Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಲ್ಯದಲ್ಲಿ ಮನೆಗೆ ಮೊಸಳೆ ಮರಿ...

ಬಾಲ್ಯದಲ್ಲಿ ಮನೆಗೆ ಮೊಸಳೆ ಮರಿ ತಂದಿದ್ದೆ: ‘ಮ್ಯಾನ್ ವರ್ಸಸ್ ವೈಲ್ಡ್' ಶೋನಲ್ಲಿ ಮೋದಿ

ವಾರ್ತಾಭಾರತಿವಾರ್ತಾಭಾರತಿ13 Aug 2019 4:52 PM IST
share
ಬಾಲ್ಯದಲ್ಲಿ ಮನೆಗೆ ಮೊಸಳೆ ಮರಿ ತಂದಿದ್ದೆ: ‘ಮ್ಯಾನ್ ವರ್ಸಸ್ ವೈಲ್ಡ್ ಶೋನಲ್ಲಿ ಮೋದಿ

ಹೊಸದಿಲ್ಲಿ, ಆ.13: ಸೋಮವಾರ ರಾತ್ರಿ 9 ಗಂಟೆಗೆ ‘ಡಿಸ್ಕವರಿ’ ಚಾನೆಲ್ ನಲ್ಲಿ ಪ್ರಸಾರವಾದ ಪ್ರಧಾನಿ ನರೇಂದ್ರ ಮೋದಿ ಹಾಗೂ   ಬೇರ್ ಗ್ರಿಲ್ಸ್ ಅವರು ದಟ್ಟಾರಣ್ಯಗಳಲ್ಲಿ ಸಂಚರಿಸುವ ‘ಮ್ಯಾನ್ ವರ್ಸಸ್ ವೈಲ್ಡ್' ಶೋ ಸಾಕಷ್ಟು ಜನರ ಗಮನಸೆಳೆದಿದೆ.

ಉತ್ತರಾಖಂಡದ ಜಿಮ್ ಕಾರ್ಬೆಟ್ ನ್ಯಾಷನಲ್ ಪಾರ್ಕಿನಲ್ಲಿ ಕಾಡು ಪಯಣದ ವೇಳೆ ಪ್ರಧಾನಿ ಮೋದಿ ತಮ್ಮ ವೈಯಕ್ತಿಕ ಹಾಗೂ ರಾಜಕೀಯ ಜೀವನದ ಬಗ್ಗೆ ತಮ್ಮ ಪ್ರಕೃತಿ ಪ್ರೇಮದ ಬಗ್ಗೆ  ಹೇಳಿಕೊಂಡಿದ್ದಾರೆ.

ಜನರ ಆಶೋತ್ತರಗಳನ್ನು  ಈಡೇರಿಸುವುದು ತಮಗೆ ಖುಷಿ ನೀಡುತ್ತದೆ ಹಾಗೂ ಅಭಿವೃದ್ಧಿಯೇ ತಮ್ಮ ಪ್ರಮುಖ ಉದ್ದೇಶ ಎಂದೂ ಅವರು ಹೇಳಿಕೊಂಡಿದ್ದಾರೆ. ಈ ಶೋನಲ್ಲಿ ಪ್ರಧಾನಿಯ ಕೆಲ ಮಾತುಗಳು ಇಂತಿವೆ.

ಪ್ರಕೃತಿಯ ಕುರಿತು: ‘ಹುಲಿಗಳಿಂದ ತುಂಬಿರುವ ಜಿಮ್ ಕಾರ್ಬೆಟ್ ನ್ಯಾಷನಲ್ ಪಾರ್ಕ್ ನಲ್ಲಿ ಸಾಗಲು ಸಿದ್ಧರಿದ್ದೀರಾ’ ಎಂದು ಗ್ರಿಲ್ಸ್ ಕೇಳಿದಾಗ ಈ ಅನುಭವ `ಅಪಾಯಕಾರಿ' ಎಂದು ತಾನು ಪರಿಗಣಿಸುವುದಿಲ್ಲ ಎಂದಿದ್ದಾರೆ.

“ಪ್ರಕೃತಿಯ ಬಗ್ಗೆ ನೀವು ಭಯಪಡಲೇಬಾರದು. ನಾವು ಪ್ರಕೃತಿಯೊಂದಿಗೆ ಸಂಘರ್ಷದಲ್ಲಿದ್ದೇವೆ ಎಂಬ ಯೋಚನೆಯಿಂದಲೇ ಸಮಸ್ಯೆಗಳು ಆರಂಭಗೊಳ್ಳುತ್ತವೆ” ಎಂದಿದ್ದಾರೆ ಮೋದಿ.

ಪ್ರಧಾನಿ ಆಗಿರುವ ಬಗ್ಗೆ

“ನಾನ್ಯಾರೆಂಬ  ಬಗ್ಗೆ ನಾನು ಯೋಚಿಸುವುದಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ ಹಾಗೂ ಈಗ ಪ್ರಧಾನಿಯಾಗಿರುವಾಗ ನಾನು ಕೇವಲ ನನ್ನ ಕರ್ತವ್ಯ ಹಾಗೂ ಜವಾಬ್ದಾರಿಗಳ ಬಗ್ಗೆ ಯೋಚಿಸುತ್ತೇನೆ. ನನ್ನ ಸ್ಥಾನ ನನ್ನ ತಲೆಗೇರುವುದಿಲ್ಲ'' ಎಂದು ಪ್ರಧಾನಿ ಹೇಳಿದರು.

ರಜೆಯ ಬಗ್ಗೆ ಮಾತನಾಡಿದ ಪ್ರಧಾನಿ, “ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ. ಈ ಟ್ರಿಪ್ ಕಳೆದ 18 ವರ್ಷಗಳಲ್ಲಿ ನನ್ನ ಮೊದಲ ರಜಾ ಆಗಿದೆ'' ಎಂದರು.

ಶಾಲಾ ದಿನಗಳ ಬಗ್ಗೆ

“ಬಡತನದ ಹೊರತಾಗಿಯೂ ಶಾಲೆಗೆ ಹೋಗುವಾಗ ನೀಟಾಗಿರಬೇಕೆಂದು ಯಾವತ್ತೂ ತಾಮ್ರದ ಪಾತ್ರೆಗೆ ಇದ್ದಿಲನ್ನು ಹಾಕಿ ಸಮವಸ್ತ್ರಕ್ಕೆ ಇಸ್ತ್ರಿ ಮಾಡುತ್ತಿದ್ದೆ'' ಎಂದು ಮೋದಿ ಹೇಳಿದ್ದಾರೆ.

ಬಾಲ್ಯದ ಬಗ್ಗೆ ಮಾತನಾಡಿ, ಒಮ್ಮೆ ಸ್ನಾನ ಮಾಡಲು ಹೋದ ಸಂದರ್ಭ ಕೊಳವೊಂದರಿಂದ ಮೊಸಳೆ ಮರಿಯನ್ನು ಮನೆಗೆ ತಂದ ಬಗ್ಗೆ ಹೇಳಿಕೊಂಡ ಮೋದಿ, “ಇದು ತಪ್ಪು ಎಂದು ತಾಯಿ ಹೇಳಿದರು. ನೀನು ಹೀಗೆ ಮಾಡುವ ಹಾಗಿಲ್ಲ, ಅದನ್ನು ಹಿಂದಕ್ಕೆ ಹಾಕು ಎಂದಾಗ ನಾನು ಹಾಗೆಯೇ ಮಾಡಿದೆ'' ಎಂದು ನೆನಪಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X