Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸಚಿನ್ ಚೊಚ್ಚಲ ಶತಕದ ಸಾಧನೆಗೆ 29 ವರ್ಷ

ಸಚಿನ್ ಚೊಚ್ಚಲ ಶತಕದ ಸಾಧನೆಗೆ 29 ವರ್ಷ

ವಾರ್ತಾಭಾರತಿವಾರ್ತಾಭಾರತಿ14 Aug 2019 11:19 PM IST
share
ಸಚಿನ್ ಚೊಚ್ಚಲ ಶತಕದ ಸಾಧನೆಗೆ 29 ವರ್ಷ

ಮ್ಯಾಂಚೆಸ್ಟರ್, ಆ.14: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಚೊಚ್ಚಲ ಶತಕದ ಸಾಧನೆಗೆ 29 ವರ್ಷ ತುಂಬಿದೆ.

ಓಲ್ಡ್ ಟ್ರಾಫರ್ಡ್‌ನಲ್ಲಿ ಇಂಗ್ಲೆಂಡ್ ವಿರುದ್ಧ 1990, ಆ,9 ರಿಂದ 14ರ ತನಕ ನಡೆದ ಎರಡನೇ ಕ್ರಿಕೆಟ್ ಟೆಸ್ಟ್ ನಲ್ಲಿ ಸಚಿನ್ ತೆಂಡುಲ್ಕರ್ ಎರಡನೇ ಇನಿಂಗ್ಸ್‌ನಲ್ಲಿ ಔಟಾಗದೆ 119 ರನ್ ಗಳಿಸಿದ್ದರು.

  9ನೇ ಟೆಸ್ಟ್‌ನಲ್ಲಿ ಶತಕ ದಾಖಲಿಸಿದ ಸಚಿನ್‌ಗೆ ಆಗ 17ರ ಹರೆಯ. ಮೊದಲ ಇನಿಂಗ್ಸ್‌ನಲ್ಲಿ ಅರ್ಧಶತಕ(68) ದಾಖಲಿಸಿದ್ದ ಸಚಿನ್ ಚೊಚ್ಚಲ ಶತಕದ ಸಾಧನೆಯೊಂದಿಗೆ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

ಎರಡನೇ ಇನಿಂಗ್ಸ್‌ನಲ್ಲಿ ಸಚಿನ್ ತೆಂಡುಲ್ಕರ್ ಶತಕ ಮತ್ತು ಮನೋಜ್ ಪ್ರಭಾಕರ್ (ಔಟಾಗದೆ 67) ಮುರಿಯದ ಜೊತೆಯಾಟದಲ್ಲಿ 160 ರನ್ ದಾಖಲಿಸಿ ಪಂದ್ಯವನ್ನು ಡ್ರಾಗೊಳಿಸಲು ನೆರವಾಗಿದ್ದರು.

 ಟಾಸ್ ಜಯಿಸಿ ಬ್ಯಾಟಿಂಗ್ ಆಯ್ದುಕೊಂಡಿದ್ದ ಇಂಗ್ಲೆಂಡ್ ತಂಡದ ಪರ ಮೊದಲ ಇನಿಂಗ್ಸ್‌ನಲ್ಲಿ ನಾಯಕ ಗ್ರಹಾಂ ಗೂಚ್ (116), ಮೈಕ್ ಅಥರ್ಟನ್(131), ರಾಬಿನ್ ಸ್ಮಿತ್(ಔಟಾಗದೆ 121) ಶತಕಗಳ ನೆರವಿನಲ್ಲಿ 519 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಭಾರತ ಮೊದಲ ಇನಿಂಗ್ಸ್ ನಲ್ಲಿ 432 ರನ್ ಗಳಿಸಿತ್ತು. ನಾಯಕ ಮುಹಮ್ಮದ್ ಅಝರುದ್ದೀನ್ (179), ಸಂಜಯ್ ಮಾಂಜ್ರೇಕರ್(93) ಶತಕ ದಾಖಲಿಸಿದ್ದರು. ಭಾರತ 87 ರನ್‌ಗಳ ಹಿನ್ನಡೆ ಅನುಭವಿಸಿತ್ತು.

ಎರಡನೇ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್‌ಆ್ಯಲನ್ ಲ್ಯಾಂಬ್ ಶತಕ(109), ಅಥರ್ಟನ್(74) , ರಾಬಿನ್ ಸ್ಮಿತ್(ಔಟಾಗದೆ 61) ಅರ್ಧಶತಕಗಳ ಸಹಾಯದಿಂದ 81 ಓವರ್‌ಗಳಲ್ಲಿ 4 ವಿಕೆಟ್ ನಷ್ಟದಲ್ಲಿ 320 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು.

    ಗೆಲುವಿಗೆ 408 ರನ್‌ಗಳ ಸವಾಲನ್ನು ಪಡೆದ ಭಾರತ ಒಂದು ಹಂತದಲ್ಲಿ 127ಕ್ಕೆ 5 ವಿಕೆಟ್‌ಗಳನ್ನು ಕಳೆದುಕೊಂಡು ಸೋಲಿನ ದವಡೆಗೆ ಸಿಲುಕಿತ್ತು. ರವಿ ಶಾಸ್ತ್ರಿ(12), ಎನ್.ಎಸ್.ಸಿಧು (0), ಮಾಂಜ್ರೇಕರ್ ಅರ್ಧಶತಕ(50), ವೆಂಗ್‌ಸರ್ಕಾರ್(32), ಮುಹಮ್ಮದ್ ಅಝರುದ್ದೀನ್(11) ಔಟಾಗಿದ್ದರು. ಕಪಿಲ್ ದೇವ್ 26 ರನ್ ಗಳಿಸಿ ನಿರ್ಗಮಿಸಿದರು. ಈ ಹಂತದಲ್ಲಿ ಸಚಿನ್ ತೆಂಡುಲ್ಕರ್ ಮತ್ತು ಮನೋಜ್ ಪ್ರಭಾಕರ್ ಕ್ರೀಸ್‌ಗೆ ಅಂಟಿಕೊಂಡು ಬ್ಯಾಟ್ ಮಾಡಿ ಭಾರತವನ್ನು ಸೋಲಿನ ದವಡೆಯಿಂದ ಪಾರು ಮಾಡಿದ್ದರು, ಪಂದ್ಯವನ್ನು ಡ್ರಾನಲ್ಲಿ ಕೊನೆಗೊಳಿಸುವಲ್ಲಿ ಯಶಸ್ವಿಯಾಗಿದ್ದರು.

ಸಚಿನ್ 225 ನಿಮಿಷಗಳ ಬ್ಯಾಟಿಂಗ್‌ನಲ್ಲಿ 189 ಎಸೆತಗಳನ್ನು ಎದುರಿಸಿದ್ದರು. 17 ಬೌಂಡರಿಗಳ ಸಹಾಯದಿಂದ 119 ರನ್ ಗಳಿಸಿದ್ದರು. ಸಚಿನ್ ಈ ಶತಕದೊಂದಿಗೆ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದರು. ಸಚಿನ್ ಆ ಬಳಿಕ ಆನೇಕ ದಾಖಲೆಗಳನ್ನು ಬರೆದರು. 100 ಶತಕಗಳನ್ನು ( ಟೆಸ್ಟ್ 51, ಏಕದಿನ 49) ದಾಖಲಿಸಿ ವಿಶ್ವ ದಾಖಲೆ ಬರೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X