Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ:...

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಹಾಸ್ಟೆಲ್ ಹೊರಗುತ್ತಿಗೆ ನೌಕರರ ಧರಣಿ, ಮೆರವಣಿಗೆ

ವಾರ್ತಾಭಾರತಿವಾರ್ತಾಭಾರತಿ21 Aug 2019 6:46 PM IST
share
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಹಾಸ್ಟೆಲ್ ಹೊರಗುತ್ತಿಗೆ ನೌಕರರ ಧರಣಿ, ಮೆರವಣಿಗೆ

ಬೆಂಗಳೂರು, ಆ.21: ಹೊರ ಗುತ್ತಿಗೆ ನೌಕರರನ್ನು ಕೈಬಿಡುವ ಪ್ರಕ್ರಿಯೆ ನಿಲ್ಲಿಸಬೇಕು. ಜತೆಗೆ, ಉದ್ಯೋಗ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಹಾಸ್ಟೆಲ್ ಗಳ ಡಿ ವರ್ಗದ ಹೊರಗುತ್ತಿಗೆ ನೌಕರರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಬುಧವಾರ ನಗರದ ಕ್ರಾಂತಿವಿರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಹಾಸ್ಟೆಲ್ ಹೊರಗುತ್ತಿಗೆ ನೌಕರರು, ಸರಕಾರ ನಮ್ಮ ಬೇಡಿಕೆ ಈಡೇರಿಸಲಿ ಎಂದು ಆಗ್ರಹಿಸಿದರು.

ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಅಡಿಯಲ್ಲಿರುವ ವಿದ್ಯಾರ್ಥಿ ನಿಲಯಗಳಲ್ಲಿ ನೇರ ನೇಮಕಾತಿ ಮೂಲಕ ಸುಮಾರು 4 ಸಾವಿರ ಅಡುಗೆಯವರು ಅಡುಗೆ ಸಹಾಯಕರನ್ನು ಭರ್ತಿ ಮಾಡಿರುವುದರಿಂದ ಆ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೊರ ಸಂಪನ್ಮೂಲ ಸಿಬ್ಬಂದಿಗಳನ್ನು ಬಿಡುಗಡೆಗೊಳಿಸಲಾಗಿದೆ. ಇದರಿಂದ ನಾವು ಬೀದಿ ಪಾಲಾಗಿದ್ದೇವೆ. ಅಷ್ಟೇ ಅಲ್ಲದೆ, ನಮ್ಮ ವಯಸ್ಸು ಮೀರಿದ್ದು, ಬೇರೆ ಯಾವ ಕೆಲಸಗಳಲ್ಲಿ ತೊಡಗಿಕೊಳ್ಳಬೇಕು ಎನ್ನುವುದೇ ಗೊತ್ತಾಗುತ್ತಿಲ್ಲ. ನಮ್ಮ ಕುಟುಂಬಗಳು ಸಹ ನಮ್ಮನ್ನೇ ನಂಬಿವೆ ಎಂದು ಪ್ರತಿಭಟನಾಕಾರರು ಹೇಳಿದರು.

ಮೆರವಣಿಗೆಯನ್ನುದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷ ನಿತ್ಯಾನಂದ ಸ್ವಾಮಿ, ಹೊಸದಾಗಿ ನೇಮಕಗೊಳ್ಳುವ ಖಾಯಂ ನೌಕರರನ್ನು ಹೊಸ ಹಾಸ್ಟೆಲ್ ಗಳಿಗೆ ಮಾತ್ರ ನಿಯೋಜಿಸುತ್ತೇವೆ. ಹಾಲಿ ಹೊರಗುತ್ತಿಗೆ ನೌಕರರ ನಿವೃತ್ತಿವರೆಗೆ ಸೇವಾ ಭದ್ರತೆ ನೀಡುವ ಕುರಿತು ಪರಿಶೀಲಿಸಲಾಗುವುದು ಎಂದು ಈ ಹಿಂದೆ ಸರಕಾರ ಭರವಸೆ ನೀಡಿತ್ತು. ಆದರೆ, ಇದೀಗ ನೇರ ನೇಮಕಾತಿಯಲ್ಲಿ ಆಯ್ಕೆಯಾದವರನ್ನು ಕೆಲಸಕ್ಕೆ ಸೇರಿಸಿಕೊಂಡು ಹೊರಗುತ್ತಿಗೆ ನೌಕರರನ್ನು ತೆಗೆದು ಹಾಕುತ್ತಿದ್ದಾರೆ. ಕೆಲಸಕ್ಕೆ ಹಾಜರಾದ ನೇರ ನೇಮಕಾತಿ ಸಿಬ್ಬಂದಿ ಬದಲು ಆಳುಗಳನ್ನು ಕರೆಸಿ ಕೆಲಸ ಮಾಡಿಸುತ್ತಿರುವುದು ಖಂಡನೀಯ ಎಂದರು.

ಸುಮಾರು 5 ಸಾವಿರ ಹೊರಗುತ್ತಿಗೆ ನೌಕರರು ಕೆಲಸ ಕಳೆದು ಕೊಳ್ಳುತ್ತಿದ್ದಾರೆ. ಹಾಗಾಗಿ ಕೂಡಲೇ ನೌಕರರಿಗೆ ಮರಳಿ ಕೆಲಸ ಕೊಡಬೇಕು, ನಿವೃತ್ತಿವರೆಗೂ ಸೇವಾ ಭದ್ರತೆ ನೀಡಿ, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಭೀಮಶೆಟ್ಟಿ ಯಂಪಳ್ಳಿ, ಸಂಘದ ಸಹ ಕಾರ್ಯದರ್ಶಿ ಕೆ.ಹನುಮೇಗೌಡ ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X