Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಶಾಸಕ ಸೋಮ್ ವಿರುದ್ಧದ ಪ್ರಕರಣ...

ಬಿಜೆಪಿ ಶಾಸಕ ಸೋಮ್ ವಿರುದ್ಧದ ಪ್ರಕರಣ ಹಿಂದೆಗೆಯಲು ಆದಿತ್ಯನಾಥ್ ಸರಕಾರ ಸಜ್ಜು

2013ರ ಮುಝಫ್ಫರ್‌ನಗರ ದಂಗೆಗಳು

ವಾರ್ತಾಭಾರತಿವಾರ್ತಾಭಾರತಿ13 Aug 2019 9:14 PM IST
share
ಬಿಜೆಪಿ ಶಾಸಕ ಸೋಮ್ ವಿರುದ್ಧದ ಪ್ರಕರಣ ಹಿಂದೆಗೆಯಲು ಆದಿತ್ಯನಾಥ್ ಸರಕಾರ ಸಜ್ಜು

ಲಕ್ನೋ, ಆ.13: ಮುಝಫ್ಫರ್‌ನಗರ ದಂಗೆಗಳಿಗೆ ಸಂಬಂಧಿಸಿದಂತೆ ವಿವಾದಾತ್ಮಕ ಬಿಜೆಪಿ ಶಾಸಕ ಸಂಗೀತ ಸೋಮ್ ವಿರುದ್ಧದ ಪ್ರಕರಣಗಳ ಹಿಂದೆಗೆತಕ್ಕೆ ನಾಂದಿ ಹಾಡುವ ಉಪಕ್ರಮಗಳನ್ನು ಉತ್ತರ ಪ್ರದೇಶದ ಆದಿತ್ಯನಾಥ ಸರಕಾರವು ಆರಂಭಿಸಿದೆ.

2013-2017ರ ನಡುವೆ ಸೋಮ್ ವಿರುದ್ಧ ದಾಖಲಾಗಿರುವ ಏಳು ಪ್ರಕರಣಗಳ ಸ್ಥಿತಿಗತಿ ವರದಿಗಳನ್ನು ಸಲ್ಲಿಸುವಂತೆ ರಾಜ್ಯದ ಕಾನೂನು ಇಲಾಖೆಯು ಮಂಗಳವಾರ ಅಧಿಕಾರಿಗಳಿಗೆ ಲಿಖಿತ ಸೂಚನೆಯನ್ನು ನೀಡಿದೆ. ಈ ಪೈಕಿ ಮೂರು ಪ್ರಕರಣಗಳು 2013ರ ಮುಝಫ್ಫರ್‌ನಗರ ದಂಗೆಗಳಿಗೆ ಸಂಬಂಧಿಸಿವೆ. ಈ ದಂಗೆಗಳಲ್ಲಿ 60ಕ್ಕೂ ಅಧಿಕ ಜನರು ಪ್ರಾಣಗಳನ್ನು ಕಳೆದುಕೊಂಡಿದ್ದರು.

ಮುಝಫ್ಫರ್‌ನಗರ ದಂಗೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಸೋಮ್ ಸುಳ್ಳು ಸುದ್ದಿ ಹರಡುವಿಕೆ,ಧಾರ್ಮಿಕ ದ್ವೇಷಕ್ಕೆ ಪ್ರಚೋದನೆ,ಒಳಸಂಚು ಮತ್ತು ದಂಗೆ ಆರೋಪಗಳನ್ನು ಎದುರಿಸುತ್ತಿದ್ದಾರೆ.

‘ಪ್ರಕರಣಗಳ ಹಿಂದೆಗೆತಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಗಳ ಹೆಸರುಗಳು,ವಿಚಾರಣೆಯ ಹಂತ,ದೂರುದಾರರು ಮತ್ತು ಆರೋಪಿಗಳ ವಿವರಗಳು ಇತ್ಯಾದಿ 13 ಅಂಶಗಳ ಆಧಾರದಲ್ಲಿ ವರದಿಯನ್ನು ಸಿದ್ಧಗೊಳಿಸುವಂತೆ ನಮಗೆ ಸೂಚಿಸಲಾಗಿದೆ ’ಎಂದು ಮುಝಫ್ಫರ್‌ನಗರದ ಹಿರಿಯ ಸರಕಾರಿ ಅಧಿಕಾರಿ ಅಮಿತ್ ಕುಮಾರ ಸಿಂಗ್ ಅವರು ಸುದ್ದಿಸಂಸ್ಥೆಗೆ ತಿಳಿಸಿದರು.

ಪ್ರಕರಣವೊಂದರ ಬಗ್ಗೆ ಕಾನೂನು ಇಲಾಖೆಯು ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಮತ್ತು ಸರಕಾರವು ಅದನ್ನು ಹಿಂದೆಗೆದುಕೊಳ್ಳಲು ಬಯಸಿದರೆ ಅದು ಪ್ರಕರಣದ ವಿಚಾರಣೆ ನಡೆಯುತ್ತಿರುವ ಅಥವಾ ಪ್ರಕರಣ ಬಾಕಿಯಿರುವ ಸ್ಥಳೀಯ ನ್ಯಾಯಾಲಯವನ್ನು ಸಂಪರ್ಕಿಸಬೇಕಾಗುತ್ತದೆ. ನ್ಯಾಯಾಲಯದ ನಿರ್ಧಾರವು ಅಂತಿಮವಾಗಿರುತ್ತದೆ.

ಪಶ್ಚಿಮ ಉತ್ತರ ಪ್ರದೇಶದ ಸರಧನಾ ಶಾಸಕರಾಗಿರುವ ಸೋಮ್ ತನ್ನ ಹೇಳಿಕೆಗಳು ಮತ್ತು ಮುಝಫ್ಫರ್‌ನಗರ ದಂಗೆಗಳಲ್ಲಿ ತನ್ನ ಪಾತ್ರದ ಕುರಿತು ಆರೋಪಗಳಿಂದಾಗಿ ವಿವಾದಾತ್ಮಕ ವ್ಯಕ್ತಿಯಾಗಿದ್ದಾರೆ.

ಆದಿತ್ಯನಾಥ್ ಸರಕಾರವು 2017ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಮುಝಫ್ಫರ್‌ನಗರಕ್ಕೆ ಸಂಬಂಧಿಸಿದ 100ಕ್ಕೂ ಅಧಿಕ ಪ್ರಕರಣಗಳ ಸಮಾಪನ ಕುರಿತು ಶಿಫಾರಸುಗಳನ್ನು ಕೋರಿದ್ದು,ಈ ಪೈಕಿ ಕನಿಷ್ಠ 74 ಪ್ರಕರಣಗಳನ್ನು ಹಿಂದೆಗೆದುಕೊಳ್ಳಲು ನ್ಯಾಯಾಲಯದ ಅನುಮತಿಯನ್ನು ಕೋರಿಕೊಂಡಿತ್ತು. ಆದರೆ ಈ ಎಲ್ಲ ಕೋರಿಕೆಗಳು ಬಾಕಿಯಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X