ಒಕ್ಕೆತ್ತೂರು ಮಸೀದಿ ವತಿಯಿಂದ ನೆರೆ ಸಂತ್ರಸ್ತರಿಗೆ ಸಾಮಗ್ರಿಗಳ ವಿತರಣೆ
ಬಂಟ್ವಾಳ, ಆ. 19: ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ನೆರೆ ಸಂತ್ರಸ್ತರಿಗೆ ವಿಟ್ಲದ ಒಕ್ಕೆತ್ತೂರು ಮಸೀದಿಯ ಜಮಾಅತ್ ಪರಿಹಾರ ನಿಧಿಯಿಂದ ವಿವಿಧ ಸಾಮಗ್ರಿಗಳನ್ನು ನೀಡಲಾಯಿತು.
ಒಕ್ಕೆತ್ತೂರು ಬದ್ರಿಯಾ ಜುಮಾ ಮಸೀದಿ ವತಿಯಿಂದ ಮಸೀದಿಯ ಸರ್ವ ಸದಸ್ಯರ ಸಹಕಾರದಲ್ಲಿ ಮಸೀದಿ ಖತೀಬ್ ಅಬ್ದುಲ್ ಮಜೀದ್ ಸಖಾಫಿ ಅವರ ನೇತೃತ್ವದಲ್ಲಿ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನಿಧಿಗಳನ್ನು ಸಂಗ್ರಹಿಸಲಾಯಿತು.
ಸುಮಾರು 75 ರೂ. ಸಾವಿರಕ್ಕಿಂತಲೂ ಅಧಿಕ ಮೌಲ್ಯದ ವಸ್ತುಗಳನ್ನು ಕೊಂಡೊಯ್ಯಲಾಯಿತು. ಈ ಸಂದರ್ಭ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ವಿ.ಎಸ್ ಇಬ್ರಾಹಿಂ ಹಾಗೂ ಸದಸ್ಯರು ಉಪಸ್ಥಿತರಿದ್ದರು.
Next Story