Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಪ್ರವಾಹ ಪೀಡಿತ ಪ್ರದೇಶಗಳಿಗೆ...

ಮಡಿಕೇರಿ: ಪ್ರವಾಹ ಪೀಡಿತ ಪ್ರದೇಶಗಳಿಗೆ ಎಸ್‍ವೈಎಸ್ ನಾಯಕರು ಭೇಟಿ

ವಾರ್ತಾಭಾರತಿವಾರ್ತಾಭಾರತಿ17 Aug 2019 11:34 PM IST
share
ಮಡಿಕೇರಿ: ಪ್ರವಾಹ ಪೀಡಿತ ಪ್ರದೇಶಗಳಿಗೆ ಎಸ್‍ವೈಎಸ್ ನಾಯಕರು ಭೇಟಿ

ಮಡಿಕೇರಿ, ಆ.17: ಜಿಲ್ಲೆಯಲ್ಲಿ ಸುರಿದ ಮಹಾಮಳೆಗೆ ಕಾವೇರಿ ಪ್ರವಾಹದಿಂದ ನದಿ ದಡ ನಿವಾಸಿಗಳು ಮನೆ ಹಾಗೂ ಆಸ್ತಿ ಪಾಸ್ತಿ ಕಳೆದುಕೊಂಡಿರುವ ಬಡ ಕುಟುಂಬಗಳ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಸಂಘಟನೆ ಕಾರ್ಯಕರ್ತರು ಮಾಡುತ್ತಿದ್ದಾರೆ ಎಂದು ಎಸ್.ವೈ.ಎಸ್  ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಶೀದ್ ಝೈನಿ ತಿಳಿಸಿದರು. 

ಪ್ರವಾಹ ಪೀಡಿತ ಪ್ರದೇಶ ಹಾಗೂ ನಿರಾಶ್ರಿತರ ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಟ್ಟದಕಾಡು, ಬರಡಿ, ಕುಂಬಾರಗುಂಡಿ, ಗುಹ್ಯ, ಕೂಡುಗದ್ದೆ, ಕರಡಿಗೋಡು, ಕೊಂಡಗೇರಿ ಭಾಗದ ಕಾವೇರಿ ನದಿ ಪ್ರವಾಹ ಪೀಡಿತ ಪ್ರದೇಶ ಹಾಗೂ ನೆಲ್ಲಿಹುದಿಕೇರಿಯ ಮುತ್ತಪ್ಪ ದೇವಸ್ಥಾನ, ಮದರಸ, ಶಾದಿ ಮಹಲ್ ಹಾಗೂ ಶಾಲೆಗಳಲ್ಲಿ ನೆಲೆಸಿರುವ ಸಂತ್ರಸ್ತರನ್ನು ಭೇಟಿ ಮಾಡಲಾಗಿದೆ. ನದಿ ದಡದಲ್ಲಿ ಎಲ್ಲಾ ಜನಾಂಗದವರು ವಾಸವಾಗಿದ್ದು, ಪ್ರವಾಹ ಸಂದರ್ಭದಲ್ಲಿ ಜಾತಿ ಮತ ಬೇಧವಿಲ್ಲದೆ ಎಲ್ಲರೂ ಒಗ್ಗೂಡಿ ಅವರನ್ನು ರಕ್ಷಣೆ ಮಾಡುವ ಮೂಲಕ ಪರಿಹಾರ ಕೇಂದ್ರಗಳಲ್ಲಿ ಇರಿಸಿ ತುರ್ತು ವ್ಯವಸ್ಥೆಗಳನ್ನು ಕೈಗೊಂಡಿರುವುದು ನಿಜಕ್ಕೂ ಅಭಿನಂದನಾರ್ಹ ಎಂದರು.

ರಾಜ್ಯ ಹಾಗೂ ಜಿಲ್ಲೆಯಲ್ಲಿ ಎಸ್‍ವೈಎಸ್ ಹಾಗೂ ಎಸ್‍ಎಸ್‍ಎಫ್ ಕಾರ್ಯಕರ್ತರು ಪ್ರವಾಹದ ನಂತರವೂ ಸಕ್ರಿಯವಾಗಿ ತೊಡಗಿಸಿಕೊಂಡು ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರ ಸಂತ್ರಸ್ತರಿಗೆ ಶಾಶ್ವತ ಸೂರು ಹಾಗೂ ಪರಿಹಾರ ನೀಡುವ ವಿಶ್ವಾಸ ಇದೆ. ದಾನಿಗಳು ಸಂತ್ರಸ್ತರಿಗೆ ಸಹಾಯ ಮಾಡುವ ಮೂಲಕ ಕೈಜೋಡಿಸಬೇಕೆಂದರು.

ಈ ಸಂದರ್ಭ ರಾಜ್ಯ ಸಮಿತಿಯ ಪ್ರಮುಖರಾದ ಹಂಝ ಸಖಾಫಿ, ಅಹ್ಮದ್ ಸಖಾಫಿ, ದಕ್ಷಿಣ ಕನ್ನಡ ಜಿಲ್ಲಾ ಎಸ್.ವೈ.ಎಸ್ ಅಧ್ಯಕ್ಷ ಅಶ್ರಫ್ ಕಿನಾರ, ಜಿಲ್ಲಾ ಎಸ್ವೈಎಸ್ ಅಧ್ಯಕ್ಷ ಹಫೀಳ್ ಸಹದಿ, ಪ್ರಮುಖರಾದ ಕೆ.ಎಂ ಸಯ್ಯದ್ ಭಾವ, ಉಸ್ಮಾನ್ ಸುಂಟಿಕೊಪ್ಪ, ಅಬ್ದುಲ್ಲಾ, ಹಂಝಾ, ಶಿಹಾಬುದ್ದೀನ್ ಸೇರಿದಂತೆ ಅನೇಕರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X