Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಕದಿನ ಕ್ರಿಕೆಟ್‌ನಲ್ಲಿ ಭಾರತದ 2ನೇ...

ಏಕದಿನ ಕ್ರಿಕೆಟ್‌ನಲ್ಲಿ ಭಾರತದ 2ನೇ ಗರಿಷ್ಠ ರನ್ ಸರದಾರನಾದ ವಿರಾಟ್ ಕೊಹ್ಲಿ

ಸಾಧನೆಯ ಹಾದಿಯಲ್ಲಿ ಗಂಗುಲಿ ದಾಖಲೆ ಮುರಿದ ದಿಲ್ಲಿ ಬ್ಯಾಟ್ಸ್‌ಮನ್

ವಾರ್ತಾಭಾರತಿವಾರ್ತಾಭಾರತಿ11 Aug 2019 11:01 PM IST
share
ಏಕದಿನ ಕ್ರಿಕೆಟ್‌ನಲ್ಲಿ ಭಾರತದ 2ನೇ ಗರಿಷ್ಠ ರನ್ ಸರದಾರನಾದ ವಿರಾಟ್ ಕೊಹ್ಲಿ

ಪೋರ್ಟ್ ಆಫ್ ಸ್ಪೇನ್, ಆ.11: ಬ್ಯಾಟಿಂಗ್ ಮಾಂತ್ರಿಕ ವಿರಾಟ್ ಕೊಹ್ಲಿ ಏಕದಿನ ಅಂತರ್‌ರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಗರಿಷ್ಠ ರನ್ ಗಳಿಸಿದ ಎರಡನೇ ಬ್ಯಾಟ್ಸ್‌ಮನ್ ಎಂಬ ಹಿರಿಮೆಗೆ ಪಾತ್ರರಾದರು. ಈ ಸಾಧನೆಯ ಹಾದಿಯಲ್ಲಿ ಮಾಜಿ ನಾಯಕ ಸೌರವ್ ಗಂಗುಲಿಯ ದಾಖಲೆಯನ್ನು ಹಿಂದಿಕ್ಕಿದರು.

ರವಿವಾರ ವಿಂಡೀಸ್ ವಿರುದ್ಧ 2ನೇ ಏಕದಿನ ಪಂದ್ಯದ ವೇಳೆ ಕೊಹ್ಲಿ ಈ ಸಾಧನೆ ಮಾಡಿದರು. 30ರ ಹರೆಯದ ಕೊಹ್ಲಿ 50 ಓವರ್ ಮಾದರಿ ಕ್ರಿಕೆಟ್‌ನಲ್ಲಿ ಲೆಜೆಂಡರಿ ಸಚಿನ್ ತೆಂಡುಲ್ಕರ್(18,426)ಬಳಿಕ ಗರಿಷ್ಠ ರನ್ ಗಳಿಸಿರುವ ಭಾರತದ ಎರಡನೇ ದಾಂಡಿಗನೆಂಬ ಕೀರ್ತಿಗೆ ಭಾಜನರಾದರು. ಕೊಹ್ಲಿ ತನ್ನ 238ನೇ ಪಂದ್ಯದಲ್ಲಿ ಗಂಗುಲಿಯ ಸಾಧನೆಯನ್ನು ಹಿಂದಿಕ್ಕಿದರು. ಗಂಗುಲಿ 311 ಏಕದಿನ ಪಂದ್ಯಗಳಲ್ಲಿ 11,363 ರನ್ ಗಳಿಸಿದ್ದರು.

ಪಂದ್ಯದ 32ನೇ ಓವರ್‌ನಲ್ಲಿ ಜೇಸನ್ ಹೋಲ್ಡರ್ ಎಸೆತವನ್ನು ಬೌಂಡರಿ ಗೆರೆ ದಾಟಿಸಿದ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಒಟ್ಟು 11,364 ರನ್ ಗಳಿಸಿದರು.

ಕೊಹ್ಲಿ 112 ಎಸೆತಗಳಲ್ಲಿ 42ನೇ ಶತಕ ಪೂರೈಸಿದರು.42ನೇ ಓವರ್‌ನಲ್ಲಿ ಬ್ರಾತ್‌ವೇಟ್‌ಗೆ ವಿಕೆಟ್ ಒಪ್ಪಿಸಿದರು. ಔಟಾಗುವ ಮೊದಲು 120 ರನ್(125 ಎಸೆತ, 14 ಬೌಂಡರಿ, 1 ಸಿಕ್ಸರ್) ಗಳಿಸಿದರು.

ಏಕದಿನ ಕ್ರಿಕೆಟ್:ಭಾರತದ ಅಗ್ರ -ಐವರು ರನ್ ಸ್ಕೋರರ್‌ಗಳು

ಸಚಿನ್ ತೆಂಡುಲ್ಕರ್-18,426 ರನ್

ವಿರಾಟ್ ಕೊಹ್ಲಿ-11,364*

ಸೌರವ್ ಗಂಗುಲಿ-11,363 ರನ್

ರಾಹುಲ್ ದ್ರಾವಿಡ್ 10,889 ರನ್

ಎಂಎಸ್ ಧೋನಿ-10,773 ರನ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X