Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಧನಂಜಯ ಸ್ಪಿನ್ ಮೋಡಿಗೆ ನ್ಯೂಝಿಲ್ಯಾಂಡ್...

ಧನಂಜಯ ಸ್ಪಿನ್ ಮೋಡಿಗೆ ನ್ಯೂಝಿಲ್ಯಾಂಡ್ ತತ್ತರ

ಮೊದಲ ಟೆಸ್ಟ್

ವಾರ್ತಾಭಾರತಿವಾರ್ತಾಭಾರತಿ14 Aug 2019 11:16 PM IST
share
ಧನಂಜಯ ಸ್ಪಿನ್ ಮೋಡಿಗೆ ನ್ಯೂಝಿಲ್ಯಾಂಡ್ ತತ್ತರ

ಗಾಲೆ, ಆ.14: ಮಳೆ ಬಾಧಿತ ಮೊದಲ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾದ ಸ್ಪಿನ್ನರ್ ಅಕಿಲ ಧನಂಜಯ ಬೌಲಿಂಗ್ ದಾಳಿಗೆ ಸಿಲುಕಿದ ನ್ಯೂಝಿಲ್ಯಾಂಡ್ ಸಂಕಷ್ಟಕ್ಕೆ ಸಿಲುಕಿದೆ.

ಬುಧವಾರ ಇಲ್ಲಿ ಆರಂಭವಾದ ಟೆಸ್ಟ್ ಪಂದ್ಯ ಮಳೆಯಿಂದಾಗಿ ಬೇಗನೇ ಕೊನೆಗೊಂಡಾಗ ನ್ಯೂಝಿಲ್ಯಾಂಡ್ 68 ಓವರ್‌ಗಳಲ್ಲಿ 203 ರನ್‌ಗೆ ಐದು ವಿಕೆಟ್‌ಗಳನ್ನು ಕಳೆದುಕೊಂಡಿತು. ನ್ಯೂಝಿಲ್ಯಾಂಡ್ ಕಳೆದುಕೊಂಡ ಎಲ್ಲ ಐದು ವಿಕೆಟ್‌ಗಳು ಧನಂಜಯರ ಪಾಲಾದವು.

ಹಿರಿಯ ಬ್ಯಾಟ್ಸ್‌ಮನ್ ರಾಸ್ ಟೇಲರ್ ಔಟಾಗದೆ 86 ರನ್(131 ಎಸೆತ, 6 ಬೌಂಡರಿ)ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ. ಮಿಚೆಲ್ ಸ್ಯಾಂಟ್ನರ್(ಔಟಾಗದೆ 8)ಟೇಲರ್‌ಗೆ ಸಾಥ್ ನೀಡುತ್ತಿದ್ದಾರೆ.

ಗಾಲೆಯ ಸ್ಪಿನ್ ಸ್ನೇಹಿ ಪಿಚ್‌ನಲ್ಲಿ ಉಭಯ ತಂಡಗಳು ಮೂವರು ಸ್ಪಿನ್ನರ್‌ಗಳನ್ನು ಕಣಕ್ಕಿಳಿಸಿವೆ. ಸಂಶಯಾಸ್ಪದ ಬೌಲಿಂಗ್ ಶೈಲಿಯ ಕಾರಣಕ್ಕೆ ಈ ಹಿಂದೆ ಅಂತರ್‌ರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬೌಲಿಂಗ್ ನಿಷೇಧಕ್ಕೆ ಒಳಗಾಗಿದ್ದ 25ರ ಹರೆಯದ ಧನಂಜಯ ಇಂದು 4ನೇ ಬಾರಿ ಐದು ವಿಕೆಟ್ ಗೊಂಚಲು ಪಡೆದು ಅತ್ಯುತ್ತಮ ಪ್ರದರ್ಶನದಿಂದ ಗಮನ ಸೆಳೆದರು.

ಟಾಸ್ ಜಯಿಸಿದ ನ್ಯೂಝಿಲ್ಯಾಂಡ್ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಮೊದಲ ವಿಕೆಟ್‌ಗೆ 64 ರನ್ ಜೊತೆಯಾಟ ನಡೆಸಿದ ಆರಂಭಿಕ ಬ್ಯಾಟ್ ್ಸಮನ್‌ಗಳಾದ ಟಾಮ್ ಲಥಾಮ್ (30) ಹಾಗೂ ಜೀತ್ ರಾವಲ್(33)ನ್ಯೂಝಿಲ್ಯಾಂಡ್‌ಗೆ ಉತ್ತಮ ಆರಂಭ ಒದಗಿಸಿದರು. ನಾಲ್ಕು ಎಸೆತಗಳ ಅಂತರದಲ್ಲಿ ಟಾಮ್ ಲಥಾಮ್(30) ಹಾಗೂ ವಿಲಿಯಮ್ಸನ್(0) ವಿಕೆಟನ್ನು ಉರುಳಿಸಿದ ಧನಂಜಯ ಆರಂಭದಲ್ಲೇ ಆಘಾತ ನೀಡಿದರು.

ಇನ್ನೋರ್ವ ಆರಂಭಿಕ ಬ್ಯಾಟ್ಸ್‌ಮನ್ ರಾವಲ್ ವಿಕೆಟ್ ಪಡೆದ ಧನಂಜಯ ನ್ಯೂಝಿಲ್ಯಾಂಡ್ ತಂಡ ಭೋಜನ ವಿರಾಮದ ವೇಳೆಗೆ 71 ರನ್‌ಗೆ 3 ವಿಕೆಟ್ ಕಳೆದುಕೊಳ್ಳುವಂತೆ ಮಾಡಿದರು.

93 ಟೆಸ್ಟ್ ಪಂದ್ಯಗಳನ್ನಾಡಿರುವ ಅನುಭವಿ ಆಟಗಾರ ಟೇಲರ್ ನಾಲ್ಕನೇ ವಿಕೆಟ್‌ಗೆ ಹೆನ್ರಿ ನಿಕೊಲ್ಸ್ ಜೊತೆ 100 ರನ್ ಜೊತೆಯಾಟ ನಡೆಸಿ ಕಿವೀಸ್ ಪ್ರತಿ ಹೋರಾಟ ನೀಡಲು ನೆರವಾದರು. ಈ ಜೋಡಿಯನ್ನು ಧನಂಜಯ ಬೇರ್ಪಡಿಸಿದರು.

ಸ್ವೀಪ್ ಶಾಟ್ ಹೊಡೆಯಲು ಮುಂದಾದ ನಿಕೊಲ್ಸ್ 42 ರನ್‌ಗೆ ಧನಂಜಯಗೆ ವಿಕೆಟ್ ಒಪ್ಪಿಸಿದರು. ನಿಕೊಲ್ಸ್ ಔಟಾದ ಬೆನ್ನಿಗೆ ವಿಕೆಟ್‌ಕೀಪರ್ ಬಿ.ಜೆ. ವಾಟ್ಲಿಂಗ್(1) ಕೂಡ ಪೆವಿಲಿಯನ್ ಹಾದಿ ಹಿಡಿದರು. ಈ ಮೂಲಕ ಆಫ್ ಸ್ಪಿನ್ನರ್ ಧನಂಜಯ ಟೆಸ್ಟ್ ಕ್ರಿಕೆಟ್‌ನಲ್ಲಿ ಐದು ವಿಕೆಟ್‌ಗಳ ಗೊಂಚಲು ತನ್ನದಾಗಿಸಿಕೊಂಡರು.

ಸಂಕ್ಷಿಪ್ತ ಸ್ಕೋರ್

► ನ್ಯೂಝಿಲ್ಯಾಂಡ್: 68 ಓವರ್‌ಗಳಲ್ಲಿ 203/5

(ರಾಸ್ ಟೇಲರ್ ಔಟಾಗದೆ 86, ನಿಕೊಲ್ಸ್ 42, ರಾವಲ್ 33, ಲಥಾಮ್ 30,ಧನಂಜಯ 5-57)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X