Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಿಬ್ರಾಲ್ಟರ್‌ನಿಂದ ಹೊರಟ ಇರಾನ್ ತೈಲ...

ಜಿಬ್ರಾಲ್ಟರ್‌ನಿಂದ ಹೊರಟ ಇರಾನ್ ತೈಲ ಟ್ಯಾಂಕರ್

ಹಡಗನ್ನು ವಶಪಡಿಸಿಕೊಳ್ಳುವ ಅಮೆರಿಕದ ಬೇಡಿಕೆಯನ್ನು ತಿರಸ್ಕರಿಸಿದ ಬ್ರಿಟಿಶ್ ಭೂಭಾಗ

ವಾರ್ತಾಭಾರತಿವಾರ್ತಾಭಾರತಿ19 Aug 2019 10:21 PM IST
share
ಜಿಬ್ರಾಲ್ಟರ್‌ನಿಂದ ಹೊರಟ ಇರಾನ್ ತೈಲ ಟ್ಯಾಂಕರ್

ಜಿಬ್ರಾಲ್ಟರ್, ಆ. 19: ಇರಾನ್‌ನ ತೈಲ ಟ್ಯಾಂಕರನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಅಮೆರಿಕ ಮಾಡಿರುವ ಒತ್ತಾಯವನ್ನು ಬ್ರಿಟಿಶ್ ಭೂಭಾಗ ಜಿಬ್ರಾಲ್ಟರ್ ತಿರಸ್ಕರಿಸಿದ ಬಳಿಕ, ಟ್ಯಾಂಕರ್ ಅಲ್ಲಿಂದ ಹೊರಟಿದೆ.

ಇರಾನ್‌ನ ತೈಲ ಟ್ಯಾಂಕರ್ ‘ಗ್ರೇಸ್ 1’ನ್ನು ಬ್ರಿಟನ್ ನೌಕಾ ಪಡೆಯು ಜುಲೈ 4ರಂದು ನಿಲ್ಲಿಸಿ ಜಿಬ್ರಾಲ್ಟರ್ ಕರಾವಳಿಯಲ್ಲಿ ಇರಿಸಿತ್ತು. ಐರೋಪ್ಯ ಒಕ್ಕೂಟದ ದಿಗ್ಬಂಧನಗಳನ್ನು ಉಲ್ಲಂಘಿಸಿ ಟ್ಯಾಂಕರ್ ಸಿರಿಯಕ್ಕೆ ತೈಲ ಸಾಗಿಸುತ್ತಿದೆ ಎಂಬ ಸಂಶಯದಲ್ಲಿ ಅದನ್ನು ಜಿಬ್ರಾಲ್ಟರ್ ವಶಕ್ಕೆ ತೆಗೆದುಕೊಂಡಿತ್ತು.

ರವಿವಾರ ಸಂಜೆ ಸೂಪರ್ ಟ್ಯಾಂಕರ್‌ನ ಲಂಗರನ್ನು ಎತ್ತಲಾಗಿದೆ ಹಾಗೂ ಅದು ಈಗ ದಕ್ಷಿಣದತ್ತ ಸಾಗುತ್ತಿದೆ.

ಟ್ಯಾಂಕರನ್ನು ಬಿಡುಗಡೆ ಮಾಡುವಂತೆ ಜಿಬ್ರಾಲ್ಟರ್‌ನ ಸುಪ್ರೀಂ ಕೋರ್ಟ್ ಗುರುವಾರ ಆದೇಶ ನೀಡಿತ್ತು.

ಟ್ಯಾಂಕರ್‌ನ ಹೆಸರನ್ನು ಈಗ ‘ಅಡ್ರಿಯಾನ್ ಡಾರ್ಯ’ ಎಂಬುದಾಗಿ ಬದಲಿಸಲಾಗಿದೆ. ಟ್ಯಾಂಕರ್ ಮತ್ತು ಅದರಲ್ಲಿರುವ 21 ಲಕ್ಷ ಬ್ಯಾರಲ್ ತೈಲವನ್ನು ಸಾಗಿಸಲು ಹೊಸ ನಾವಿಕರು ಆಗಮಿಸಿದ್ದಾರೆ ಎಂದು ಇರಾನ್ ಅಧಿಕಾರಿಗಳು ಹೇಳಿದ್ದಾರೆ.

► ಟ್ಯಾಂಕರ್ ವಶಪಡಿಸುವ ವಿರುದ್ಧ ಅಮೆರಿಕಕ್ಕೆ ಎಚ್ಚರಿಕೆ ನೀಡಿದ ಇರಾನ್

ತನ್ನ ತೈಲ ಟ್ಯಾಂಕರ್ ಜಿಬ್ರಾಲ್ಟರ್‌ನಿಂದ ಹೊರಹೋದ ಬಳಿಕ, ಮುಕ್ತ ಸಮುದ್ರದಲ್ಲಿ ಅದನ್ನು ವಶಪಡಿಸಿಕೊಳ್ಳಲು ಹೊಸ ಪ್ರಯತ್ನಗಳನ್ನು ಮಾಡದಂತೆ ಇರಾನ್ ಅಮೆರಿಕಕ್ಕೆ ಎಚ್ಚರಿಕೆ ನೀಡಿದೆ ಎಂದು ಇರಾನ್ ವಿದೇಶ ಸಚಿವಾಲಯದ ವಕ್ತಾರರು ಸೋಮವಾರ ಸರಕಾರಿ ಟೆಲಿವಿಶನ್‌ನಲ್ಲಿ ಹೇಳಿದ್ದಾರೆ.

ಜಿಬ್ರಾಲ್ಟರ್‌ನಿಂದ ಹೊರ ಬಂದಿರುವ ಇರಾನ್ ತೈಲ ಟ್ಯಾಂಕರ್ ಸೋಮವಾರ ಗ್ರೀಸ್‌ನತ್ತ ತೆರಳುತ್ತಿದೆ ಎನ್ನುವುದನ್ನು ನೌಕಾಯಾನ ಅಂಕಿಅಂಶಗಳು ತೋರಿಸಿವೆ.

ಹಡಗು ಜಿಬ್ರಾಲ್ಟರ್‌ನಿಂದ ಹೊರ ಹೋದ ಬಳಿಕ, ಅದನ್ನು ವಶಪಡಿಸಿಕೊಳ್ಳಬೇಕೆಂಬ ತನ್ನ ಬೇಡಿಕೆಯನ್ನು ಅಮೆರಿಕ ನವೀಕರಿಸಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಇರಾನ್ ವಿದೇಶ ಸಚಿವಾಲಯದ ವಕ್ತಾರ ಅಬ್ಬಾಸ್ ವೌಸವಿ, ‘‘ಇಂಥ ಕೃತ್ಯವು ಮುಕ್ತ ಸಾಗರದಲಿ ಸಂಚರಿಸುವ ಹಡಗುಗಳ ಸುರಕ್ಷತೆಗೆ ಅಪಾಯ ಒಡ್ಡುತ್ತದೆ. ನಾವು ಅಧಿಕೃತ ಮಾರ್ಗಗಳ ಮೂಲಕ, ಅದರಲ್ಲೂ ಮುಖ್ಯವಾಗಿ ಸ್ವಿಸ್ ರಾಯಭಾರ ಕಚೇರಿ ಮೂಲಕ ಎಚ್ಚರಿಕೆ ನೀಡಿದ್ದೇವೆ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X