Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರವಾಹ ಪೀಡಿತ ಗ್ರಾಮದಲ್ಲಿ ಸಂಸದ...

ಪ್ರವಾಹ ಪೀಡಿತ ಗ್ರಾಮದಲ್ಲಿ ಸಂಸದ ಅನಂತಕುಮಾರ್ ಹೆಗಡೆಗೆ ಮುತ್ತಿಗೆ ಹಾಕಿದ ರೈತರು

"ಓಟು ಕೇಳಲು ಬರುತ್ತೀರಿ. ಈಗ ನಿಮಗೆ ರೈತರ ನೆನಪಾಗುವುದಿಲ್ಲವೇ ?"

ವಾರ್ತಾಭಾರತಿವಾರ್ತಾಭಾರತಿ14 Aug 2019 6:18 PM IST
share
ಪ್ರವಾಹ ಪೀಡಿತ ಗ್ರಾಮದಲ್ಲಿ ಸಂಸದ ಅನಂತಕುಮಾರ್ ಹೆಗಡೆಗೆ ಮುತ್ತಿಗೆ ಹಾಕಿದ ರೈತರು

ಮುಂಡಗೋಡ, ಆ.14: ಉತ್ತರಕನ್ನಡ ಲೋಕಸಭಾ ಸದಸ್ಯ ಅನಂತಕುಮಾರ್ ಹೆಗಡೆಗೆ ತಾಲೂಕಿನ ಚಿಗಳ್ಳಿ ಹಾಗೂ ಮುಡಸಾಲಿ ರೈತರು ಮುತ್ತಿಗೆ ಹಾಕಿದ ಘಟನೆ ಮಂಗಳವಾರ ನಡೆಯಿತು.

ಮುಂಡಗೋಡದಲ್ಲಿ ಭಾರೀ ಮಳೆಯಿಂದ ಬೆಳೆಹಾನಿ ಹಾಗೂ ಆಸ್ತಿಪಾಸ್ತಿ ನಷ್ಟವಾಗಿದ್ದು, ಘಟನಾ ಸ್ಥಳಗಳನ್ನು ಪರಿಶೀಲಿಸಲು ಅನಂತಕುಮಾರ್ ಹೆಗಡೆ ಮುಡಸಾಲಿ ಗ್ರಾಮಕ್ಕೆ ಬಂದಾಗ ಮುತ್ತಿಗೆ ಹಾಕಿದ ರೈತರು, ಭಾರೀ ಮಳೆಗೆ ಚಿಗಳ್ಳಿ ಜಲಾಶಯ ಒಡೆದಿದ್ದರಿಂದ ರೈತರ ಬೆಳೆ ನಾಶವಾಗಿದ್ದು, ಅಪಾರ ಹಾನಿಯಾಗಿದೆ. ಅದನ್ನು ಪರಿಶೀಲಿಸಬೇಕು ಎಂದು ರೈತರು ವಿನಂತಿಸಿದ್ದಾರೆ. ಈ ವೇಳೆ ಅನಂತಕುಮಾರ್ ಹೆಗಡೆ, ತನಗೆ ಇದಕ್ಕಿಂತ ಹೆಚ್ಚಿನ ಪ್ರಮಾನದಲ್ಲಿ ಹಾನಿಯಾದ ಪ್ರದೇಶಗಳಿಗೆ ಹೋಗಬೇಕಿದೆ. ಈಗ ಬರಲು ಸಾಧ್ಯವಿಲ್ಲ ಎಂದು ತಮ್ಮ ವಾಹನವೇರಿ ಮುಂದೆ ಹೋಗಿದ್ದಾರೆ. ಈ ವೇಳೆ ರೈತರು ಸಂಸದರ ವಾಹನ ತಡೆದು, ಚುನಾವಣೆ ಬಂದಾಗ ಮನೆ ಮನೆಗೆ ಬಂದು ಓಟು ಕೇಳುತ್ತಿರಿ. ಈಗ ನಾವು ತೊಂದರೆಯಲ್ಲಿದ್ದೇವೆ. ಯಾರೂ ಬರುವುದಿಲ್ಲ, ನಾವು ಯಾರನ್ನು ಕೇಳಬೇಕು ಎಂದು ಪ್ರಶ್ನಿಸಿದ್ದಾರೆ.

ಆದರೆ ಇದನ್ನು ಕೇಳದೇ ಅಲ್ಲಿಂದ ಹೊರಟ ಸಂಸದರು ಚಿಗಳ್ಳಿ ಗ್ರಾಮದ ಕಡೆಗೆ ಬರುತ್ತಿದ್ದಂತೆ ಮತ್ತೇ ಮುತ್ತಿಗೆ ಹಾಕಿದ ರೈತರು, ನಮ್ಮ ಬೆಳೆ ಹಾನಿಯಾಗಿದೆ. ಈಗ ನೀವು ಬಂದಿದ್ದೀರಿ. ಚುನಾವಣೆ ಬಂದಾಗ ಮನೆ ಮನೆಗೆ ಬಂದು ಓಟು ಕೇಳುತ್ತಿರಿ. ಈಗ ನಿಮಗೆ ರೈತರ ನೆನಪಾಗುವುದಿಲ್ಲವೇ ? ಎಂದು ಅಕ್ರೋಶ ವ್ಯಕ್ತಪಡಿಸಿದರು. ನಂತರ ಪೊಲೀಸರು ಹಾಗೂ ಪಕ್ಷದ ಮುಖಂಡರು ರೈತರನ್ನು ಸಮಾಧಾನ ಪಡಿಸಿದ್ದು, ಆ ಬಳಿಕ ಸಂಸದರು ಅಲ್ಲಿಂದ ತೆರಳಿದರು.

ಸಂಸದ ಅನಂತಕುಮಾರ ಹೆಗಡೆ ಅವರು ಚಿಗಳ್ಳಿ ಡ್ಯಾಂ ಒಡೆದಿದ್ದನ್ನು ನೋಡದೇ ಚಿಗಳ್ಳಿ ರಸ್ತೆ ಮೇಲೆಯೇ ನಿಂತು ಹೊಲವನ್ನು ನೋಡಿ ಸನವಳ್ಳಿ ಜಲಾಶಯಕ್ಕೆ ಹೋಗಬೇಕೆಂದು ಅಲ್ಲಿಂದ ತೆರಳಿದರು. ಚಿಗಳ್ಳಿಯಲ್ಲಿ ರೈತರು ಪ್ರತಿಭಟಿಸಿ ಮುತ್ತಿಗೆ ಹಾಕುತ್ತಿದ್ದಂತೆಯೇ ಮುಂಡಗೋಡಕ್ಕೆ ಬರುವ ಮಾರ್ಗವನ್ನು ಬದಲಾಯಿಸಿ ಚಿಗಳ್ಳಿಯಿಂದ ಸಾಲಗಾಂವ ಮೂಲಕ ಸಂಸದರು ಸನವಳ್ಳಿ ಡ್ಯಾಂ ವೀಕ್ಷಿಸಲು ತೆರಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X