Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸೋಷಿಯಲ್ ಮೀಡಿಯಾ
  3. ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಕಾದಿದೆ...

ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಕಾದಿದೆ ಭಾರೀ ಪ್ರಾಕೃತಿಕ ದುರಂತ: ಪರಿಸರವಾದಿ ದಿನೇಶ್ ಹೊಳ್ಳ ಎಚ್ಚರಿಕೆ

''ಶಿರಾಡಿ ಘಾಟಿಯಲ್ಲಿ ಭೂಕುಸಿತಕ್ಕೆ ಎತ್ತಿನಹೊಳೆ ಯೋಜನೆಯೇ ಕಾರಣ''

ವಾರ್ತಾಭಾರತಿವಾರ್ತಾಭಾರತಿ13 Aug 2019 1:54 PM IST
share
ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಕಾದಿದೆ ಭಾರೀ ಪ್ರಾಕೃತಿಕ ದುರಂತ: ಪರಿಸರವಾದಿ ದಿನೇಶ್ ಹೊಳ್ಳ ಎಚ್ಚರಿಕೆ

ಭಾರೀ ಮಳೆಯಿಂದ ಚಾರ್ಮಾಡಿ ಪ್ರದೇಶದಲ್ಲಿ ಸಂಭವಿಸಿರುವ ಎಲ್ಲಾ ದುರಂತಗಳಿಗೆ ಸರಕಾರದ ಅಸಂಬದ್ಧ ಯೋಜನೆ ಮತ್ತು ಪಶ್ಚಿಮ ಘಟ್ಟದ ಬಗ್ಗೆ ನಿರ್ಲಕ್ಷ್ಯ ಮನೋಭಾವ ಹಾಗೂ ಜನ ಸಾಮಾನ್ಯರ ಪಶ್ಚಿಮ ಘಟ್ಟದ ತಾತ್ಸಾರ ಭಾವನೆಗಳೇ ಕಾರಣ. ಇದು ಪ್ರಕೃತಿಯ ಒಂದು ಎಚ್ಚರಿಕೆ ಗಂಟೆ. ಇನ್ನಾದರೂ ನಾವು ಎಚ್ಚೆತ್ತುಕೊಳ್ಳದಿದ್ದಲ್ಲಿ ಮುಂದೆ ಇನ್ನಷ್ಟು ದೊಡ್ಡ ಪ್ರಮಾಣದಲ್ಲಿ ಪ್ರಾಕೃತಿಕ ದುರಂತವನ್ನು ಎದುರಿಸಬೇಕಾದೀತು ಎಂದು ಪರಿಸರವಾದಿ ದಿನೇಶ್ ಹೊಳ್ಳ ಎಚ್ಚರಿಸಿದ್ದಾರೆ. 

ಚಾರ್ಮಾಡಿ ಘಾಟಿಯ ಬೆಟ್ಟ ಕಣಿವೆಗಳು ಬಹುತೇಕ ಕುಸಿದಿವೆ. ಕೆಲವು ಕಡೆ ರಸ್ತೆಯೇ ಮಾಯವಾಗಿವೆ. ಹಿಮ್ಮುರಿ ತಿರುವುಗಳಿಂದ ಮಲಯ ಮಾರುತದ ವರೆಗೆ ಭೂಕುಸಿತ ಸಂಭವಿಸಿದೆ. ಕಳೆದ 24 ವರ್ಷಗಳಿಂದ ಚಾರ್ಮಾಡಿ ಘಾಟಿಯ ಬೆಟ್ಟ, ಕಾಡು, ಕಣಿವೆ ಸುತ್ತಾಡುತ್ತಿದ್ದ ಕಾರಣ ಚಾರ್ಮಾಡಿ ಘಾಟಿ ಮನೆಯ ಅಂಗಳವೇ ಆಗಿದ್ದು, ಇಂದು ತುಂಬಾ ಬೇಸರವಾಗುತ್ತದೆ. ಸುಂದರವಾದ ಒಂದು ಕಲಾಕೃತಿಗೆ ಯಾರೋ ಗೀಚಿ, ಗೀರಿದ ಹಾಗೆ ಆಗಿದೆ ಸದ್ಯ ಚಾರ್ಮಾಡಿ ಪರಿಸ್ಥಿತಿ ಎನ್ನುತ್ತಾರೆ ಹೊಳ್ಳ.

ಚಾರ್ಮಾಡಿ ಘಾಟಿಯ ಏರಿಕಲ್ಲಿನ ಹುಲಿ ದನ ಬಂಡೆ, ಮಿಂಚುಕಲ್ಲಿನ ದೀರ್ಘ ಪ್ರಪಾತ, ಬಾಳೆ ಗುಡ್ಡದ ಅಮೋಘ ದೃಶ್ಯ, ಕೊಡೆ ಕಲ್ಲಿನ ಕೊರಕಲು ಶಿಲೆ, ದೊಡ್ಡೇರಿ ಬೆಟ್ಟದ ಗಡಸು ಹಾದಿ, ಹೊಸ್ಮನೆ ಬೆಟ್ಟದ ಹಸಿರು ಹೊದಿಕೆ, ರಾಮನಬೆಟ್ಟದ ಪಟ್ಟದ ಕಲ್ಲು, ಸೊಪ್ಪಿನ ಗುಡ್ಡದ ಸೊಡರು, ಕುಂಭಕಲ್ಲಿನ ಕುಂಭ, ಬಾರಿ ಮಲೆ, ಬಾಂಜಾರು ಮಲೆ, ಅಂಬಾಟಿ ಮಲೆ, ಇಳಿಮಲೆಯ ದಟ್ಟ ಶೋಲಾ ಅಡವಿ, ಬಾಳೂರು, ಮಧುಗುಂದಿ, ಮಳೆಮನೆ, ದೇವರಮನೆ, ಅಣಿಯೂರು, ದೇವಗಿರಿ ಕಣಿವೆಯ ನೀರಿನ ಹರಿವು, ಬಿದಿರು ತಳ, ಹೊರಟ್ಟಿ ... ಎಲ್ಲವೂ ಪಶ್ಚಿಮ ಘಟ್ಟದ ಸೂಕ್ಷ್ಮ ಜೀವ ವೈವಿಧ್ಯ ಪ್ರದೇಶಗಳಾಗಿದ್ದು ನೇತ್ರಾವತಿ ನದಿಯ ಉಪನಡಿಗಳಾದ ಮೃತ್ಯುಂಜಯ, ಅಣಿಯೂರು, ಸುನಾಲ, ನೆರಿಯ ಹೊಳೆಗಳ ಉಗಮ ಸ್ಥಾನವಾಗಿರುತ್ತವೆ. ಇಲ್ಲಿನ ಬೆಟ್ಟಗಳ ಮೇಲ್ಮೈ ಪದರದ ಹುಲ್ಲುಗಾವಲು ಮತ್ತು ಕಣಿವೆಗಳ ಶೋಲಾ ಅರಣ್ಯ ನಡುವೆ ಒಂದಕ್ಕೊಂದು ಸಂಬಂಧವಿದೆ. ಮಳೆಗಾಲದ ಮಳೆ ನೀರನ್ನು ಬೆಟ್ಟದ ಮೇಲಿನ ಹುಲ್ಲುಗಾವಲು (ಬೆಟ್ಟಕ್ಕೆ ಹುಲ್ಲು ಮನುಜನ ಶರೀರಕ್ಕೆ ಚರ್ಮ ಹೇಗೆ ರಕ್ಷಣೆಯೂ ಹಾಗೆ ಹುಲ್ಲುಗಾವಲು ರಕ್ಷಣೆ) ತನ್ನ ಒಳ ಪದರದ ಜಲ ಪಥಗಳಲ್ಲಿ ಕೆಳಗಡೆ ಇರುವ ಶೋಲಾ ಅರಣ್ಯಕ್ಕೆ ಸರಬರಾಜು ಮಾಡುತ್ತವೆ. ಈ ಶೋಲಾ ಅರಣ್ಯದ ಒಳಗಡೆ ಇರುವ ಶಿಲಾ ಪದರಗಳಲ್ಲಿ ಶೇಖರಣೆ ಆದ ನೀರು ಈ ಮಳೆಗಾಲ ಮುಗಿದು ಇನ್ನೊಂದು ಮಳೆಗಾಲದ ವರೆಗೆ ಹೊಳೆಗೆ ನೀರು ಹರಿಸಿ ಹೊಳೆಯನ್ನು ವರ್ಷ ಪೂರ್ತಿ ಜೀವಂತ ವಾಗಿ ಇಟ್ಟುಕೊಳ್ಳುವ ಸಾಮರ್ಥ್ಯ ಇರುವಂಥವು. ಈ ಶೋಲಾ ಅಡವಿ ಇದ್ದ ಕಾರಣ ಅಲ್ಲಿ ಒಂದಷ್ಟು ಜಲಪಾತಗಳಿದ್ದು, ಈ ಜಲಪಾತದ ನೀರು ವರ್ಷವಿಡೀ ನೇತ್ರಾವತಿಯ ಉಪನದಿಗಳು ಆಗಿ ಹರಿದು ಪ್ರಧಾನ ನದಿಗೆ ಸೇರುತ್ತವೆ ಎಂದು ದಿನೇಶ್ ಹೊಳ್ಳ ವಿವರಿಸುತ್ತಾರೆ.

ಪಶ್ಚಿಮ ಘಟ್ಟದ ಮೇಲ್ಮೈ ಪದರ ಸಡಿಲವಾಗಿ ಹುಲ್ಲುಗಾವಲು ಪ್ರದೇಶ ಗಾಧತೆಯನ್ನು ಕಳೆದುಕೊಳ್ಳುತ್ತಾ ಬರುತ್ತಿರುವುದರಿಂದ ವರ್ಷ ವರ್ಷ ಶೋಲಾ ಅಡವಿಯ ಒಳಗಿನ ಶಿಲಾ ಪದರದ ಅಂತರ ಹೆಚ್ಚಾಗುತ್ತಿವೆ. ಈ ರೀತಿ ಅಂತರ ಹೆಚ್ಚಾದಂತೆ ಗಾಢವಾಗಿ ಮಳೆ ಸುರಿದಾಗ ಬಿರುಕಿನ ನಡುವ ಧಾರಣಾ ಶಕ್ತಿಗಿಂತ ಹೆಚ್ಚು ನೀರು ಪ್ರವಹಿಸಿದಾಗ ಜಲ ಸ್ಫೋಟವಾಗಿ ಭೂಕುಸಿತ ಉಂಟಾಗುತ್ತವೆ. ಇಂತಹ ಸಂದರ್ಭದಲ್ಲಿ ಒಳಗಿರುವ ಗಾಢ ಪದರದಲ್ಲಿ (ಶಿಲೆ ಹೊದಿಕೆ ಇರುವಲ್ಲಿ) ನೀರು ಹರಿಯದೇ ಮೆದು ಪದರದಲ್ಲಿ (ಮಣ್ಣಿನ ಹೊದಿಕೆ) ನೀರು ಹರಿದಾಗ ಭೂಕುಸಿತ ಉಂಟಾಗುತ್ತದೆ. ಅದರ ಜೊತೆ ನೀರು ಹರಿದು ಪ್ರವಾಹ ಸಂಭವಿಸುತ್ತದೆ. ನದಿ ಮೂಲ ಇರುವ ಸೂಕ್ಷ್ಮ ಪ್ರದೇಶಗಳಲ್ಲಿ ಅರಣ್ಯ ಅತಿಕ್ರಮಣ, ಜಲವಿದ್ಯುತ್ ಯೋಜನೆ, ರೆಸಾರ್ಟ್ ಗಳ ನಿರ್ಮಾಣ ಕೂಡಾ ಈ ರೀತಿಯ ದುರಂತೆ ಸಂಭವಿಸಲು ಕಾರಣ. ನಿರಂತರ ಪಶ್ಚಿಮ ಘಟ್ಟದಲ್ಲಿ ಆಗುತ್ತಿರುವ ಕಾಡ್ಗಿಚ್ಚು ಕೂಡಾ ಭೂಕುಸಿತಕ್ಕೆ ಕಾರಣ ಎನ್ನುತ್ತಾರೆ ಹೊಳ್ಳ.

ಹಿಂದೆಲ್ಲಾ ಅಪರೂಪಕ್ಕೊಮ್ಮೆ ಕಾಡ್ಗಿಚ್ಚು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚೆಗಿನ ವರ್ಷಗಳಲ್ಲಿ ಒಂದೇ ಬೆಟ್ಟದಲ್ಲಿ ನಿರಂತರ 3ರಿಂದ 4 ಸಲ ಕಾಡ್ಗಿಚ್ಚು ಉಂಟಾಗಿ ಬೆಟ್ಟದ ಮೇಲಿನ ಹುಲ್ಲು ಸಂಪೂರ್ಣ ಕಾಂಡ, ಬೇರು ಸಹಿತ ಸುಟ್ಟು ಹೋಗುತ್ತಿವೆ. ಈ ರೀತಿ ಆದಲ್ಲಿ ಆ ಹುಲ್ಲು ಮತ್ತೆ ಚಿಗುರಲು ಅವಕಾಶ ಇರುವುದಿಲ್ಲ. ಧಾರಾಕಾರ ಮಳೆ ಸುರಿಯುವ ಸಂದರ್ಭದಲ್ಲಿ ಬೆಟ್ಟದ ಮೇಲ್ಮೈ ಪದರ ಕುಸಿದು ಶೋಲಾ ಕಾಡಿಗೆ ಸೇರಿ ಮಣ್ಣಿನ ಕುಸಿತ ಸಂಭವಿಸುತ್ತಿದೆ. ಈ ರೀತಿ ಆದಾಗ ಮಳೆ ನೀರನ್ನು ಹಿಡಿದು ಇಟ್ಟುಕೊಳ್ಳುವ ಪಶ್ಚಿಮ ಘಟ್ಟದ ಮಳೆ ಕಾಡಿನ ಜಲ ಬಟ್ಟಲು (ವಾಟರ್ ಟ್ಯಾಂಕ್ ತರಹ) ಒಮ್ಮೆಲೇ ಸ್ಫೋಟಗೊಂಡಾಗ ಏಕಾಏಕಿ ಆಗಿ ನೀರಿನ ಪ್ರವಾಹ ಹೆಚ್ಚಾಗಿ ತಗ್ಗು ಪ್ರದೇಶಗಳಿಗೆ ಹರಿಯುತ್ತವೆ.(ಕಳೆದ ವರ್ಷ ಮಡಿಕೇರಿ, ಕೇರಳ ದುರಂತ) ಎಂದು ಅವರು ತಿಳಿಸಿದ್ದಾರೆ.

ಇನ್ನು ಶಿರಾಡಿ ಘಾಟಿಯಲ್ಲಿ ಭೂಕುಸಿತಕ್ಕೆ ಎತ್ತಿನ ಹೊಳೆ ಯೋಜನೆಯ ಕಾಮಗಾರಿಯೇ ನೇರ ಕಾರಣ. ಕೆಂಪುಹೊಳೆ ಹರಿವು ಪ್ರದೇಶದ ಮಳೆ ನೀರಿನ ಇಂಗಿತ ಪ್ರದೇಶ ( ನೀರಿನ ಕ್ಯಾಚ್ಮೆಂಟ್ ಏರಿಯ)ಕಾಮಗಾರಿ ನೆಪದಲ್ಲಿ ಸಂಪೂರ್ಣ ನಾಶ ಆಗಿ ಭೂಕುಸಿತ ಆಗಿವೆ. ಆನೆಮಹಲ್, ಹೆಗ್ಗದ್ದೆ, ಸತ್ತಿಗಾಲ, ಹೆಬ್ಬಸಾಲೆ, ಮಾರ್ನಳ್ಳಿ, ಹಿರಿದನ ಹಳ್ಳಿ ಇಂತಹ ಪ್ರದೇಶಗಳಲ್ಲೇ ಭೂಕುಸಿತ ಸಂಭವಿಸಿವೆ. ಈ ಪ್ರದೇಶಗಳಲ್ಲೆಲ್ಲ ಎತ್ತಿನಹೊಳೆ ಕಾಮಗಾರಿ ಮಾಡಿ ಅಲ್ಲಿನ ಹುಲ್ಲುಗಾವಲು, ಮಳೆನೀರನ್ನು ಇಂಗಿಸುವ ಶೋಲಾ ಕಾಡು ಎಲ್ಲವನ್ನೂ ನಾಶ ಮಾಡಲಾಗಿದೆ. ಕಾಮಗಾರಿಯ ತ್ಯಾಜ್ಯಗಳನ್ನು ನದಿ ಹರಿವಿನ ಪ್ರದೇಶಕ್ಕೆ ಬಿಟ್ಟ ಕಾರಣ ಕಾಮಗಾರಿ ಆಗುತ್ತಿರುವ ಪ್ರದೇಶಗಳಲ್ಲೇ ಭೂಕುಸಿತ ಸಂಭವಿಸಿದೆ ಎನ್ನುತ್ತಾರೆ ದಿನೇಶ್ ಹೊಳ್ಳ.

ಆದುದರಿಂದ ಈ ಎಲ್ಲಾ ದುರಂತಗಳಿಗೆ ಸರಕಾರದ ಅಸಂಬದ್ಧ ಯೋಜನೆ ಮತ್ತು ಪಶ್ಚಿಮ ಘಟ್ಟದ ಬಗ್ಗೆ ನಿರ್ಲಕ್ಷ ಮನೋಭಾವ ಹಾಗೂ ಜನ ಸಾಮಾನ್ಯರ ಪಶ್ಚಿಮ ಘಟ್ಟದ ತಾತ್ಸಾರ ಭಾವನೆಗಳೇ ಕಾರಣ. ಇಂತಹ ದುರಂತ ಸಂಭವಿಸಿದಾಗ ಮಳೆಯನ್ನು, ನದಿಯನ್ನು ದೂರುವುದು ಸರಿಯಲ್ಲ. ಮಳೆ ಬಾರದಿದ್ದರೂ, ಅತೀ ಮಳೆ ಬಂದರೂ ಮಳೆಗೆ ಬಯ್ಯುವ ಮಾನವ ಜನಾಂಗ ನದಿ ನೀರು ಅಥವಾ ಮಳೆ ನೀರು ಹರಿಯುವ ಜಲ ಪಥಗಳನ್ನು ಎಷ್ಟು ಸಮರ್ಪಕವಾಗಿ ನಿರ್ವಹಿಸಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರ ಹುಡುಕಬೇಕು. ಇದು ಪ್ರಕೃತಿಯ ಒಂದು ಎಚ್ಚರಿಕೆ ಗಂಟೆ. ಇನ್ನಾದರೂ ನಾವು ಎಚ್ಚರ ಆಗದೇ ಇದ್ದಲ್ಲಿ ಮುಂದೆ ಇನ್ನಷ್ಟು ದೊಡ್ಡ ಪ್ರಾಕೃತಿಕ ದುರಂತವನ್ನು ಎದುರಿಸಲೇಬೇಕು ಎಂದು ಸಹ್ಯಾದ್ರಿ ಸಂಚಯದ ವಕ್ತಾರರೂ ಆಗಿರುವ ದಿನೇಶ್ ಹೊಳ್ಳ ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X