ನೆರೆ ಸಂತ್ರಸ್ಥರ ನೆರವಿಗೆ 5 ಲಕ್ಷ ರೂ. ದೇಣಿಗೆ ನೀಡಿದ ನಟ ಪುನೀತ್ ರಾಜ್ಕುಮಾರ್
![ನೆರೆ ಸಂತ್ರಸ್ಥರ ನೆರವಿಗೆ 5 ಲಕ್ಷ ರೂ. ದೇಣಿಗೆ ನೀಡಿದ ನಟ ಪುನೀತ್ ರಾಜ್ಕುಮಾರ್ ನೆರೆ ಸಂತ್ರಸ್ಥರ ನೆರವಿಗೆ 5 ಲಕ್ಷ ರೂ. ದೇಣಿಗೆ ನೀಡಿದ ನಟ ಪುನೀತ್ ರಾಜ್ಕುಮಾರ್](https://www.varthabharati.in/sites/default/files/images/articles/2019/08/15/205306-1565880927.jpg)
ಬೆಂಗಳೂರು, ಆ.15: ನಟ ಪುನೀತ್ ರಾಜಕುಮಾರ್ ಅವರು ಗುರುವಾರ ಪ್ರವಾಹ ಸಂತ್ರಸ್ಥರ ನೆರವಿಗಾಗಿ 5 ಲಕ್ಷ ರೂ.ಚೆಕ್ನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರ ಮಾಡಿದರು.
ಡಾಲರ್ಸ್ ಕಾಲನಿಯಲ್ಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನಿವಾಸಕ್ಕೆ ಭೇಟಿ ನೀಡಿ ಚೆಕ್ ನೀಡಿದರು. ಬಳಿಕ ಮಾತನಾಡಿದ ಪುನೀತ್ ರಾಜಕುಮಾರ್ ಅವರು, ಪ್ರವಾಹದಿಂದ ಸಂಕಷ್ಟಕ್ಕೀಡಾಗಿರುವವರಿಗೆ ನೀಡಬೇಕಾದ ನೆರವನ್ನು ಸಿಎಂ ಪರಿಹಾರ ನಿಧಿಗೆ ಹಸ್ತಾಂತರಿಸಿದ್ದೇನೆ. ನಾನು ಒಂದೆರಡು ಬಾರಿ ಸೋಷಿಯಲ್ ಮೀಡಿಯಾದಲ್ಲಿ ಲೈವ್ ಬಂದು ಹೇಳಿದ ಮೇಲೆ ಸಾಕಷ್ಟು ಜನ ಪರಿಹಾರ ನೀಡಲು ಮುಂದಾಗಿದ್ದು, ಸಂತೋಷ ತಂದಿದೆ.ಇನ್ನಷ್ಟು ಆರ್ಥಿಕ ನೆರವು ನೀಡುವ ಯೋಜನೆ ಇದೆ. ಅದಕ್ಕಾಗಿ ಏನೇನೋ ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದೇವೆ. ನಮ್ಮ ಕೈಲಾದ ಸಹಾಯ ಮಾಡುತ್ತೇವೆ ಎಂದು ಹೇಳಿದರು.
Next Story