Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಡೆಬಿಟ್ ಕಾರ್ಡ್ ವ್ಯವಸ್ಥೆಗೆ ಅಂತ್ಯ...

ಡೆಬಿಟ್ ಕಾರ್ಡ್ ವ್ಯವಸ್ಥೆಗೆ ಅಂತ್ಯ ಹಾಡಲು ಮುಂದಾಗಿದೆ ಎಸ್‍ ಬಿಐ!

ಇನ್ನು ಮುಂದೆ ಗ್ರಾಹಕರು ಹಣ ವಿತ್ ಡ್ರಾ ಮಾಡುವುದು ಹೀಗೆ…

ವಾರ್ತಾಭಾರತಿವಾರ್ತಾಭಾರತಿ20 Aug 2019 2:23 PM IST
share
ಡೆಬಿಟ್ ಕಾರ್ಡ್ ವ್ಯವಸ್ಥೆಗೆ ಅಂತ್ಯ ಹಾಡಲು ಮುಂದಾಗಿದೆ ಎಸ್‍ ಬಿಐ!

ಮುಂಬೈ, ಆ.20: ದೇಶದ ಅತ್ಯಂತ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಯೋಜನೆಯಂತೆಯೇ ಮುಂದುವರಿದರೆ, ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಡೆಬಿಟ್ ಕಾರ್ಡ್ ವ್ಯವಸ್ಥೆಯ ಅಂತ್ಯದ ಆರಂಭವೆಂದೇ ಹೇಳಬಹುದು. ಡಿಜಿಟಲ್ ಪಾವತಿಗಳಿಗೆ ಹೆಚ್ಚಿನ ಮಹತ್ವ ನೀಡುವುದಕ್ಕಾಗಿ ಬ್ಯಾಂಕಿಂಗ್ ವ್ಯವಸ್ಥೆಯಿಂದ ಡಿಜಿಟಲ್ ಕಾರ್ಡುಗಳನ್ನು ದೂರಗೊಳಿಸುವ ಉದ್ದೇಶ ಎಸ್‍ ಬಿಐಗಿದೆ ಎಂದು ಹೇಳಲಾಗಿದೆ.

ಎಸ್‍ ಬಿಐ ಗ್ರಾಹಕರು ಡೆಬಿಟ್ ಕಾರ್ಡನ್ನು ಅತಿಯಾಗಿ ಅವಲಂಬಿಸಿರುವ ಹೊರತಾಗಿಯೂ ಬ್ಯಾಂಕ್ ಇಂತಹ ಒಂದು ಯೋಜನೆ ಹೊಂದಿದೆ. “ಡೆಬಿಟ್ ಕಾರ್ಡುಗಳಿಗೆ ಅಂತ್ಯ ಹಾಡುವುದು ನಮ್ಮ ಇಚ್ಛೆ ಹಾಗೂ ಇದನ್ನು ಖಂಡಿತ ಸಾಧ್ಯವಾಗಿಸಬಹುದು ಎಂದು ನನಗೆ ತಿಳಿದಿದೆ'' ಎಂದು ವಾರ್ಷಿಕ ಫೈಬ್ಯಾಕ್ ಸಮಾವೇಶವನ್ನುದ್ದೇಶಿಸಿ ಮಾತನಾಡುತ್ತಾ ಎಸ್‍ ಬಿಐ ಚೇರ್ಮೆನ್ ರಜನೀಶ್ ಕುಮಾರ್ ಹೇಳಿದ್ದಾರೆ.

ದೇಶದಲ್ಲಿ ಸುಮಾರು 90 ಕೋಟಿ ಡೆಬಿಟ್ ಕಾರ್ಡುಗಳು ಹಾಗೂ 3 ಕೋಟಿ ಕ್ರೆಡಿಟ್ ಕಾರ್ಡುಗಳಿವೆ ಎಂದು ತಿಳಿಸಿದ ಅವರು ‘ಯೊನೊ’ ಪ್ಲಾಟ್‍ಫಾರ್ಮ್ ನಂತಹ ಡಿಜಿಟಲ್ ಸೊಲ್ಯೂಶನ್ಸ್ ಮೂಲಕ ಡೆಬಿಟ್ ಕಾರ್ಡ್ ಮುಕ್ತ ದೇಶ ಸಾಧ್ಯ ಎಂದರು. ‘ಯೊನೊ’ ಮೂಲಕ ಎಟಿಎಂಗಳಿಂದ ಹಣ ವಿತ್ ಡ್ರಾ ಮಾಡಬಹುದು ಅಥವಾ ಕಾರ್ಡ್ ಇಲ್ಲದೆಯೇ ವಿವಿಧೆಡೆ  ಖರೀದಿಗಳಿಗೆ ಪಾವತಿಸಬಹುದಾಗಿದೆ.

ತಮ್ಮ ಬ್ಯಾಂಕ್ ಈಗಾಗಲೇ 68,000 ಯೊನೊ ಕ್ಯಾಶ್ ಪಾಯಿಂಟ್ ಸ್ಥಾಪಿಸಿದ್ದು, ಮುಂದಿನ 18 ತಿಂಗಳುಗಳಲ್ಲಿ  ಇಂತಹ 10 ಲಕ್ಷ ಕ್ಯಾಶ್‍ ಪಾಯಿಂಟ್ ತೆರೆಯುವ ಉದ್ದೇಶವಿದೆ ಎಂದು ಅವರು  ಹೇಳಿದ್ದಾರೆ.

ಮುಂದಿನ ಐದು ವರ್ಷಗಳಲ್ಲಿ ಜನರು ತಮ್ಮ ಕಿಸೆಗಳಲ್ಲಿ ಪ್ಲಾಸ್ಟಿಕ್ ಡೆಬಿಟ್ ಕಾರ್ಡುಗಳನ್ನು ಹೊಂದುವ ಅಗತ್ಯವಿಲ್ಲ, ವರ್ಚುವಲ್ ಕೂಪನ್ ಗಳೇ ಭವಿಷ್ಯದಲ್ಲಿ ಬಳಕೆಯಾಗಲಿವೆ ಎಂದು ಅವರು ಹೇಳಿದ್ದಾರೆ. ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X