Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯಡಿಯೂರಪ್ಪರ ಸುಪುತ್ರನಿಂದ ವರ್ಗಾವಣೆ...

ಯಡಿಯೂರಪ್ಪರ ಸುಪುತ್ರನಿಂದ ವರ್ಗಾವಣೆ ದಂಧೆಯ ನಿರ್ವಹಣೆ: ಕುಮಾರಸ್ವಾಮಿ ಆರೋಪ

ವಾರ್ತಾಭಾರತಿವಾರ್ತಾಭಾರತಿ18 Aug 2019 9:37 PM IST
share
ಯಡಿಯೂರಪ್ಪರ ಸುಪುತ್ರನಿಂದ ವರ್ಗಾವಣೆ ದಂಧೆಯ ನಿರ್ವಹಣೆ: ಕುಮಾರಸ್ವಾಮಿ ಆರೋಪ

ಉಡುಪಿ, ಆ.18: ಇಂದು ರಾಜ್ಯದಲ್ಲಿ ವರ್ಗಾವಣೆ ವಿಚಾರದಲ್ಲಿ ಬಿಡ್ಡಿಂಗ್ ನಡೆಸಲಾಗುತ್ತಿದೆ. ಯಡಿಯೂರಪ್ಪ ವರ್ಗಾವಣೆ ದಂಧೆಯಲ್ಲಿ ಬಿಡ್ಡಿಂಗ್ ನಿರ್ವಹಣೆ ಮಾಡಲು ತಮ್ಮ ಸುಪುತ್ರನನ್ನೇ ಬಿಟ್ಡಿದ್ದಾರೆ. ಈ ವಿಚಾರ ಇಡೀ ಸರಕಾರದ ಅಧಿಕಾರಿಗಳಿಗೆ ಗೊತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ವಿಚಾರಗಳು ಹೊರಬರಲಿವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದಿನ ಮೈತ್ರಿ ಸರಕಾರ ವರ್ಗಾವಣೆ ದಂಧೆ ಮಾಡಿರುವುದಾಗಿ ದೂರಿದ್ದ ಯಡಿಯೂರಪ್ಪ ಪಟಾಲಂ, ಈಗ ಜೈಲಿಗೆ ಹೋಗಿ ಬಂದ ತಹಶೀಲ್ದಾರ್‌ರನ್ನು ಯಲಹಂಕಗೆ ಪೋಸ್ಟಿಂಗ್ ಮಾಡಿದೆ. ಇದಕ್ಕಾಗಿ ಎಷ್ಟು ಹಣ ನಿಗದಿಪಡಿಸಿ ತಹಶೀಲ್ದಾರ್‌ನಿಂದ ಲೂಟಿ ಮಾಡಿದೆ ಎಂಬುದನ್ನು ಹೇಳಲಿ ಎಂದರು.

ಫೋನ್ ಕದ್ದಾಲಿಕೆಯ ಬಗ್ಗೆ ಯಾವುದೇ ರೀತಿಯ ತನಿಖೆ ನಡೆಸುವ ಮುಕ್ತ ಅಧಿಕಾರ ರಾಜ್ಯ ಸರಕಾರಕ್ಕೆ ಇದೆ. ಇದರ ಬಗ್ಗೆ ವೈಯ್ಯಕ್ತಿಕವಾಗಿ ನನಗೆ ಯಾವುದೇ ಆತಂಕ ಇಲ್ಲ. ಕಳೆದ 14 ತಿಂಗಳ ನನ್ನ ಆಡಳಿತದಲ್ಲಿ ಯಾವುದೇ ಸೂಚನೆಯನ್ನು ಮುಖ್ಯಮಂತ್ರಿಯಾಗಿ ನೀಡದಿರುವಾಗ ನಾನು ಯಾಕೆ ಭಯಪಡಬೇಕು ಎಂದು ಅವರು ಪ್ರಶ್ನಿಸಿದರು.

ಈ ವಿಚಾರದಲ್ಲಿ ಕೆಲವು ಟಿವಿ ಮಾಧ್ಯಮಗಳು ಕುಮಾರಸ್ವಾಮಿಯನ್ನು ಹತ್ತಿಕ್ಕಲು ಯಡಿಯೂರಪ್ಪಗೆ ಇದೊಂದು ಅಸ್ತ್ರ ಎಂದು ಸುದ್ದಿ ಮಾಡುತ್ತಿದೆ. ಆದರೆ ಯಾವ ಅಸ್ತ್ರವೂ ಇಲ್ಲ, ಎಲ್ಲ ಅಸತ್ತ ನಿಶ್ಯಸ್ತ್ರ ಆಗಿ ಹೋಗುತ್ತದೆ. ಕೆಲವು ಮಾಧ್ಯಮಗಳು ನನ್ನ ವಿರುದ್ಧ ಸುಳ್ಳು ಹೇಳಲು ಹೊರಟಿವೆ. ಆದರೆ ಅವರಿಗೆ ಅದರಲ್ಲಿ ಯಾವುದೇ ಫಲ ಸಿಗಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಸರಿಯಾಗಿ ಕೆಲಸ ಮಾಡಿದ್ದೇನೆ ಎಂದರು.

ರಾಜ್ಯ ನೆರೆಯಿಂದಾಗಿ ಸಂಕಷ್ಟದಲ್ಲಿರುವಾಗ ಸರಕಾರದ ನಡವಳಿಕೆಯನ್ನು ಟೀಕೆ ಮಾಡಿದರೆ ಸಂತ್ರಸ್ತರಿಗೆ ಪರಿಹಾರ ಸಿಗುವುದಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ಅನಾಹುತ ಸರಿಪಡಿಸುವ ನಿಟ್ಟಿನಲ್ಲಿ ಒಕ್ಕೊರಲಿನಿಂದ ಕೆಲಸ ಮಾಡಬೇಕಾಗಿದೆ. ಆತಂಕದಲ್ಲಿರುವ ಸಂತ್ರಸ್ತರಿಗೆ ವಿಶ್ವಾಸ ಮೂಡಿಸಿ ಹೊಸ ಬದುಕನ್ನು ಕಟ್ಟಿಕೊಡುವ ಕೆಲಸವನ್ನು ಸರಕಾರ ಮಾಡಬೇಕು ಎಂದು ಅವರು ಹೇಳಿದರು.

ಕೇಂದ್ರ ನಾಯಕರು ರಾಜ್ಯ ಪ್ರವಾಸ ಮಾಡಿದರೂ ಈವರೆಗೆ ಯಾವುದೇ ನೆರವು ನೀಡಿಲ್ಲ. ಈ ಹಿಂದೆ ಇದ್ದ ಯುಪಿಎ ಸರಕಾರ ಆಗ ಸಂಭವಿಸಿದ ನೆರೆಯ ಪರಿಹಾರಕ್ಕಾಗಿ ತಕ್ಷಣ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಿತ್ತು. ಆದರೆ ಈಗ ಇರುವ ಬಿಜೆಪಿ ಕೇಂದ್ರ ಸರಕಾರ ಒಂದು ಬಿಡಿಗಾಸು ಬಿಡುಗಡೆ ಮಾಡಿಲ್ಲ. ಅವರಿಗೆ ಈ ಕರ್ನಾಟಕದ ಬಗ್ಗೆ ಎಷ್ಟು ಗೌರವ ಇದೆ ಎಂಬುದು ಇದರಿಂದ ತಿಳಿಯುತ್ತದೆ. ಆದುದರಿಂದ ಇಂತಹ ಪರಿಸ್ಥಿತಿ ಕೇಂದ್ರ ಹಾಗೂ ರಾಜ್ಯ ಸರಕಾರ ತಕ್ಷಣವೇ ಸ್ಪಂದಿಸಿ ನೆರವು ಒದಗಿಸೇಕು ಎಂದು ಅವರು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಸಾರಾ ಮಹೇಶ್, ವಿಧಾನ ಪರಿಷತ್ ಸದಸ್ಯ ಬೋಜೆಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X