Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಪರಾಧ ಹಿನ್ನೆಲೆಯ ರಾಜಕಾರಣಿಗಳ ಆಯ್ಕೆ...

ಅಪರಾಧ ಹಿನ್ನೆಲೆಯ ರಾಜಕಾರಣಿಗಳ ಆಯ್ಕೆ ಮೌಲ್ಯಾಧಾರಿತ ರಾಜಕಾರಣಕ್ಕೆ ಹಿನ್ನಡೆ : ಆರ್.ಎನ್.ಕುಲಕರ್ಣಿ

ವಾರ್ತಾಭಾರತಿವಾರ್ತಾಭಾರತಿ17 Aug 2019 11:04 PM IST
share
ಅಪರಾಧ ಹಿನ್ನೆಲೆಯ ರಾಜಕಾರಣಿಗಳ ಆಯ್ಕೆ ಮೌಲ್ಯಾಧಾರಿತ ರಾಜಕಾರಣಕ್ಕೆ ಹಿನ್ನಡೆ : ಆರ್.ಎನ್.ಕುಲಕರ್ಣಿ

ಮಂಗಳೂರು, ಆ.17: ದೇಶದಲ್ಲಿ ಶಾಸನವನ್ನು ರಚಿಸುವವರಲ್ಲಿ ಶೇ 36ರಷ್ಟು ಮಂದಿ ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿರುವವರು ಆಯ್ಕೆಯಾಗುತ್ತಿರುವುದು ನಮ್ಮ ದೇಶದ ರಾಜಕೀಯ ವ್ಯವಸ್ಥೆ ಮೌಲ್ಯ ಕಳೆದುಕೊಳ್ಳುತ್ತಿರುವುದರ ಸಂಕೇತವಾಗಿದೆ ಎಂದು ಭಾರತದ ಗುಪ್ತಚರ ವಿಭಾಗದ ನಿವೃತ್ತ ಹಿರಿಯ ಅಧಿಕಾರಿ ಆರ್.ಎನ್.ಕುಲಕರ್ಣಿ ತಿಳಿಸಿದ್ದಾರೆ.

ನಗರದ ಎಸ್.ಡಿ.ಎಂ ವ್ಯವಹಾರ ಅಧ್ಯಯನ ಕಾಲೇಜಿನ ಸಭಾಂಗಣದಲ್ಲಿಂದು ಮಂಥನ ಸಂಘಟನೆಯ ವತಿಯಿಂದ ಹಮ್ಮಿಕೊಂಡ ‘ಫ್ಯಾಕ್ಟ್ಸ್ ಆಫ್ ಟೆರರಿಸಂ ಇನ್ ಇಂಡಿಯಾ’ ಎಂಬ ತಮ್ಮ ಕೃತಿಯ ಬಿಡುಗಡೆ ಸಮಾರಂಭ ವನ್ನುದ್ದೇಶಿಸಿ ಮಾತನಾಡುತ್ತಿದ್ದರು.

ದೇಶದ ಜನ ಸಾಮಾನ್ಯರಲ್ಲಿ ಇರುವ ಅಜ್ಞಾನ ಮತ್ತು ಮಾಹಿತಿಯ ಕೊರತೆಯಿಂದ ಆಳುವ ವರ್ಗದಲ್ಲೂ ಕ್ರಿಮಿನಲ್ ಹಿನ್ನೆಲೆಯ ರಾಜಕಾರಣಿಗಳು ಆಯ್ಕೆಯಾಗುತ್ತಿರುವುದು ನಡೆಯುತ್ತಿದೆ. ದೇಶದಲ್ಲಿ ಕಾನೂನು ಪ್ರಕಾರ ಆಡಳಿತ ನಡೆಯದೆ ಇರುವುದು, ಪ್ರತಿಭೆಗೆ ಸೂಕ್ತ ಸ್ಥಾನ ಮಾನ ದೊರೆಯದೆ ಇರುವುದು, ಅಧಿಕಾರ ನಡೆಸುವ ನಿರ್ಧಾರ ಕೈಗೊಳ್ಳುವಲ್ಲಿ ಸಮರ್ಥರ ಆಯ್ಕೆ ಆಗದಿರುವುದು ದೇಶದ ಬೆಳವಣಿಗೆಗೆ , ಮೌಲ್ಯಾಧಾರಿತ ರಾಜಕಾರಣಕ್ಕೆ ಹಿನ್ನಡೆಯಾಗುತ್ತಿದೆ. ಅದೇ ರೀತಿ ಆಡಳಿತ ನಡೆಸುವವರಲ್ಲೂ ಮಾಹಿತಿಯ ಕೊರತೆ ಇದೆ. ಚುನಾವಣೆಯ ಸಂದರ್ಭದಲ್ಲಿ ಕೆಲವು ರಾಜಕಾರಣಿಗಳು ನಮ್ಮ ಬಳಿ ತಮ್ಮ ರಾಜಕೀಯ ಭವಿಷ್ಯವನ್ನು ಗುಟ್ಟಾಗಿ ಕೇಳುತ್ತಿದ್ದರು. ಸೋತರೆ ನಮ್ಮನ್ನು ಕಾರಣ ಎನ್ನುತ್ತಾರೆ. ಪೊಲೀಸ್ ವ್ಯವಸ್ಥೆ ಹಾಗೂ ಗುಪ್ತಚರ ಇಲಾಖೆ ಪ್ರತ್ಯೇಕವಾಗಿದ್ದರೂ ಅದು ಒಂದೇ ರೀತಿಯ ಇಲಾಖೆ ಎಂಬ ರೀತಿಯ ಅಭಿಪ್ರಾಯ ಜನಸಾಮಾನ್ಯರಲ್ಲಿದೆ. ದೇಶದಲ್ಲಿ ಭಯೋತ್ಪಾಧನೆಗೆ ಧರ್ಮ ಮತ್ತು ಧರ್ಮ ಗ್ರಂಥಗಳ ಬಗ್ಗೆ ಇರುವ ತಪ್ಪು ಗ್ರಹಿಕೆಗಳು ಕಾರಣ. ವಿವಿಧ ಧರ್ಮಗಳ ನಡುವಿನ ಜನರ ನಡುವೆ ಪರಸ್ಪರ ಗೌರವ ಭಾವನೆಗಳಿದ್ದಾಗ ಒಳ್ಳೆಯ ವಾತವರಣ ನಿರ್ಮಾಣ ವಾಗುತ್ತದೆ ಎಂದು ಕುಲಕರ್ಣಿ ತಿಳಿಸಿದ್ದಾರೆ.

ಪುಸ್ತಕವನ್ನು ಬಿಡುಗಡೆಗೊಳಿಸಿದ ನಿವೃತ್ತ ಡಿಜಿಪಿ ಎಂ.ಎನ್.ಕೃಷ್ಣ ಮೂರ್ತಿ ಮಾತನಾಡುತ್ತಾ ದೇಶದಲ್ಲಿ ಓಟ್ ಬ್ಯಾಂಕ್‌ಗಾಗಿ ನಡೆಯುತ್ತಿರುವ ರಾಜಕಾರಣ ನಡುವೆ ಇಂದಿನ ಯುವ ಜನರಿಗೆ ಮಾಹಿತಿ ನೀಡುವ ದೃಷ್ಟಿಯಲ್ಲಿ ಆರ್.ಎನ್. ಕುಲಕರ್ಣಿಯವರ ಪುಸ್ತಕ ಉಪಯುಕ್ತವಾಗಿದೆ ಎಂದು ಶುಭ ಹಾರೈಸಿದರು.

ಸಮಾರಂಭದಲ್ಲಿ ಮಣಿಪಾಲ ಉನ್ನತ ಶಿಕ್ಷಣ ಅಧ್ಯಯನ ಸಂಸ್ಥೆಯ ಪ್ರೊ. ಡಾ.ನಂದನ ಪ್ರಭು ಕೃತಿಯನ್ನು ಪರಿಚಯಿಸಿದರು. ಮಂಥನ ಸಂಸ್ಥೆಯ ಸಂಘಟಕರಾದ ಸುನಿಲ್ ಕುಲಕರ್ಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X