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ನಿರ್ಣಯವೊಂದನ್ನು ಮಂಡಿಸುವುದಾಗಿ ಪಾಕಿಸ್ತಾನ ಶನಿವಾರ ಹೇಳಿದೆ ಎಂದು ‘ಡಾನ್’ ವರದಿ ಮಾಡಿದೆ.

‘‘ಈ ವಿಷಯವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಒಯ್ಯಲು ನಾವು ಬಯಸಿದ್ದೇವೆ ಎಂದು ಚೀನಾಕ್ಕೆ ನಾನು ತಿಳಿಸಿದ್ದೇನೆ’’ ಎಂದು ಇಸ್ಲಾಮಾಬಾದ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಾಕಿಸ್ತಾನದ ವಿದೇಶ ಸಚಿವ ಶಾ ಮಹ್ಮೂದ್ ಕುರೇಶಿ ಹೇಳಿದರು.

ಚೀನಾ ವಿದೇಶ ಸಚಿವ ವಾಂಗ್ ಯಿ ಅವರನ್ನು ಭೇಟಿ ಮಾಡುವುದಕ್ಕಾಗಿ ಬೀಜಿಂಗ್‌ ಗೆ ಕ್ಷಿಪ್ರ ಪ್ರವಾಸ ಕೈಗೊಂಡ ಒಂದು ದಿನದ ಬಳಿಕ ಪಾಕ್ ವಿದೇಶ ಸಚಿವ ಈ ವಿಷಯ ತಿಳಿಸಿದರು.

‘‘ಅವರು (ಚೀನಾ ನಾಯಕತ್ವ) ನಮಗೆ ಸಂಪೂರ್ಣ ಬೆಂಬಲ ನೀಡುವ ಭರವಸೆಯನ್ನು ನೀಡಿದ್ದಾರೆ ಎಂದು ನಾನು ದೇಶಕ್ಕೆ ತಿಳಿಸಬಯಸುತ್ತೇನೆ. ಅಷ್ಟೇ ಅಲ್ಲ, ವಿಶ್ವಸಂಸ್ಥೆಯ ನಮ್ಮ ಪ್ರತಿನಿಧಿಯೊಂದಿಗೆ ಸಂಪರ್ಕದಲ್ಲಿರುವಂತೆ ಹಾಗೂ ಸಮಾಲೋಚನೆಗಳನ್ನು ಮುಂದುವರಿಸುವಂತೆ ಅವರ ಪ್ರತಿನಿಧಿಗೆ ಅವರು ಸೂಚನೆಯನ್ನೂ ನೀಡಿದ್ದಾರೆ’’ ಎಂದರು.

ಭಾರತದ ನಿರ್ಧಾರಗಳ ಬಗ್ಗೆ ತಾನು ‘ಗಂಭೀರ ಕಳವಳ’ ಹೊಂದಿರುವುದಾಗಿ ಶುಕ್ರವಾರ ಮಾತುಕತೆಯ ಬಳಿಕ ಚೀನಾ ಹೇಳಿದೆ ಹಾಗೂ ವಿಶ್ವಸಂಸ್ಥೆಯ ಒಡಂಬಡಿಕೆ ಮತ್ತು 1972ರ ಶಿಮ್ಲಾ ಒಪ್ಪಂದಕ್ಕೆ ಅನುಗುಣವಾಗಿ ವಿವಾದಗಳನ್ನು ದ್ವಿಪಕ್ಷೀಯವಾಗಿ ಪರಿಹರಿಸಿಕೊಳ್ಳುವಂತೆ ಅದು ಭಾರತ ಮತ್ತು ಪಾಕಿಸ್ತಾನಗಳನ್ನು ಒತ್ತಾಯಿಸಿದೆ.

ಉಭಯ ದೇಶಗಳ ಮಹಾನಿರ್ದೇಶಕರ ಮಟ್ಟದ ಅಧಿಕಾರಿಗಳು ‘ಜಂಟಿ ತಂತ್ರಗಾರಿಕೆ’ಯೊಂದನ್ನು ರೂಪಿಸುತ್ತಾರೆ ಎಂದು ಪಾಕ್ ವಿದೇಶ ಸಚಿವರು ತಿಳಿಸಿದರು.

ಕಾಶ್ಮೀರದಲ್ಲಿನ ಭಾರತದ ಕ್ರಮಗಳು ಏಕಪಕ್ಷೀಯವಾಗಿದೆ ಎಂಬುದಾಗಿ ಚೀನಾ ಪರಿಗಣಿಸುತ್ತದೆ ಎಂದು ಕುರೇಶಿ ಹೇಳಿದರು.

ಭಾರತದ ಕ್ರಮಗಳು ವಲಯದಲ್ಲಿನ ಶಾಂತಿ ಮತ್ತು ಭದ್ರತೆಗೆ ಎದುರಾದ ‘ಹೆಚ್ಚುವರಿ ಬೆದರಿಕೆ’ಯಾಗಿದೆ ಎಂದು ಕುರೇಶಿ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X