Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 15ನೇ ವರ್ಷದಲ್ಲೇ ಜೈಲು ಸೇರಿದ್ದ ಧೀರೆ...

15ನೇ ವರ್ಷದಲ್ಲೇ ಜೈಲು ಸೇರಿದ್ದ ಧೀರೆ ಲೀಲಾಬಾಯಿ ಫಕ್ಕಿರಪ್ಪ ಇಂಗಳಕಿ

93ರ ಹರೆಯದ ಸ್ವಾತಂತ್ರ್ಯ ಹೋರಾಟಗಾರ್ತಿಯ ಕಥೆ ಇದು...

ನಝೀರುದ್ದೀನ್ ತಾಡಪತ್ರಿನಝೀರುದ್ದೀನ್ ತಾಡಪತ್ರಿ14 Aug 2019 11:52 PM IST
share
15ನೇ ವರ್ಷದಲ್ಲೇ ಜೈಲು ಸೇರಿದ್ದ ಧೀರೆ ಲೀಲಾಬಾಯಿ ಫಕ್ಕಿರಪ್ಪ ಇಂಗಳಕಿ

ಮುಂಡಗೋಡ: ಬ್ರಿಟಿಷರ ದಾಸ್ಯದಿಂದ ಭಾರತವನ್ನು ಮುಕ್ತಗಳೊಸಲು ಹೋರಾಡಿದ ಅನೇಕ ಮಹನಿಯರ ಪೈಕಿ ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ 93 ವರ್ಷ ಪ್ರಾಯದ ಲೀಲಾಬಾಯಿ ಫಕ್ಕಿರಪ್ಪ ಇಂಗಳಕಿ ಅವರೂ ಒಬ್ಬರು.

ತಮ್ಮ ಶಾಲಾ ದಿನಗಳಲ್ಲಿ ಒಬ್ಬ ಬಾಲಕಿ ದೇಶದ ಸ್ವಂತಂತ್ರ ಸಂಗ್ರಾಮದಲ್ಲಿ ಭಾಗವಹಿಸಿ ಜೈಲಿಗೆ ಹೋಗಿದ್ದ ಲೀಲಾಬಾಯಿ, 1927ರ ಫೆಬ್ರವರಿ 6ರಂದು ಅವಿಭಜಿತ ಧಾರವಾಡ ಜಿಲ್ಲೆಯ ಗದಗ ತಾಲೂಕಿನ ಕದಡಿ ಗ್ರಾಮದ ಯಮನಪ್ಪ ಹಾಗೂ ಚಂದವ್ವ ಕದಡಿ ದಂಪತಿಯ ಮಗಳಾಗಿ ಜನಿಸಿದರು. ಹುಬ್ಬಳ್ಳಿಯ ಆಶ್ರಮ ಶಾಲೆಯಲ್ಲಿ 7ನೇ ತರಗತಿಯಲ್ಲಿದ್ದಾಗ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಧುಮಕಿದರು. ಇವರಿಗೆ ಹಳ್ಳಿಕೇರಿ ಗುದ್ಲೇಪ್ಪ, ಮಹದೇವ ಮೈಲಾರಿ, ಕಲ್ಗೂದರಿ, ಸ್ವಾತಂತ್ರ ಹೋರಾಟಕ್ಕೆ ಪ್ರೇರಣೆಯಾಗಿದ್ದರು ಎಂದು ಅವರು ವಾರ್ತಾಭಾರತಿಯೊಂದಿಗೆ ತನ್ನ ಅನುಭವ ಹಂಚಿಕೊಂಡಿದ್ದಾರೆ.

1942ರ ಚಲೆಜಾವೊ ಚಳವಳಿಯಲ್ಲಿ ಭಾಗವಹಿಸಿ ಸ್ವಾತಂತ್ರ್ಯ ಹೋರಾಟ ನಡೆಸುತ್ತಿದ್ದ ಅವರನ್ನು ಹುಬ್ಬಳ್ಳಿಯಲ್ಲಿ ಬಂಧಿಸಿದ ಬ್ರಿಟಿಷರು 4-5 ದಿನ ಹಾಗೂ ಧಾರವಾಡದಲ್ಲಿ ಬಂಧಿಸಿ 8-10 ದಿನ ಪೊಲೀಸ್ ಠಾಣೆಯಲ್ಲಿ ಕೂಡಿಹಾಕಿದ್ದರು. ನಂತರ ಬೆಳಗಾವಿಯ ಹಿಂಡಲಾಗ ಜೈಲಿಗೆ ಸ್ಥಳಾಂತರಿಸಿದ್ದರು. ಸುಮಾರು 3 ತಿಂಗಳು ಹಿಂಡಲಾಗ ಜೈಲಿನಲ್ಲಿ ಕಠಿಣ ಶಿಕ್ಷೆ ಅನುಭವಿಸಿ ನಂತರ ಇವರನ್ನು ಬಿಡುಗಡೆ ಮಾಡಲಾಯಿತು. ಆಗ ಲೀಲಾಬಾಯಿಯವರಿಗೆ ಕೇವಲ 15 ವರ್ಷ. ಬಿಡುಗಡೆ ಹೊಂದಿದ ನಂತರ ತಮ್ಮ ಮೆಟ್ರಿಕ್ ವಿದ್ಯಾಭ್ಯಾಸವನ್ನು ಪೂರ್ಣಗೊಳಸಿದರು.

1947ರಲ್ಲಿ ಭಾರತದ ಏರ್ ಫೋರ್ಸ್‌ನ ಉದ್ಯೋಗಿಯಾಗಿದ್ದ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಇಂಗಳಕಿ ಗ್ರಾಮದ ಫಕ್ಕಿರಪ್ಪಇಂಗಳಕಿಯವರನ್ನು ವಿವಾಹವಾದ ಲೀಲಾಬಾಯಿ, ಒಂದು ಗಂಡು ಒಂದು ಹೆಣ್ಣುಮಗಳನ್ನು ಹೊಂದಿದ್ದರು. ಸದ್ಯ ಮಗಳು ಮಲೇಶಿಯಾದಲ್ಲಿದ್ದರೆ, ಮಗ ಬ್ಯಾಂಕ್ ಉದ್ಯೋಗಿಯಾಗಿ ನಿವೃತ್ತಿ ಜೀವನ ನಡೆಸುತ್ತಿದ್ದಾರೆ.

ಪತಿ ಫಕ್ಕಿರಪ್ಪ ನಿವೃತಿ ಹೊಂದಿದ ನಂತರ 1975ರಲ್ಲಿ ಮುಂಡಗೋಡ ತಾಲೂಕಿನ ಬಾಚಣಿಕಿ ಗ್ರಾಮದಲ್ಲಿ ಬಂದು ನೆಲೆಸಿರುವ ಇವರು, ಬಾಚಣಿಕೆ ಗ್ರಾಮದಲ್ಲಿ ವ್ಯವಸಾಯ ಮಾಡುತ್ತಾ ನಮ್ಮೆದಿಯ ಜೀವನ ಸಾಗಿಸುತ್ತಿದ್ದಾರೆ. 1983ರಲ್ಲಿ ಗಂಡನ ಸಾವಿನ ನಿಂದ ಧೃತಿಗೆಡದೆ ಮನೆಯ ಎಲ್ಲ ಜವಾಬ್ದಾರಿಗಳನ್ನು ಹೊತ್ತುಕೊಂಡು ಸಂಸಾರ ನಿಭಾಯಿಸಿದ ಗಟ್ಟಿಗಿತ್ತಿ ಲೀಲಾಬಾಯಿ.

ಜೈಲಿನಲ್ಲಿದ್ದಾಗ ಮಣಿಬೇನ್ ಪಟೇಲ್ ಉತ್ತರ ಭಾರತದ ಸಹರಾಬಾಯಿ, ಮೃದಲಾ ನಮ್ಮ ಶೆಲ್ಲಿನ ಪಕ್ಕದಲ್ಲಿಯೇ ಇದ್ದು, ನಮ್ಮ ಜೊತೆ ಮಾತನಾಡುತ್ತಿದ್ದರು. ಅಲ್ಲದೆ, ವೀರನ ಗೌಡಾ ಪಾಟೀಲ, ನಾಗಮಮ್ಮ ಪಾಟೀಲ ಮಾಗಡಿಯವರನ್ನು ಜೈಲು ವಾಸದ ವೇಳೆ ಪರಿಚಯವಾಗಿತ್ತು ಎಂದು ಲೀಲಾಬಾಯಿ ನೆನಪಿಸಿಕೊಂಡರು.

ಲೀಲಾಬಾಯಿ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರೂ ಇವರಿಗೆ ಸರಕಾರದಿಂದ ಯಾವುದೇ ಜಮೀನು ಇತರೆ ಸೌಕರ್ಯಗಳು ಈ ವರೆಗೆ ಲಭಿಸಿಲ್ಲ. ಕೇವಲ ಸ್ವಾತಂತ್ರ ಹೋರಾಟಗಾರ್ತಿಯರಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ನೀಡುವ ಸಣ್ಣ ಮೊತ್ತದ ಪಿಂಚಣಿ ಹೊರತು ಪಡಿಸಿ ಯಾವುದೇ ಸೌಲಭ್ಯಗಳನ್ನು ನೀಡುತ್ತಿಲ್ಲ ಎಂದು ಅವಲತ್ತುಕೊಂಡಿರುವ ಅವರು, ಪ್ರತೀ ವರ್ಷದ ಸ್ವಾತಂತ್ರ ದಿನಾಚರಣೆಯ ಸಂದರ್ಭ ಸ್ಥಳೀಯ ಆಡಳಿತದ ಅಧಿಕಾರಿಗಳು ಶಾಲು ಹೊದಿಸಿ ಸನ್ಮಾನಿಸುತ್ತಾರೆ ಎಂದು ನೆನಪಿಸಿ ಕೊಂಡರು.

share
ನಝೀರುದ್ದೀನ್ ತಾಡಪತ್ರಿ
ನಝೀರುದ್ದೀನ್ ತಾಡಪತ್ರಿ
Next Story
X