ಜಮ್ಮುವಿನ ತಾವಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರ ರಕ್ಷಣೆ
ಶ್ರೀನಗರ, ಆ.19: ಜಮ್ಮುವಿನ ತಾವಿ ನದಿಯಲ್ಲಿ ಸೋಮವಾರ ಮಧ್ಯಾಹ್ನ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರನ್ನು ಸೇನೆ ಕಾರ್ಯಾಚರಣೆಯ ಮೂಲಕ ಪಾರು ಮಾಡಿದೆ.
ನಿರ್ಮಾಣ ಹಂತದಲ್ಲಿರುವ ಜಮ್ಮುವಿನ ಸೇತುವೆಯ ಬಳಿ ಮೀನು ಹಿಡಿಯಲು ತೆರಳಿದ್ದ ನಾಲ್ವರು ನದಿಯಲ್ಲಿ ಏಕಾಏಕಿ ಪ್ರವಾಹ ಏರಿಕೆಯಾದ ಹಿನ್ನೆಲೆಯಲ್ಲಿ ಸಿಲುಕಿಕೊಂಡರು ಎನ್ನಲಾಗಿದೆ.
ಈ ಪೈಕಿ ಇಬ್ಬರು ಈಜಿ ನದಿಯ ದಡ ಸೇರಿದರು. ಆದರೆ ನದಿಯ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರನ್ನು ಕಾರ್ಯಾಚರಣೆ ನಡೆಸಿದ ಭಾರತದ ವಾಯು ಸೇನೆ ಹೆಲಿಕಾಪ್ಟರ್ ಬಳಸಿ ಪಾರು ಮಾಡಿದೆ ಎಂದು ತಿಳಿದು ಬಂದಿದೆ.
Next Story