Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಇದು ನಾನು ಈದ್ ಆಚರಿಸುವ ರೀತಿ’

‘ಇದು ನಾನು ಈದ್ ಆಚರಿಸುವ ರೀತಿ’

ಬಕ್ರೀದ್‌ಗಾಗಿ ತರಿಸಿದ್ದ ಹೊಸ ಬಟ್ಟೆಗಳನ್ನು ನೆರೆಸಂತ್ರಸ್ತರಿಗೆ ಕೊಡುಗೆಯಾಗಿ ನೀಡಿದ ಕೇರಳದ ಬಟ್ಟೆ ವ್ಯಾಪಾರಿ

ವಾರ್ತಾಭಾರತಿವಾರ್ತಾಭಾರತಿ12 Aug 2019 3:33 PM IST
share
‘ಇದು ನಾನು ಈದ್ ಆಚರಿಸುವ ರೀತಿ’

ಕೊಚ್ಚಿ,ಆ.12: ನಿರಂತರವಾಗಿ ಸುರಿಯುತ್ತಿರುವ ಮಳೆ ಮತ್ತು ಪ್ರವಾಹದಿಂದ ತತ್ತರಿಸುತ್ತಿರುವ ಕೇರಳದಲ್ಲಿ ಸ್ಥಳೀಯ ಬಟ್ಟೆ ವ್ಯಾಪಾರಿಯೋರ್ವರ ಮಾನವೀಯತೆ ಸಾಮಾಜಿಕ ಮಾಧ್ಯಮಗಳಲ್ಲಿ ಹೃದಯಗಳಿಗೆ ಲಗ್ಗೆ ಹಾಕುತ್ತಿದೆ. ಎರ್ನಾಕುಳಂ ಜಿಲ್ಲೆಯ ಮಟ್ಟಂಚೇರಿಯಲ್ಲಿ ಸಿದ್ಧ ಉಡುಪುಗಳ ವ್ಯಾಪಾರಿಯಾಗಿರುವ ನೌಷಾದ್ ಬಕ್ರೀದ್ ಹಬ್ಬದ ಮಾರಾಟಕ್ಕೆಂದು ತರಿಸಿದ್ದ ಅಷ್ಟೂ ಸಿದ್ಧ ಉಡುಪುಗಳನ್ನು ನೆರೆ ಪೀಡಿತರಿಗೆ ದೇಣಿಗೆಯಾಗಿ ನೀಡುವ ಮೂಲಕ ಹೃದಯ ವೈಶಾಲ್ಯ ಮೆರೆದಿದ್ದಾರೆ.

ರವಿವಾರ ಸಂಜೆ ನಟ ರಾಜೇಶ ಶರ್ಮಾ ನೇತೃತ್ವದ ಸ್ವಯಂಸೇವಕರ ತಂಡವೊಂದು ಭೀಕರ ನೆರೆ ಮತ್ತು ಭೂಕುಸಿತಗಳಿಂದಾಗಿ ಭಾರೀ ಹಾನಿಯುಂಟಾಗಿರುವ ಮಲಬಾರ್ ಪ್ರದೇಶದಲ್ಲಿಯ ಸಂತ್ರಸ್ತರಿಗೆ ಕಳುಹಿಸಲು ಪರಿಹಾರ ಸಾಮಗ್ರಿಗಳನ್ನು ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿಕೊಂಡಿತ್ತು. ತಂಡವನ್ನು ತನ್ನ ಅಂಗಡಿಗೆ ಆಹ್ವಾನಿಸಿದ ನೌಷಾದ್ ತನ್ನಲ್ಲಿದ್ದ ಎಲ್ಲ ಹೊಸಬಟ್ಟೆಗಳನ್ನು ನೀಡಿದ್ದಾರೆ. ಇವುಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸಿದ್ಧ ಉಡುಪುಗಳು ಹೆಚ್ಚಿನ ಪ್ರಮಾಣದಲ್ಲಿದ್ದು,ನೌಷಾದ್ ಈದ್ ಸಂದರ್ಭದಲ್ಲಿ ಮಾರಾಟ ಮಾಡಲೆಂದು ಇವುಗಳನ್ನು ವಿಶೇಷವಾಗಿ ತರಿಸಿದ್ದರು.

ರಾಜೇಶ್ ಶರ್ಮಾ ಈ ಘಟನೆಯನ್ನು ವಿವರಿಸಿ ವೀಡಿಯೊವೊಂದನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದು, ಆಗಿನಿಂದಲೂ ಅದು ವೈರಲ್ ಆಗಿದೆ.

‘ ಈ ಜಗತ್ತಿನಿಂದ ನಿರ್ಗಮಿಸುವಾಗ ನಾವು ಯಾವುದನ್ನೂ ನಮ್ಮಿಂದಿಗೆ ಒಯ್ಯುವುದಿಲ್ಲ. ಅಗತ್ಯವುಳ್ಳವರಿಗೆ ನೆರವಾಗುವುದರಲ್ಲಿಯೇ ನನ್ನ ಲಾಭವಿದೆ. ನಾಳೆ ಬಕ್ರೀದ್ ಮತ್ತು ನಾನದನ್ನು ಹೀಗೆ ಆಚರಿಸುತ್ತಿದ್ದೇನೆ ’ ಎಂದು ವೀಡಿಯೊದಲ್ಲಿ ನೌಷಾದ್ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ವೀಡಿಯೊ ವ್ಯಾಪಕವಾಗಿ ಶೇರ್ ಆಗಿದೆ.

ನೌಷಾದ್ ಭರ್ತಿ ಐದು ಚೀಲಗಳಷ್ಟು ಸಿದ್ಧ ಉಡುಪುಗಳನ್ನು ನೆರೆಪೀಡಿತರಿಗಾಗಿ ನೀಡಿದ್ದಾರೆ.

ತನ್ನ ಫೇಸ್‌ಬುಕ್ ಪೇಜ್‌ನಲ್ಲಿ ನೌಷಾದ್‌ರನ್ನು ಪ್ರಶಂಸಿಸಿರುವ ಕೇರಳ ಪಿಡಬ್ಲುಡಿ ಸಚಿವ ಜಿ.ಸುಧಾಕರನ್ ಅವರು,ನೌಷಾದ್ ಸಮಾಜಕ್ಕೆ ಅತ್ಯಂತ ಧನಾತ್ಮಕ ಸಂದೇಶವನ್ನು ರವಾನಿಸಿದ್ದಾರೆ ಎಂದಿದ್ದಾರೆ.

ನೌಷಾದ್‌ರ ನಿಸ್ವಾರ್ಥ ಸೇವೆಯನ್ನು ಮಲಯಾಳಂ ನಟ ಆಸಿಫ್ ಅಲಿ ಅವರೂ ಪ್ರಶಂಸಿಸಿದ್ದಾರೆ. ‘ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ನೆರವಾಗಲು ಸಿದ್ಧರಿರುವ ನೌಷಾದ್‌ರಂತಹ ಸಾವಿರಾರು ಜನರು ನಮ್ಮಾಂದಿಗೆ ಇರುವವರೆಗೂ ಯಾರೂ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ ’ ಎಂದು ಅವರು ತನ್ನ ಫೇಸ್‌ಬುಕ್ ಪೇಜ್‌ನಲ್ಲಿ ಬರೆದಿದ್ದಾರೆ. ಎರ್ನಾಕುಳಂ ಜಿಲ್ಲಾಧಿಕಾರಿ ಎಸ್.ಸುಹಾಸ್ ಅವರೂ ನೌಷಾದ್‌ರನ್ನು ಶ್ಲಾಘಿಸಿದ್ದಾರೆ. ನೌಷಾದ್ ಜೊತೆ ದೂರವಾಣಿಯಲ್ಲಿ ಮಾತನಾಡಿ ಅಭಿನಂದಿಸಿದ ಅವರು,ರಕ್ಷಣಾ ಮತ್ತು ಪರಿಹಾರ ಕಾರ್ಯಗಳು ಮುಗಿದ ಬಳಿಕ ಖುದ್ದಾಗಿ ಭೇಟಿಯಾಗುವುದಾಗಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X