Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅತಿವೃಷ್ಟಿಯಿಂದ ಭಾರೀ ಹಾನಿ:...

ಅತಿವೃಷ್ಟಿಯಿಂದ ಭಾರೀ ಹಾನಿ: ಚಿಕ್ಕಮಗಳೂರಿನ ಈ ಜಿಲ್ಲಾ, ರಾಜ್ಯ ಹೆದ್ದಾರಿಗಳಲ್ಲಿ ವಾಹನ ಸಂಚಾರ ನಿಷೇಧ

ವಾರ್ತಾಭಾರತಿವಾರ್ತಾಭಾರತಿ16 Aug 2019 8:15 PM IST
share
ಅತಿವೃಷ್ಟಿಯಿಂದ ಭಾರೀ ಹಾನಿ: ಚಿಕ್ಕಮಗಳೂರಿನ ಈ ಜಿಲ್ಲಾ, ರಾಜ್ಯ ಹೆದ್ದಾರಿಗಳಲ್ಲಿ ವಾಹನ ಸಂಚಾರ ನಿಷೇಧ

ಚಿಕ್ಕಮಗಳೂರು.ಆ.16: ಜಿಲ್ಲೆಯ ಮೂಡಿಗೆರೆ, ಕೊಪ್ಪ, ಶೃಂಗೇರಿ ಮತ್ತು ಎನ್.ಆರ್ ಪುರ ತಾಲೂಕುಗಳ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಲ್ಲಿ ಬಿದ್ದ ಭಾರೀ ಮಳೆಯಿಂದಾಗಿ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿ ರಸ್ತೆ, ಸೇತುವೆ, ಮೋರಿಗಳು ಹಾನಿಯಾಗಿವೆ. ವಾಹನ ಸಂಚಾರಿಸಲು ಕಷ್ಟ ಸಾಧ್ಯವಾಗಿರುವ ಹಿನ್ನಲೆಯಲ್ಲಿ ಈ ವ್ಯಾಪ್ತಿಯಲ್ಲಿ ಬರುವ ರಸ್ತೆಗಳ ಪುನರ್ ಸ್ಥಾಪನಾ ಕಾರ್ಯ ಪ್ರಗತಿಯಲ್ಲಿದೆ. ಆದ್ದರಿಂದ ಈ ಕೆಳಕಂಡ ರಸ್ತೆಗಳಲ್ಲಿ ಮೋಟಾರು ವಾಹನಗಳ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳ 1989ರ ನಿಯಮ 221(ಎ)(5) ರ ಪ್ರದತ್ತವಾದ ಅಧಿಕಾರ ಚಲಾಯಿಸಿ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.

ಮೂಡಿಗೆರೆ ತಾಲೂಕಿನ ಗಂಗಾಮೂಲ, ಕೊಟ್ಟಿಗೆಹಾರ ರಾಜ್ಯ ಹೆದ್ದಾರಿ 66, ಕೊಟ್ಟಿಗೆಹಾರ-ಬಾಳೂರು-ನಿಡುವಾಳೆ-ಮಾಗುಂಡಿ-ಬಾಳೆಹೊಳೆ, ಕಳಸ-ಸಂಸೆ-ಕುದುರೆಮುಖ 91.31 ಕಿ.ಮೀ ವ್ಯಾಪ್ತಿಯಲ್ಲಿ ಆಗಸ್ಟ್ 17 ರವರೆಗೆ ಭಾರೀ ವಾಹನಗಳ ಸಂಚಾರ ನಿರ್ಬಂಧಿಸಲಾಗಿದ್ದು, ಬದಲಿ ಮಾರ್ಗವಾಗಿ ಚಿಕ್ಕಮಗಳೂರಿನಿಂದ ಹೊರನಾಡಿಗೆ ಹೋಗುವ ವಾಹನಗಳು ಚಿಕ್ಕಮಗಳೂರು ಆಲ್ದೂರು-ಬಾಳೆಹೊನ್ನೂರು-ಮಾಗುಂಡಿ-ಬಾಳೆಹೊಳೆ-ಕಳಸ ಮಾರ್ಗವಾಗಿ ಸಂಚರಿಸಬಹುದೆಂದು ಅವರು ತಿಳಿಸಿದ್ದಾರೆ.

ಮೂಡಿಗೆರೆ ತಾಲೂಕಿನ ರಾ.ಹೆ.106ರ ಹೊರನಾಡು-ಕಳಸ-ಹೆಬ್ಬಾಳೆ ಸೇತುವೆ, ಮರಸಣಿಗೆ-ಹಿರೇಬೈಲು-ಅಬ್ಬರಗುಡಿಗೆ-ಮಾಸ್ತಿಖಾನ್‍ ಎಸ್ಟೇಟ್-ಸುಂಕಸಾಲೆ-ಕೆಳಗೂರು-ಜಾವಳಿ-ಬಾಳೂರು ಹ್ಯಾಂಡ್ ಪೋಸ್ಟ್ ವರೆಗಿನ 41.70 ಕಿ.ಮೀ ವ್ಯಾಪ್ತಿಯಲ್ಲಿ ಆಗಸ್ಟ್ 17ರವರಗೆ ಎಲ್ಲಾ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಿದ್ದು, ಬದಲಿ ಮಾರ್ಗವಾಗಿ ಮೂಡಿಗೆರೆ-ಆಲ್ದೂರು--ಬಾಳೆಹೊನ್ನೂರು-ಮಾಗುಂಡಿ-ಬಾಳೆಹೊಳೆ-ಕಳಸ ಮಾರ್ಗವಾಗಿ ಸಂಚರಿಸಬಹುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಲಾಗಿದೆ.

ಮೂಡಿಗೆರೆ ತಾಲೂಕಿನ ಹುಳುವಳ್ಳಿ ಹೊರನಾಡು ಜಿಲ್ಲಾ ಮುಖ್ಯರಸ್ತೆಯ 6.70 ಕಿ.ಮೀ  ವ್ಯಾಪ್ತಿಯಲ್ಲಿ ಆಗಸ್ಟ್ 19 ರವರೆಗೆ ಎಲ್ಲಾ ರೀತಿಯ ವಾಹನಗಳನ್ನು ನಿರ್ಬಂಧಿಸಲಾಗಿದೆ. ಬದಲಿ ಮಾರ್ಗವಾಗಿ ಮೂಡಿಗೆರೆ-ಆಲ್ದೂರು-ಬಾಳೆಹೊನ್ನೂರು-ಮಾಗುಂಡಿ-ಬಾಳೆಹೊಳೆ-ಕಳಸ ಮಾರ್ಗವಾಗಿ ಸಂಚರಿಸಬಹುದು. ಇದೇ ತಾಲೂಕಿನ ಬಾಳೆಹೊಳೆ-ಹಿರೇಬೈಲು ಮುಖ್ಯರಸ್ತೆಯ ಬೂದಿಗುಂಡಿ-ಚಿನ್ನಹಡ್ಲು, ಮಲ್ಲೇಶನಗುಡ್ಡ- ಬಾಳಹೊಳೆಯ 16 ಕಿ.ಮೀ, ವ್ಯಾಪ್ತಿಯಲ್ಲಿ ಆಗಸ್ಟ್ 19 ರವರೆಗೆ ಎಲ್ಲಾರೀತಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದ್ದು, ಬದಲಿ ಮಾರ್ಗವಾಗಿ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ. ತಾಲೂಕಿನ ಸುಂಕಸಾಲೆ, ಮರಸೆಣಿಗೆ ಜಿಲ್ಲಾ ಮುಖ್ಯರಸ್ತೆಯ ಬದಲಿಗೆ, ಮೈದಾಡಿ ಕಿರುಗಲಮನೆ-ಮರಸಣಿಗೆ 13.80 ಕಿ.ಮೀ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 15 ರವರೆಗೆ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧಿಸಲಾಗಿದ್ದು, ಬದಲಿ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ. ತಾಲೂಕಿನ ಕೆ.ಕೆಳಗೂರು, ಮರಸಣಿಗೆ ಜಿಲ್ಲಾ ಮುಖ್ಯರಸ್ತೆಯ 8 ಕಿ.ಮೀ ವ್ಯಾಪ್ತಿಯಲ್ಲಿ ಆಗಸ್ಟ್ 17 ರವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ನಿರ್ಬಂಧಿಸಿದ್ದು, ಬದಲಿ ಮಾರ್ಗವಾಗಿ ಸಂಚರಿಸಲು ಅವಕಾಶವಿಲ್ಲ. ಕೂವೆ ಮಾಲಿಂಗನಾಡು, ನೇರಂಕಿ ಜಿಲ್ಲಾ ಮುಖ್ಯರಸ್ತೆಯ ಕೂವೆ-ಮಾಲಿಂಗನಾಡು-ಬಿಳಗಲಿ-ನೇರಂಕಿ ರಸ್ತೆಯ 16.60  ಕಿ.ಮೀ ವ್ಯಾಪ್ತಿಯಲ್ಲಿ ಆಗಸ್ಟ್ 19 ವರಗೆ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ನಿರ್ಬಂಧಿಸಿದ್ದು, ಬದಲಿ ಮಾರ್ಗವಾಗಿ ಸಂಚರಿಸಲು ಅವಕಾಶವಿಲ್ಲ.

ಕೊಪ್ಪ ತಾಲೂಕಿನ ಕಚಿಗೆ ಮೇಗೂರು ಜಿಲ್ಲಾ ಮುಖ್ಯರಸ್ತೆಯ ಗಡಿಕಲ್ಲು-ಹೆಗ್ಗಾರುಕೊಡಿಗೆ-ಕೊಗ್ರೆಯ 19.90 ಕಿ.ಮೀ ವ್ಯಾಪ್ತಿಯಲ್ಲಿ ಆಗಸ್ಟ್ 30 ರವರಗೆ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ನಿರ್ಬಂಧಿಸಿದ್ದು, ಬದಲಿ ಮಾರ್ಗವಾಗಿ ಗಡಿಕಲ್ಲು-ಹೆಗ್ಗಾರುಕೊಡಿಗೆ-ಕೊಗ್ರೆ ಮಾರ್ಗವಾಗಿ ಸಂಚರಿಸಬಹುದು. ಇದೇ ತಾಲೂಕಿನ ಹೊರನಾಡು-ಬಲಿಗೆ-ಮೆಣಸಿನಹಾಡ್ಯ ಜಿಲ್ಲಾ ಮುಖ್ಯರಸ್ತೆಯ 8 ಕಿ.ಮೀ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 15 ರವರೆಗೆ ಭಾರೀ ವಾಹನಗಳ ಸಂಚಾರ ನಿರ್ಬಂಧಿಸಿದ್ದು, ಬದಲಿ ಮಾರ್ಗವಾಗಿ ಜಯಪುರ-ಬಸರೀಕಟ್ಟೆ-ಬಾಳೆಹೊಳೆ-ಕಳಸ -ಹೊರನಾಡು ಮಾರ್ಗವಾಗಿ ಸಂಚರಿಸಬಹುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X