Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಧಾರಾಕಾರ ಮಳೆ: ಕೊಡಗಿನ 1.18 ಲಕ್ಷ...

ಧಾರಾಕಾರ ಮಳೆ: ಕೊಡಗಿನ 1.18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ

ವಾರ್ತಾಭಾರತಿವಾರ್ತಾಭಾರತಿ16 Aug 2019 11:18 PM IST
share
ಧಾರಾಕಾರ ಮಳೆ: ಕೊಡಗಿನ 1.18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ

ಮಡಿಕೇರಿ, ಆ.16: ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ 1.18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ವಿವಿಧ ಬೆಳೆಗಳು ನೆಲಕಚ್ಚಿದ್ದು, ರೈತರು ಸಂಕಷ್ಟು ಅನುಭವಿಸುವಂತಾಗಿದೆ. ಮತ್ತೊಂದೆಡೆ ವಿವಿಧ ಮೂಲ ಸೌಲಭ್ಯಗಳ ಹಾನಿ, ಮನೆ ಕುಸಿತ ಮುಂತಾದವುಗಳಿಂದಲೂ ಅಪಾರ ಪ್ರಮಾಣ ಹಾನಿ ಸಂಭವಿಸಿದ್ದು, ಪ್ರಾಥಮಿಕ ವರದಿಯಂತೆ ಸುಮಾರು 579 ಕೋಟಿ ರೂ. ನಷ್ಟವಾಗಿರುವುದಾಗಿ ಅಂದಾಜಿಸಲಾಗಿದೆ.

ಇದು ತುರ್ತಾಗಿ ನಡೆಸಿದ ಸಮೀಕ್ಷೆಯಾಗಿದ್ದು, ನಷ್ಟದ ಪ್ರಮಾಣ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಬೆಳೆಹಾನಿ ವಿವರ
ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲೂಕಿನಲ್ಲಿ ಅತಿವೃಷ್ಟಿಯಿಂದ ಅಪಾರ ಪ್ರಮಾಣದ ನಷ್ಟವಾಗಿದ್ದು ಕೃಷಿಕರಿಗೆ ಮಳೆ ಬರೆ ಎಳೆದಿದೆ. 3,623 ಹೆಕ್ಟೇರ್ ನಲ್ಲಿ ಭತ್ತದ ಬೆಳೆ ಕೊಚ್ಚಿ ಹೋಗಿ 4.52 ಕೋಟಿಯಷ್ಟು ನಷ್ಟವಾಗಿದೆ. 1 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕಾಫಿ ಬೆಳೆ ನಾಶವಾಗಿದ್ದು ಅಂದಾಜು   51.85 ಕೋಟಿ ನಷ್ಟವಾಗಿದೆ. 6,350 ಹೆಕ್ಟೇರ್ ಪ್ರದೇಶದಲ್ಲಿ ಕಾಳು ಮೆಣಸು ಬೆಳೆ ನೆಲಕಚ್ಚಿದ್ದು  66.65 ಕೋಟಿ ನಷ್ಟವಾಗಿದೆ ಎಂದು ಜಿಲ್ಲಾಡಳಿತ ಅಧಿಕೃತವಾಗಿ ಘೋಷಿಸಿದೆ.

ಅದೇ ರೀತಿ 40 ಹೆಕ್ಟೇರ್ ನಲ್ಲಿ ಜೋಳ, 1,579 ಹೆಕ್ಟೇರ್ ನಲ್ಲಿ ಅಡಿಕೆ, 904 ಹೆಕ್ಟೇರ್ ಶುಂಠಿ, 2,241 ಹೆಕ್ಟೇರ್ ನಲ್ಲಿ ಬಾಳೆ, 1,806 ಹೆಕ್ಟೇರ್ ಏಲಕ್ಕಿ, 380 ಹೆಕ್ಟೇರ್ ನಲ್ಲಿ ವಿವಿಧ ತರಕಾರಿ ಬೆಳೆ, 18 ಹೆಕ್ಟೇರ್ ನಲ್ಲಿ ಮಾಡಿದ್ದ ಮೀನುಗಾರಿಕೆ ಕೃಷಿಗೆ ಹಾನಿಯಾಗಿದ್ದು, ಅತಿವೃಷ್ಟಿಯಿಂದ ಒಟ್ಟು 1,18,975 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಹಾನಿಗೀಡಾಗಿದ್ದು, ಒಟ್ಟು 266.52 ಕೋಟಿಯಷ್ಟು ಫಸಲು ನಷ್ಟವಾಗಿರುವುದಾಗಿ ಅಂದಾಜಿಸಲಾಗಿದೆ.

ಅತಿವೃಷ್ಟಿಯಿಂದ ಉಂಟಾದ ಪ್ರವಾಹದಿಂದ ರಸ್ತೆ, ಸರ್ಕಾರಿ ಕಟ್ಟಡ, ಕೆರೆ ಹಾಗೂ ಮೋರಿಗಳಿಗೂ ಹಾನಿಯಾಗಿದ್ದು, ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ 81 ಕಾಮಗಾರಿ ಹಾನಿಯಾಗಿ 100.23 ಕೋಟಿ, ಗ್ರಾಮೀಣಾಭಿವೃದ್ಧಿ ಎಂಜಿನಿಯರಿಂಗ್ ವಿಭಾಗದ 786 ಕಾಮಗಾರಿಗೆ 95.78 ಕೋಟಿ, 75 ಅಂಗನವಾಡಿ ಕಟ್ಟಡ ಹಾನಿಗೆ 1.50 ಕೋಟಿ, 168 ಶಾಲಾ ಕಟ್ಟಡ ಹಾನಿಗೆ 2.52 ಕೋಟಿ, 14 ಆಸ್ಪತ್ರೆ ಕಟ್ಟಡಗಳಿಗೆ ಹಾನಿಯಾಗಿ 21 ಲಕ್ಷ,  ನೀರು ಪೂರೈಕೆ ಮತ್ತು ನೈರ್ಮಲ್ಯ ವಿಭಾಗದ 131 ಕಾಮಗಾರಿಗೆ 3.00 ಕೋಟಿ, ಸಣ್ಣ ನೀರಾವರಿ ಇಲಾಖೆ 27 ಕಾಮಗಾರಿಗೆ 6.75 ಕೋಟಿ, ಸೆಸ್ಕ್ ನ 1,467 ಕಾಮಗಾರಿಗೆ ಹಾನಿಯಾಗಿ 61.31 ಲಕ್ಷ,  ನಗರಾಭಿವೃದ್ಧಿ ಇಲಾಖೆಯ 223 ಕಾಮಗಾರಿಗೆ 33.05 ಕೋಟಿ, ಪಿಎಂಜಿಎಸ್‍ವೈನ 15 ಕಾಮಗಾರಿಗೆ 5.57 ಕೋಟಿ, ರಾಷ್ಟ್ರೀಯ ಹೆದ್ದಾರಿಯಲ್ಲಿ 32 ಸ್ಥಳಗಳಲ್ಲಿ ಭೂಕುಸಿತ ಮತ್ತಿತರ ಕಾಮಗಾರಿ ಹಾನಿಯಾಗಿ 58.84 ಕೋಟಿ ಹಾಗೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ 1 ಕಾಮಗಾರಿಗೆ ಹಾನಿಯಾಗಿ 4.20 ಲಕ್ಷ ರೂ.ನಷ್ಟವಾಗಿರುವುದಾಗಿ ಅಂದಾಜು ಮಾಡಲಾಗಿದೆ.

ಒಟ್ಟಾರೆಯಾಗಿ ವಿವಿಧ ಇಲಾಖೆಗಳ 3,020 ಕಾಮಗಾರಿಗಳಿಗೆ ಹಾನಿಯಾಗಿದ್ದು, 305.91 ಕೋಟಿಯಷ್ಟು ನಷ್ಟವಾಗಿರುವುದಾಗಿ ಪ್ರಾಥಮಿಕ ವರದಿ ತಿಳಿಸಿದೆ.

549 ಮನೆಗಳಿಗೆ ಹಾನಿ
ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿ 47 ಮನೆಗಳಿಗೆ ಹಾನಿಯಾಗಿ 30 ಲಕ್ಷ, ಸೋಮವಾರಪೇಟೆ ತಾಲೂಕಿನಲ್ಲಿ 340 ಮನೆಗಳಿಗೆ 3.10 ಕೋಟಿ ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 162 ಮನೆಗಳು ಹಾನಿಯಾಗಿ 3.46 ಕೋಟಿ ಸೇರಿದಂತೆ ಒಟ್ಟು 549 ಮನೆಗಳಿಂದ ಒಟ್ಟು 6.86 ಕೋಟಿ ರೂ. ನಷ್ಟವಾಗಿರುವುದಾಗಿ ಹೇಳಲಾಗಿದೆ.

ಅತಿವೃಷ್ಟಿಯಿಂದ ಮೂರು ತಾಲೂಕಿನ 42 ಗ್ರಾಮ ಪಂಚಾಯತ್ ಗಳ 83 ಪ್ರದೇಶಗಳು ತೊಂದರೆಗೀಡಾಗಿದ್ದು, ಭೂಕುಸಿತ ಮತ್ತು ಪ್ರವಾಹದಿಂದಾಗಿ ಇನ್ನು ಕೂಡಾ ಮಡಿಕೇರಿ-ವೀರಾಜಪೇಟೆ ರಸ್ತೆ (ಲಘು ವಾಹನಗಳಿಗೆ ಸಂಚಾರಕ್ಕೆ ಅವಕಾಶವಿದೆ) ವೀರಾಜಪೇಟೆ-ಮಾಕುಟ್ಟ ರಸ್ತೆ  ಹಾಗೂ ಗಾಳಿಬೀಡು-ಪಾಟಿ-ಕಾಲೂರು ರಸ್ತೆ ಬಂದ್ ಆಗಿರುವುದಾಗಿ ಜಿಲ್ಲಾಡಳಿತ ಪ್ರಕಟನೆಯಲ್ಲಿ ತಿಳಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X