ಸಂಪುಟ ವಿಸ್ತರಣೆ ಬಳಿಕ ಪಕ್ಷದಲ್ಲಿ ಅಸಮಾಧಾನವಿದೆ: ಸಚಿವ ಕೆ.ಎಸ್.ಈಶ್ವರಪ್ಪ
![ಸಂಪುಟ ವಿಸ್ತರಣೆ ಬಳಿಕ ಪಕ್ಷದಲ್ಲಿ ಅಸಮಾಧಾನವಿದೆ: ಸಚಿವ ಕೆ.ಎಸ್.ಈಶ್ವರಪ್ಪ ಸಂಪುಟ ವಿಸ್ತರಣೆ ಬಳಿಕ ಪಕ್ಷದಲ್ಲಿ ಅಸಮಾಧಾನವಿದೆ: ಸಚಿವ ಕೆ.ಎಸ್.ಈಶ್ವರಪ್ಪ](https://www.varthabharati.in/sites/default/files/images/articles/2019/08/20/206169-1566321147.jpg)
ಮೈಸೂರು,ಆ.20: ಸಚಿವ ಸಂಪುಟ ವಿಸ್ತರಣೆ ನಂತರ ಬಿಜೆಪಿ ಪಕ್ಷದಲ್ಲಿ ಸಣ್ಣಪುಟ್ಟ ಅಸಮಾಧಾನವಿದ್ದು, ಅದನ್ನು ಪಕ್ಷದ ನಾಯಕರು ಬಗೆಹರಿಸುತ್ತಾರೆ ಎಂದು ನೂತನ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮಂಗಳವಾರ ಮೊದಲ ಬಾರಿಗೆ ಮೈಸೂರಿಗೆ ಆಗಮಸಿದ ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿ ಶ್ರೀಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ನಂತರ ಕೆಲವರಿಗೆ ಅಸಮಾಧಾನವಾಗಿರುವುದು ನಿಜ. ಹಾಗಂತ ಎಲ್ಲರಿಗೂ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಕ್ರೈಟೀರಿಯಾದಡಿಯಲ್ಲಿ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ತೀರ್ಮಾನವಾಗಿದೆ ಎಂದು ಹೇಳಿದರು.
ಮೈಸೂರಿಗೆ ಸಚಿವ ಸ್ಥಾನ ಸಿಗದಿದ್ದರೂ ದಸರಾವನ್ನು ಯಶಸ್ವಿಯಾಗಿ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಮೈಸೂರಿಗೂ ಅವಕಾಶ ಲಭಿಸಲಿದೆ ಎಂದು ಹೇಳಿದರು.
Next Story