Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇವಾಲಯದ ಅವಶೇಷಗಳ ಮೇಲೆ ಬಾಬರಿ ಮಸೀದಿ...

ದೇವಾಲಯದ ಅವಶೇಷಗಳ ಮೇಲೆ ಬಾಬರಿ ಮಸೀದಿ ನಿರ್ಮಿಸಲಾಗಿದೆ ಎಂದು ನಿರೂಪಿಸಲು ಸಾಕ್ಷಿಗಳನ್ನು ತನ್ನಿ

ರಾಮ್ ಲಲ್ಲಾ ವಿರಾಜಮಾನ್ ಗೆ ಸುಪ್ರೀಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ16 Aug 2019 8:26 PM IST
share
ದೇವಾಲಯದ ಅವಶೇಷಗಳ ಮೇಲೆ ಬಾಬರಿ ಮಸೀದಿ ನಿರ್ಮಿಸಲಾಗಿದೆ ಎಂದು ನಿರೂಪಿಸಲು ಸಾಕ್ಷಿಗಳನ್ನು ತನ್ನಿ

ಹೊಸದಿಲ್ಲಿ, ಆ.16: ಪುರಾತನ ದೇವಸ್ಥಾನದ ಅವಶೇಷದ ಮೇಲೆ ಬಾಬರಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂಬ ಹೇಳಿಕೆಗೆ ಸೂಕ್ತವಾದ ಪುರಾವೆ ಒದಗಿಸಿ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.

ಕಳೆದ ಎರಡು ಸಹಸ್ರ ವರ್ಷಗಳಲ್ಲಿ ನದಿಗಳ ದಡದಲ್ಲಿ ನಾಗರಿಕತೆ ನೆಲೆಗೊಳ್ಳುವುದನ್ನು ನಾವು ಕಂಡಿದ್ದೇವೆ. ಅವು ಈ ಹಿಂದಿನ ನಿರ್ಮಾಣದ ಮೇಲೆಯೇ ನೆಲೆಯಾಗುತ್ತಿದ್ದವು. ಆದರೆ, ಬಾಬರಿ ಮಸೀದಿಯನ್ನು ಪುರಾತನ ಹಿಂದು ದೇವಸ್ಥಾನದ ಅವಶೇಷದ ಮೇಲೆ ನಿರ್ಮಿಸಲಾಗಿದೆ ಎಂಬ ಹೇಳಿಕೆಗೆ ಪುರಾವೆ ಒದಗಿಸಿ ಎಂದು ಸಾಂವಿಧಾನಿಕ ನ್ಯಾಯಪೀಠದ ನ್ಯಾಯಾಧೀಶ ಡಿವೈ ಚಂದ್ರಚೂಡ್ , ರಾಮಲಲ್ಲ ವಿರಾಜ್‌ಮಾನ್ ಪರ ವಕೀಲ ಸಿಎಸ್ ವೈದ್ಯನಾಥನ್‌ಗೆ ಸೂಚಿಸಿದರು.

ವಿವಾದಿತ ಸ್ಥಳದಲ್ಲಿ ಉತ್ಖನನ ನಡೆಸಿದಾಗ ಅಲ್ಲಿ ಭೂಮಿಯಡಿ ಪತ್ತೆಯಾದ ಕ್ರಿಸ್ತಪೂರ್ವ 2ನೇ ಶತಮಾನದ ಕಟ್ಟಡದ 14 ಕಂಬಗಳಲ್ಲಿ ಹಿಂದೂ ದೇವತೆಗಳ ರಚನೆಯಿದೆ ಎಂದು ಭಾರತೀಯ ಪುರಾತತ್ವ ಇಲಾಖೆಯ ಹೇಳಿಕೆಯಲ್ಲಿ ತಿಳಿಸಲಾಗಿದೆ. ಮಸೀದಿಯನ್ನು ಖಾಲಿ ಭೂಮಿಯಲ್ಲಿ ನಿರ್ಮಿಸಿಲ್ಲ, ದೇವಸ್ಥಾನದ ಅವಶೇಷದ ಮೇಲೆ ನಿರ್ಮಿಸಲಾಗಿದೆ ಎಂದು ವೈದ್ಯನಾಥನ್ ನ್ಯಾಯಪೀಠಕ್ಕೆ ತಿಳಿಸಿದರು.

  ಈ ಕಟ್ಟಡದ ಅವಶೇಷ ರಾಮನ ದೇಗುಲ ಎಂಬುದಕ್ಕೆ ಯಾವುದೇ ಸಾಕ್ಷಿಗಳಿಲ್ಲ. ಆದರೆ ಇಲ್ಲಿ ಹಿಂದೂ ದೇಗುಲವಿತ್ತು ಮತ್ತು ಅದು ರಾಮನ ದೇವಾಲಯ ಎಂಬ ನಂಬಿಕೆ ಹಿಂದೂಗಳದ್ದಾಗಿದೆ ಎಂದವರು ಹೇಳಿದರು. 1992ರಲ್ಲಿ ನೆಲಸಮಗೊಳ್ಳುವ ಮೊದಲಿನ ಬಾಬರಿ ಮಸೀದಿಯ ಕಟ್ಟಡದಲ್ಲಿ ಕಂಡು ಬಂದಿದ್ದ ವಿನ್ಯಾಸ, ಚಿತ್ರಗಳನ್ನು ವೈದ್ಯನಾಥನ್ ನ್ಯಾಯಪೀಠಕ್ಕೆ ಸಲ್ಲಿಸಿದರು. ಈ ವಿನ್ಯಾಸ ಇಸ್ಲಾಂ ಧರ್ಮದ ವಿನ್ಯಾಸಕ್ಕೆ ವಿರುದ್ಧವಾಗಿದೆ. ಮುಸ್ಲಿಮರು ಬಾಬ್ರಿ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂಬ ಏಕಮಾತ್ರ ಕಾರಣಕ್ಕೆ ಅದರ ಒಡೆತನವನ್ನು ಅವರಿಗೆ ಬಿಟ್ಟುಕೊಡಲಾಗದು. ರಸ್ತೆಯಲ್ಲಿ ಪ್ರಾರ್ಥನೆಗೆ ಅವಕಾಶ ಮಾಡಿಕೊಟ್ಟರೆ ಆ ರಸ್ತೆ ಮಸೀದಿಯಾಗಿತ್ತು ಎಂದು ಹೇಳಲಾಗದು ಎಂದವರು ವಾದ ಮಂಡಿಸಿದರು.

ಆದರೆ ಉತ್ಖನನ ಸಂದರ್ಭದಲ್ಲಿ ದೊರಕಿದ ಪ್ರಾಣಿ, ಮಾನವನ ರಚನೆಗಳು ದೇವರೊಂದಿಗೆ ಹೇಗೆ ಸಂಬಂಧಿಸಿವೆ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ವೈದ್ಯನಾಥನ್, ಇವು ಪ್ರಾಣಿ ಅಥವಾ ಮನುಷ್ಯರ ಪ್ರತಿಮೆಗಳಲ್ಲ. ಇವುಗಳ ಬಗ್ಗೆ ಪುರಾತತ್ವ ತಜ್ಞರು ತಮ್ಮ ವ್ಯಾಖ್ಯಾನದಲ್ಲಿ ವಿವರಿಸಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X