ಸ್ವಾತಂತ್ರ್ಯೋತ್ಸವ ಸರಳವಾಗಿ ಆಚರಿಸಲು ಸರಕಾರ ಆದೇಶ
ಬೆಂಗಳೂರು, ಆ.13: ರಾಜ್ಯದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆ ಮತ್ತು ನೆರೆ ಹಾವಳಿಯಿಂದ ಜನತೆ ತತ್ತರಿಸಿರುವ ಹಿನ್ನಲೆಯಲ್ಲಿ ಆ.15ರಂದು ಸರಳ ರೀತಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲು ಸರಕಾರದ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ಜಿಲ್ಲಾ ಎಸ್ಪಿಗಳಿಗೆ ಪತ್ರ ಬರೆದಿರುವ ಮುಖ್ಯ ಕಾರ್ಯದರ್ಶಿ, ಬೆಂಗಳೂರು ಜಿಲ್ಲೆ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆ, ಉಪವಿಭಾಗ, ತಾಲೂಕು ಮಟ್ಟದಲ್ಲಿ ಸರಳ ರೀತಿಯಲ್ಲಿ ಆಚರಿಸಬೇಕು ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ತನ್ನ ಸಂಪುಟ ರಚನೆ ಮಾಡದ ಕಾರಣ ಜಿಲ್ಲಾ ಉಸ್ತುವಾರಿ ಸಚಿವರುಗಳು ಇಲ್ಲದ್ದರಿಂದ ಗೊಂದಲ ನಿವಾರಿಸಲು ಈ ಕ್ರಮ ಜರುಗಿಸಲಾಗಿದೆ ಎಂದು ವಿಶ್ಲೇಷಿಸಲಾಗುತ್ತದೆ.
Next Story