Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು-ಕಾಶ್ಮೀರ: ನಿರ್ಬಂಧಗಳನ್ನು ತಕ್ಷಣ...

ಜಮ್ಮು-ಕಾಶ್ಮೀರ: ನಿರ್ಬಂಧಗಳನ್ನು ತಕ್ಷಣ ಹಿಂದೆಗೆದುಕೊಳ್ಳಲು ಪ್ರಧಾನಿ ಮೋದಿಗೆ ಆ್ಯಮ್ನೆಸ್ಟಿ ಇಂಟರ್‌ನ್ಯಾಷನಲ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ15 Aug 2019 7:18 PM IST
share
ಜಮ್ಮು-ಕಾಶ್ಮೀರ: ನಿರ್ಬಂಧಗಳನ್ನು ತಕ್ಷಣ ಹಿಂದೆಗೆದುಕೊಳ್ಳಲು ಪ್ರಧಾನಿ ಮೋದಿಗೆ ಆ್ಯಮ್ನೆಸ್ಟಿ ಇಂಟರ್‌ನ್ಯಾಷನಲ್ ಆಗ್ರಹ

ಹೊಸದಿಲ್ಲಿ, ಆ.15: ಜಮ್ಮು-ಕಾಶ್ಮೀರದಲ್ಲಿ ಸಂವಹನ ಮಾಧ್ಯಮಗಳ ಮೇಲಿನ ನಿರ್ಬಂಧಗಳನ್ನು ತಕ್ಷಣ ಹಿಂದೆಗೆದುಕೊಳ್ಳುವಂತೆ ಮತ್ತು ರಾಜ್ಯದ ಜನತೆಯೊಂದಿಗೆ ಮಾತುಕತೆ ನಡೆಸುವಂತೆ ಸರಕಾರೇತರ ಸಂಸ್ಥೆಯಾಗಿರುವ ಆ್ಯಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಡಿಯಾ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದೆ.

ಭಾರತವು 73ನೇ ಸ್ವಾತಂತ್ರೋತ್ಸವದ ಸಂಭ್ರಮದಲ್ಲಿರುವಾಗ ಕಳೆದ 10 ದಿನಗಳಿಂದಲೂ ಜಮ್ಮು-ಕಾಶ್ಮೀರದ ಜನತೆಯ ಮೇಲಿನ ನಿರ್ಬಂಧ ಮುಂದುವರಿದಿರುವುದು ವಿರೋಧಾಭಾಸವಾಗಿದೆ ಎಂದಿರುವ ಆ್ಯಮ್ನೆಸ್ಟಿ,ಸಂವಹನ ನಿರ್ಬಂಧಗಳನ್ನು ಹಿಂದೆಗೆದುಕೊಳ್ಳುವಂತೆ ಮತ್ತು ಜನತೆಯೊಂದಿಗೆ ಮಾತುಕತೆಯಲ್ಲಿ ತೊಡಗಿಕೊಳ್ಳುವಂತೆ ಮೋದಿ ಅವರಿಗೆ ಕರೆ ನೀಡಿದೆ.

 ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದಂತೆ ತನ್ನ ನಿರ್ಧಾರಕ್ಕೆ ಭಾರತೀಯರ ಬೆಂಬಲವಿದೆ ಎಂದು ಮೋದಿಯವರು ನಂಬಿದ್ದರೆ ಅವರು ತಕ್ಷಣವೇ ಸಂವಹನ ನಿರ್ಬಂಧಗಳನ್ನು ರದ್ದುಗೊಳಿಸಬೇಕು. ಈ ನಿರ್ಧಾರವು ರಾಜ್ಯದ ಜನರ ಬದುಕಿಗೆ ಸಂಬಂಧಿಸಿರುವುದರಿಂದ ಮೋದಿ ಅವರೊಂದಿಗೆ ಮಾತುಕತೆ ನಡೆಸಬೇಕು ಮತ್ತು ಅವರು ಏನು ಹೇಳುತ್ತಾರೆ ಎನ್ನುವುದನ್ನು ಆಲಿಸಬೇಕು ಎಂದು ಹೇಳಿದ ಆಮ್ನೆಸ್ಟಿಯ ಭಾರತದ ಮುಖ್ಯಸ್ಥ ಆಕಾರ್ ಪಟೇಲ್ ಅವರು, ಜಮ್ಮು-ಕಾಶ್ಮೀರದಲ್ಲಿ ವಿಧಿಸಲಾಗಿರುವ ಯಾವುದೇ ನಿರ್ಬಂಧದ ಅವಧಿ ಸೀಮಿತವಾಗಿರಬೇಕು ಮತ್ತು ಅಂತರರಾಷ್ಟ್ರೀಯ ಕಾನೂನಿನಡಿ ಹೇಳಿರುವಂತೆ ಕಾನೂನುಬದ್ಧ ಉದ್ದೇಶಕ್ಕಾಗಿರಬೇಕು ಎಂದರು.

 ರಾಜ್ಯದಲ್ಲಿಯ ಪ್ರತಿಪಕ್ಷ ನಾಯಕರು ಮತ್ತು ಸಾಮಾಜಿಕ ಕಾರ್ಯಕರ್ತರ ಧ್ವನಿಯನ್ನಡಗಿಸಲಾಗಿದೆ ಎಂದು ಬೆಟ್ಟು ಮಾಡಿರುವ ಆ್ಯಮ್ನೆಸ್ಟಿ,ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ,ಉಮರ್ ಅಬ್ದುಲ್ಲಾ ಮತ್ತು ಮೆಹಬೂಬ ಮುಫ್ತಿ ಅವರು ಎಲ್ಲಿದ್ದಾರೆಂಬ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಜಮ್ಮು-ಕಾಶ್ಮೀರದಲ್ಲಿ ನಾಗರಿಕ ಸ್ವಾತಂತ್ರವನ್ನು ಸಂಪೂರ್ಣವಾಗಿ ಪ್ರತಿಬಂಧಿಸಿರುವ ಈ ಕ್ರಮವು ಕೇವಲ ಉದ್ವಿಗ್ನತೆಯನ್ನು ಹೆಚ್ಚಿಸುತ್ತದೆ,ಜನರನ್ನು ಪ್ರತ್ಯೇಕಿಸುತ್ತದೆ ಮತ್ತು ಮಾನವ ಹಕ್ಕು ಉಲ್ಲಂಘನೆಗಳ ಅಪಾಯವನ್ನು ಇನ್ನಷ್ಟು ಹೆಚ್ಚಿಸುತ್ತದೆ ಎನ್ನುವುದನ್ನು ಭಾರತ ಸರಕಾರವು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X