Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತರಿಂದ ವಿಮಾ ಕಂತು ಭರಿಸಿಕೊಳ್ಳಲು...

ರೈತರಿಂದ ವಿಮಾ ಕಂತು ಭರಿಸಿಕೊಳ್ಳಲು ಕೇಂದ್ರ ಸಚಿವ ಸುರೇಶ್ ಅಂಗಡಿ ಸೂಚನೆ

ಬೆಳೆ ವಿಮೆ ಆ.31ರವರೆಗೆ ವಿಸ್ತರಣೆಗೆ ಜಿಲ್ಲಾಧಿಕಾರಿ ಮನವಿ

ವಾರ್ತಾಭಾರತಿವಾರ್ತಾಭಾರತಿ14 Aug 2019 10:20 PM IST
share
ರೈತರಿಂದ ವಿಮಾ ಕಂತು ಭರಿಸಿಕೊಳ್ಳಲು ಕೇಂದ್ರ ಸಚಿವ ಸುರೇಶ್ ಅಂಗಡಿ ಸೂಚನೆ

ಬೆಳಗಾವಿ, ಆ.14: ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅವಧಿಯನ್ನು ವಿಸ್ತರಣೆ ಮಾಡಲು ಕೇಂದ್ರ ಹಣಕಾಸು ಸಚಿವರು ಒಪ್ಪಿಗೆ ನೀಡಿದ್ದು, ಆ ಪ್ರಕಾರ ಬ್ಯಾಂಕುಗಳು ರೈತರಿಂದ ಕಂತು ಭರಿಸಿಕೊಳ್ಳಬೇಕು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ತಿಳಿಸಿದರು.

ಬುಧವಾರ ನಗರದಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಬ್ಯಾಂಕುಗಳು ಹಾಗೂ ವಿಮಾ ಕಂಪೆನಿಗಳ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ವಿಮಾ ಪಾವತಿ ಅವಧಿಯನ್ನು ಆ.20ರವರೆಗೆ ವಿಸ್ತರಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿಕೊಂಡಿದ್ದಾರೆ. ಆ ಪ್ರಕಾರ ಬ್ಯಾಂಕುಗಳು ಹಾಗೂ ಬೆಳೆವಿಮಾ ಕಂಪೆನಿಗಳು ರೈತರಿಂದ ಕಂತುಗಳನ್ನು ಭರಿಸಿಕೊಳ್ಳಬೇಕು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಲೀಡ್ ಬ್ಯಾಂಕಿನ ವ್ಯವಸ್ಥಾಪಕರಿಗೆ ಅವರು ಸೂಚಿಸಿದರು.

ರೈತರಿಗೆ ಬೆಳೆ ವಿಮೆ ಪರಿಹಾರ ನೀಡುವ ಸಂದರ್ಭದಲ್ಲಿ ಕಾಯ್ದೆ ಕಟ್ಟಳೆಗಳಿಗೆ ಕಟ್ಟು ಬೀಳದೆ ಮಾನವೀಯತೆ ಆಧಾರದ ಮೇಲೆ ಪ್ರಕರಣಗಳನ್ನು ಪರಿಗಣಿಸಬೇಕು. ಪ್ರವಾಹ ಹಾಗೂ ಮಳೆಯಿಂದಾಗಿ ಸಂಕಷ್ಟದಲ್ಲಿರುವ ರೈತರು, ನೇಕಾರರು, ಸಣ್ಣ ಕೈಗಾರಿಕಾ ಘಟಕಗಳು ಸೇರಿದಂತೆ ಯಾರೇ ಆಗಲಿ ವಿಮಾ ಪರಿಹಾರ ಕೋರಿದಾಗ ಆದಷ್ಟು ಬೇಗನೇ ಪರಿಹಾರ ಒದಗಿಸಬೇಕು ಎಂದು ಸುರೇಶ್ ಅಂಗಡಿ ಹೇಳಿದರು.

ಆ.31ರವರೆಗೆ ಅವಧಿ ವಿಸ್ತರಣೆಗೆ ಮನವಿ: ಅನೇಕ ಗ್ರಾಮಗಳು ಹಾಗೂ ಬ್ಯಾಂಕುಗಳು ಕೂಡ ಮುಳುಗಡೆಯಾಗಿದ್ದರಿಂದ ಬೆಳೆವಿಮೆ ಕಂತು ಪಾವತಿಸುವ ಅವಧಿಯನ್ನು ಆ.31ರವರೆಗೆ ವಿಸ್ತರಿಸಿದರೆ ಪ್ರವಾಹ ಬಾಧಿತ ಪ್ರದೇಶಗಳಲ್ಲಿನ ರೈತರು ಹಾಗೂ ಬ್ಯಾಂಕುಗಳಿಗೂ ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ತಿಳಿಸಿದರು.

ವಿಸ್ತರಣೆ ಬಗ್ಗೆ ಸರಕಾರದಿಂದ ಇನ್ನೂ ಅಧಿಕೃತ ಆದೇಶ ಬಾರದಿರುವುದರಿಂದ ಬ್ಯಾಂಕುಗಳು ಗೊಂದಲದಲ್ಲಿವೆ. ಅದಾಗ್ಯೂ ಈ ಬಗ್ಗೆ ಸ್ಪಷ್ಟನೆ ಪಡೆಯುವುದಾಗಿ ತಿಳಿಸಿದರು. ಬಹುತೇಕ ಬ್ಯಾಂಕಿನ ಅಧಿಕಾರಿಗಳು ಇದಕ್ಕೆ ಸಹಮತ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸುರೇಶ ಅಂಗಡಿ, ಈ ಬಗ್ಗೆ ಜಿಲ್ಲಾಡಳಿತ ಹಾಗೂ ಬ್ಯಾಂಕುಗಳ ಅಭಿಪ್ರಾಯವನ್ನು ಕೇಂದ್ರ ಸರಕಾರದ ಗಮನಕ್ಕೆ ತಂದು ಆ.31ರ ವರೆಗೆ ಅವಧಿ ವಿಸ್ತರಣೆಗೆ ಪ್ರಯತ್ನಿಸಲಾಗುವುದು ಎಂದರು.

ನೇಕಾರರು ಕೂಡ ಮಗ್ಗಗಳು ಮತ್ತು ಕಚ್ಚಾಸಾಮಗ್ರಿಗಳನ್ನು ಕಳೆದುಕೊಂಡು ಕಷ್ಟದಲ್ಲಿದ್ದಾರೆ ಅವರಿಗೆ ನೀಡಬೇಕಾದ ವಿಮಾ ಪರಿಹಾರಗಳನ್ನು ಕೂಡಲೇ ಬಿಡುಗಡೆ ಮಾಡುವಂತೆ ಸೂಚನೆ ನೀಡಿದ ಜಿಲ್ಲಾಧಿಕಾರಿ, ಅದೇ ರೀತಿ ಸಣ್ಣ ಕೈಗಾರಿಕೆಗಳು, ರೈತರು ಖರೀದಿಸಿರುವ ಟ್ರ್ಯಾಕ್ಟರ್ ವಿಮೆಗಳನ್ನು ಕೂಡ ಪಾವತಿಸಬೇಕು ಎಂದರು.

ಪ್ರವಾಹಕ್ಕೆ ಸಿಲುಕಿ ಜೀವರಕ್ಷಣೆಗೆ ಮನೆಗಳನ್ನು ತೊರೆದಿರುವ ರೈತರು ಹಾಗೂ ಇತರರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್‌ಗಳನ್ನು ಕಳೆದುಕೊಂಡಿರುವುದರಿಂದ ಬ್ಯಾಂಕುಗಳು ಮತ್ತು ವಿಮಾ ಕಂಪನಿಗಳು ಕೂಡ ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಪ್ರದರ್ಶಿಸಬೇಕು ಎಂದು ಅವರು ಹೇಳಿದರು.

ಮರುಪಾವತಿಗೆ ಒತ್ತಾಯಿಸದಂತೆ ಎಚ್ಚರಿಕೆ: ರೈತರು ಈಗಾಗಲೇ ಅನೇಕ ಬ್ಯಾಂಕುಗಳಲ್ಲಿ ಮಾಡಿರುವ ಸಾಲವನ್ನು ಮರುಪಾವತಿಸುವಂತೆ ಯಾವುದೇ ಕಾರಣಕ್ಕೂ ಒತ್ತಾಯಿಸಬಾರದು ಎಂದು ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದರು.

ರೈತರು ಸೇರಿದಂತೆ ಇತರೆ ಸಾಲಗಾರರಿಂದ ಸ್ವಾಧೀನಪಡಿಸಿಕೊಂಡಿರುವ ಆಸ್ತಿಪಾಸ್ತಿಗಳ ಹರಾಜು ಮಾಡುವುದಾಗಲಿ ಅಥವಾ ಹೊಸದಾಗಿ ಸ್ವಾಧೀನಪಡಿಸಿ ಕೊಳ್ಳುವುದನ್ನು ಸದ್ಯಕ್ಕೆ ತಡೆ ಹಿಡಿಯಬೇಕು. ಪರಿಹಾರ ಚೆಕ್‌ಗಳನ್ನು ಖಾತೆ ಜಮೆ ಮಾಡುವ ರೀತಿಯಲ್ಲಿ ನೀಡಲಾಗಿದ್ದು, ಅಂತಹ ಚೆಕ್‌ಗಳನ್ನು ತಕ್ಷಣ ನಗದೀಕರಿಸುವಂತೆ ಬ್ಯಾಂಕುಗಳಿಗೆ ಅವರು ಸೂಚನೆ ನೀಡಿದರು.

ಒಂದು ವೇಳೆ ಯಾವುದೇ ರೀತಿಯ ವಿಮೆ ಅಥವಾ ಪರಿಹಾರ ಹಣವನ್ನು ಸಾಲ ಪಾವತಿಗೆ ತೆಗೆದುಕೊಂಡರೆ ಅಂತಹ ಬ್ಯಾಂಕುಗಳ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ವಿದ್ಯಾರ್ಥಿಗಳು ಪ್ರವಾಹದಲ್ಲಿ ಪಠ್ಯಪುಸ್ತಕ, ಆಧಾರ್ ಕಾರ್ಡ್, ಪಾಸ್ ಬುಕ್ ಮತ್ತಿತರ ದಾಖಲೆಗಳನ್ನು ಕಳೆದುಕೊಂಡಿದ್ದು, ಅವರ ವಿದ್ಯಾರ್ಥಿ ವೇತನ ಕೂಡ ಖಾತೆಗೆ ಜಮೆಯಾಗುವುದರಿಂದ ಅದನ್ನು ನಗದೀಕರಿಸಲು ಬ್ಯಾಂಕುಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಓ ಡಾ.ರಾಜೇಂದ್ರ ಕೆ.ವಿ. ಹೇಳಿದರು.

ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್, ಅಪರ ಜಿಲ್ಲಾಧಿಕಾರಿ ಡಾ.ಬೂದೆಪ್ಪಎಚ್.ಬಿ., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮಲಕ್ಷ್ಮಣ ಅರಸಿದ್ದಿ ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X