Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 5 ರೂ. ಬಿಸ್ಕಿಟ್ ಪ್ಯಾಕೆಟ್ ಖರೀದಿಸಲು ಜನ...

5 ರೂ. ಬಿಸ್ಕಿಟ್ ಪ್ಯಾಕೆಟ್ ಖರೀದಿಸಲು ಜನ ಎರಡು ಬಾರಿ ಯೋಚಿಸುವ ಪರಿಸ್ಥಿತಿ ಬಂದಿದೆ: ಬ್ರಿಟಾನಿಯಾ ಎಂಡಿ ವರುಣ್ ಬೆರಿ

ವಾರ್ತಾಭಾರತಿವಾರ್ತಾಭಾರತಿ13 Aug 2019 8:38 PM IST
share
5 ರೂ. ಬಿಸ್ಕಿಟ್ ಪ್ಯಾಕೆಟ್ ಖರೀದಿಸಲು ಜನ ಎರಡು ಬಾರಿ ಯೋಚಿಸುವ ಪರಿಸ್ಥಿತಿ ಬಂದಿದೆ: ಬ್ರಿಟಾನಿಯಾ ಎಂಡಿ ವರುಣ್ ಬೆರಿ

ಮುಂಬೈ, ಆ.13: ದೇಶಾದ್ಯಂತ ಕಂಡು ಬರುತ್ತಿರುವ ಆರ್ಥಿಕ ಹಿಂಜರಿತ ಈಗ ಅಟೋಮೊಬೈಲ್ ಇತ್ಯಾದಿ ವಾಣಿಜ್ಯ ಕ್ಷೇತ್ರಗಳನ್ನು ದಾಟಿ ಆಹಾರ ಸಾಮಗ್ರಿಗಳ ರಂಗಕ್ಕೂ ತಲುಪಿದ ಬಗ್ಗೆ ವರದಿಯಾಗುತ್ತಿದೆ.

ದೇಶದ ಬೇಕರಿ ತಿಂಡಿತಿನಿಸು ಮಾರುಕಟ್ಟೆಯ ಮೂರನೇ ಒಂದರಷ್ಟು ಭಾಗದ ಮೇಲೆ ಹಿಡಿತ ಸಾಧಿಸಿರುವ ಖ್ಯಾತ ಕಂಪೆನಿ ಬ್ರಿಟಾನಿಯಾ ಲಿಮಿಟೆಡ್ ನ ಆಡಳಿತ ನಿರ್ದೇಶಕ ವರುಣ್ ಬೆರಿ ಅವರು “ನಾವು ಕೇವಲ 6% ಅಭಿವೃದ್ಧಿ ಸಾಧಿಸಿದ್ದೇವೆ, ಒಟ್ಟಾರೆ ಮಾರುಕಟ್ಟೆ ಅದಕ್ಕಿಂತಲೂ ನಿಧಾನ ಗತಿಯಲ್ಲಿದೆ. ಇದು ಚಿಂತೆಯ ವಿಷಯ. 5 ರೂಪಾಯಿಯ ಬಿಸ್ಕಿಟ್ ಪ್ಯಾಕೆಟ್ ಖರೀದಿಸಲು ಎರಡು ಬಾರಿ ಜನರು ಯೋಚಿಸುತ್ತಿದ್ದಾರೆ ಎಂದರೆ ಆರ್ಥಿಕತೆಯಲ್ಲಿ ಏನೋ ಗಂಭೀರ ಸಮಸ್ಯೆ ಇದೆ ಎಂದರ್ಥ" ಎಂದು ಕಳವಳ ವ್ಯಕ್ತ ಪಡಿಸಿದ್ದಾರೆ.

"ಜೊತೆಗೆ ರಿಯಲ್ ಎಸ್ಟೇಟ್, ಸ್ಟಾಕ್ ಮಾರ್ಕೆಟ್ ಅಥವಾ ಇನ್ನು ಯಾವುದೇ ಹೂಡಿಕೆ ಕ್ಷೇತ್ರ ನೋಡಿದರೂ ಅಲ್ಲಿ ಅಭಿವೃದ್ಧಿ ಇಳಿಮುಖವಾಗಿಯೇ ಕಂಡು ಬರುತ್ತಿದೆ. ಈ ಹೂಡಿಕೆ ಕ್ಷೇತ್ರಗಳಲ್ಲಿ ಮಾಡಿದ ಹೂಡಿಕೆಗೆ ಇದ್ದ ಬೆಲೆ ಸಾಕಷ್ಟು ಇಳಿದಿದೆ ಎಂದು ಗ್ರಾಹಕರು ಆತಂಕಕ್ಕೊಳಗಾಗಿದ್ದಾರೆ" ಎಂದು ವರುಣ್ ಬೆರಿ ಹೇಳಿದ್ದಾರೆ.

"ಈ ಹಿಂದೆ ಮಾರುಕಟ್ಟೆ 7% ಪ್ರಮಾಣದಲ್ಲಿ ಬೆಳೆಯುತ್ತಿದ್ದರೆ ನಾವು 10 -11% ಪ್ರಮಾಣದಲ್ಲಿ ಬೆಳೆಯುತ್ತಿದ್ದೆವು. ಆದರೆ ಈ ತ್ರೈಮಾಸಿಕದಲ್ಲಿ ಮಾರುಕಟ್ಟೆ ಬೆಳವಣಿಗೆ ತೀರಾ, ತೀರಾ ನಿಧಾನವಾಗಿದೆ. ನಾವು ಅದಕ್ಕಿಂತ ಬಹಳ ಮುಂದಿದ್ದೇವೆ. ಆದರೆ ನಮ್ಮ ಗುರಿ ಸಾಧನೆ ಸಾಧ್ಯವಾಗುತ್ತಿಲ್ಲ. ಇದು ಕಳವಳದ ವಿಷಯ. ಈ ಹಿಂಜರಿತ ಬೇಗ ಸರಿಯಾಗುವುದಿಲ್ಲ. ಮಾರುಕಟ್ಟೆ ವಾತಾವರಣ ಸರಿಯಾಗಿ ಹೂಡಿಕೆ ಕ್ಷೇತ್ರ ಚೇತರಿಕೆ ಕಂಡರೆ ಮಾತ್ರ ಪರಿಸ್ಥಿತಿ ಸುಧಾರಿಸಬಹುದು. ಆದರೆ ಇದು ತಕ್ಷಣ ಸರಿಯಾಗುವ ಸಾಧ್ಯತೆ ಇಲ್ಲ" ಎಂದು ಅವರು ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X