Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಧ್ಯಪ್ರದೇಶದ ಓಟಗಾರನಿಗೆ ಬೋಲ್ಟ್ ದಾಖಲೆ...

ಮಧ್ಯಪ್ರದೇಶದ ಓಟಗಾರನಿಗೆ ಬೋಲ್ಟ್ ದಾಖಲೆ ಮುರಿಯುವ ಕನಸು

ವಾರ್ತಾಭಾರತಿವಾರ್ತಾಭಾರತಿ18 Aug 2019 11:33 PM IST
share
ಮಧ್ಯಪ್ರದೇಶದ ಓಟಗಾರನಿಗೆ ಬೋಲ್ಟ್ ದಾಖಲೆ ಮುರಿಯುವ ಕನಸು

ಭೋಪಾಲ್, ಆ.18: ಬರಿಗಾಲಲ್ಲಿ ಹನ್ನೊಂದು ಸೆಕೆಂಡ್‌ಗಳಲ್ಲಿ ನೂರು ಮೀಟರ್ ಓಡಿದ ಮಧ್ಯಪ್ರದೇಶದ 19 ಹರೆಯದ ಓಟಗಾರ ರಾಮೇಶ್ವರ್ ಸಿಂಗ್ ಗುರ್ಜಾರ್‌ಗೆ ವಿಶ್ವದ ಓಟದ ರಾಜ ಜಮೈಕಾದ ಉಸೈನ್ ಬೋಲ್ಟ್ ದಾಖಲೆಯನ್ನು ಮುರಿಯುವ ಕನಸು ಕಾಣುತ್ತಿದ್ದಾರೆ.

ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ನಾರ್ವಾರ್‌ನ ಕೃಷಿಕ ಕುಟುಂಬದ ರಾಮೇಶ್ವರ್ ಅವರು 11 ಸೆಕೆಂಡ್‌ಗಳಲ್ಲಿ 100 ಮೀಟರ್ ಓಡಿರುವ ವೀಡಿಯೊ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವೀಡಿಯೊವನ್ನು ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ಪ್ರತಿಭೆಗೆ ಸೂಕ್ತ ಅವಕಾಶ ದೊರೆಯಬೇಕೆಂದು ಕ್ರೀಡಾಸಚಿವರನ್ನು ಒತ್ತಾಯಿಸಿದ್ದರು.

ರಾಮೇಶ್ವರ್ ಅವರ ಓಟದ ವೀಡಿಯೊವನ್ನು ವೀಕ್ಷಿಸಿದ ರಾಜ್ಯ ಕ್ರೀಡಾ ಸಚಿವ ಜಿತು ಪಾಟ್ವಾರಿ ಅವರು ರಾಮೇಶ್ವರ್‌ಗೆ ತಮ್ಮನ್ನು ಭೇಟಿಯಾಗುವಂತೆ ಸಲಹೆ ನೀಡಿದ್ದರು.

ರಾಮೇಶ್ವರ್ ಶನಿವಾರ ಭೋಪಾಲ್‌ಗೆ ಆಗಮಿಸಿ ಕ್ರೀಡಾ ಸಚಿವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ರಾಮೇಶ್ವರ್ ಉಸೈನ್ ಬೋಲ್ಟ್ 9.5 ಸೆಕೆಂಡ್‌ಗಳಲ್ಲಿ 100 ಮೀಟರ್ ಓಟದಲ್ಲಿ ಗುರಿ ಮುಟ್ಟಿದ್ದರು. ನನಗೆ ಸೂಕ್ತ ತರಬೇತಿ ನೀಡಿದಲ್ಲಿ ನಾನು ಬೋಲ್ಟ್ ದಾಖಲೆಯನ್ನು ಮುರಿಯುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಮೇಶ್ವರ್ ಕಳೆದ 6 ತಿಂಗಳಿನಿಂದ 100 ಮೀಟರ್ ಓಟದ ಅಭ್ಯಾಸ ನಡೆಸುತ್ತಿದ್ದಾರೆ. ಆರ್ಮಿಗೆ ಸೇರಲು ವಿಫಲವಾದ ಬಳಿಕ ಓಟದ ಅಭ್ಯಾಸ ನಡೆಸುತ್ತಿದ್ದಾರೆ. ‘‘ಮೊದಲು ನಾನು 12 ಸೆಕೆಂಡ್‌ಗಳಲ್ಲಿ 100 ಮೀಟರ್ ಓಟವನ್ನು ಕ್ರಮಿಸಿದ್ದೆ. ಆರು ತಿಂಗಳ ಅಭ್ಯಾಸ ಬಳಿಕ 11 ಸೆಕೆಂಡ್‌ಗಳಲ್ಲಿ ಗುರಿ ತಲುಪಲು ಸಾಧ್ಯವಾಗಿದೆ’’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಪೌಷ್ಟಿಕಾಂಶದ ಕೊರತೆಯಿಂದಾಗಿ ದೈಹಿಕ ಸಮಸ್ಯೆಗಳನ್ನು ಎದುರಿಸುತ್ತಿರುವುದಾಗಿ ಹೇಳಿದ್ದಾರೆ.

ರಾಮೇಶ್ವರ್ ಗುರ್ಜಾರ್ ಓಡುವ ವೀಡಿಯೊ ವೀಕ್ಷಿಸಿದ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ. ಆತನನ್ನು ತನ್ನ ಹತ್ತಿರ ಆ ಯುವಕನನ್ನು ಕರೆದು ತನ್ನಿ.ತರಬೇತಿ ಸಂಸ್ಥೆಯೊಂದಕ್ಕೆ ನೋಂದಣಿ ಮಾಡಿಸುವುದಾಗಿ ಹೇಳಿದ್ದಾರೆ.

ರಾಮೇಶ್ವರ್ 10ನೇ ತರಗತಿ ತನಕ ಶಿಕ್ಷಣ ಪಡೆದಿದ್ದಾರೆ. ಕುಟುಂಬ ಆರ್ಥಿಕವಾಗಿ ಹಿಂದುಳಿದ ಕಾರಣದಿಂದಾಗಿ ಅವರಿಗೆ ಮುಂದಕ್ಕೆ ಹೋಗಲು ಸಾಧ್ಯವಾಗಿಲ್ಲ. 2009ರಲ್ಲಿ ಉಸೈನ್ ಬೋಲ್ಟ್ 9.58 ಸೆಕೆಂಡ್‌ಗಳಲ್ಲಿ 100 ಮೀಟರ್ ಗುರಿಯನ್ನು ತಲುಪಿ ದಾಖಲೆ ಬರೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X