Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಮೂಳೆ ಕ್ಯಾನ್ಸರ್‌ನ ಈ ಆರಂಭಿಕ ಲಕ್ಷಣಗಳು...

ಮೂಳೆ ಕ್ಯಾನ್ಸರ್‌ನ ಈ ಆರಂಭಿಕ ಲಕ್ಷಣಗಳು ನಿಮಗೆ ಗೊತ್ತಿರಲಿ

ವಾರ್ತಾಭಾರತಿವಾರ್ತಾಭಾರತಿ21 Aug 2019 7:10 PM IST
share
ಮೂಳೆ ಕ್ಯಾನ್ಸರ್‌ನ ಈ ಆರಂಭಿಕ ಲಕ್ಷಣಗಳು ನಿಮಗೆ ಗೊತ್ತಿರಲಿ

ಮೂಳೆಯಲ್ಲಿ ಗಡ್ಡೆ ರೂಪುಗೊಳ್ಳತೊಡಗಿದಾಗ ಮೂಳೆ ಕ್ಯಾನ್ಸರ್ ಆರಂಭವಾಗುತ್ತದೆ. ಕ್ಯಾನ್ಸರ್ ಸಾಮಾನ್ಯವಾಗಿ ಕೈ ಅಥವಾ ಕಾಲಿನ ಅತ್ಯಂತ ಉದ್ದದ ಮೂಳೆಗೆ ದಾಳಿಯಿಡುತ್ತದೆ. ಅದು ವೃದ್ಧಿಗೊಳ್ಳುತ್ತಿದ್ದಂತೆ ಮೂಳೆಯ ಸಹಜ ಜೀವಕೋಶಗಳನ್ನು ನಾಶಗೊಳಿಸುತ್ತದೆ ಮತ್ತು ದೇಹದ ಇತರ ಭಾಗಗಳಿಗೆ ಹರಡುತ್ತದೆ. ಮೂಳೆ ಕ್ಯಾನ್ಸರ್ ಹೆಚ್ಚಾಗಿ ಮಕ್ಕಳು ಮತ್ತು ಯುವಜನರನ್ನು ಬಾಧಿಸುತ್ತದೆ.

► ಮೂಳೆ ಕ್ಯಾನ್ಸರ್‌ನ ಸಾಮಾನ್ಯ ವಿಧಗಳು

ಆಸ್ಟಿಯೋಸರ್ಕೋಮಾ: ಇದು ಅತ್ಯಂತ ಸಾಮಾನ್ಯ ರೂಪದ ಮೂಳೆ ಕ್ಯಾನ್ಸರ್ ಆಗಿದ್ದು,ಹೆಚ್ಚಾಗಿ 10ರಿಂದ 30 ವರ್ಷ ವಯಸ್ಸಿನಲ್ಲಿ ಕಾಣಿಸಿಕೊಳ್ಳುತ್ತದೆ. ಹೆಚ್ಚಾಗಿ ಕೈಗಳು,ಪಾದಗಳು ಮತ್ತು ಅಸ್ಥಿಕುಹರ ಮೂಳೆ ಕ್ಯಾನ್ಸರ್‌ಗೆ ಗುರಿಯಾಗುತ್ತವೆ.

ಇವಿಂಗ್ಸ್ ಸರ್ಕೋಮಾ: ಇದು ಕೂಡ ಹೆಚ್ಚಾಗಿ ಮಕ್ಕಳು ಮತ್ತು ಯುವಜನರಲ್ಲಿ ಕಾಣಿಸಿಕೊಳ್ಳುತ್ತದೆ. ಕೈಗಳು,ಕಾಲುಗಳು, ಎದೆ, ಅಸ್ಥಿ ಕುಹರ ಮತ್ತು ತೊಡೆಸಂಧಿಯಲ್ಲಿ ಇದು ಆರಂಭವಾಗುತ್ತದೆ.

ಕೊಂಡ್ರೊ ಸರ್ಕೋಮಾ: 40 ವರ್ಷಕ್ಕಿಂತ ಹೆಚ್ಚಿನ ಪ್ರಾಯದವರು ಈ ವಿಧದ ಮೂಳೆಕ್ಯಾನ್ಸರ್‌ಗೆ ಗುರಿಯಾಗುವ ಸಾಧ್ಯತೆ ಹೆಚ್ಚಿರುತ್ತದೆ ಮತ್ತು ಸಾಮಾನ್ಯವಾಗಿ ಕೈಗಳು,ಪಾದಗಳು ಮತ್ತು ಅಸ್ಥಿಕುಹರದಲ್ಲಿ ಕಾಣಿಸಿಕೊಳ್ಳುತ್ತದೆ.

ಲ್ಯುಕೆಮಿಯಾದಂತಹ ಕ್ಯಾನ್ಸರ್ ಮೂಳೆಗಳ ಅಂಗಾಂಶವಾದ ಅಸ್ಥಿಮಜ್ಜೆಯಲ್ಲಿ ಆರಂಭಗೊಳ್ಳುತ್ತದೆ. ಆದರೆ ಸಾಮಾನ್ಯವಾಗಿ ಇದನ್ನು ಮೂಳೆ ಕ್ಯಾನ್ಸರ್ ಎಂದು ಪರಿಗಣಿಸಲಾಗುವುದಿಲ್ಲ.

► ಮೂಳೆ ಕ್ಯಾನ್ಸರ್ ಯಾವಾಗ ಉಂಟಾಗುತ್ತದೆ?

ಮೂಳೆಗಳ ವಿರೂಪ ಮತ್ತು ಉರಿಯೂತ ಲಕ್ಷಣಗಳಿಂದ ಗುರುತಿಸಲಾಗುವ ಪ್ಯಾಗೆಟ್ಸ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳು ಈ ಪೈಕಿ ಯಾವುದೇ ಕ್ಯಾನ್ಸರ್‌ಗೆ ಗುರಿಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಇದಲ್ಲದೆ ಕ್ಯಾನ್ಸರ್‌ಗೆ ಚಿಕಿತ್ಸೆ,ವಿಕಿರಣಕ್ಕೆ ಹೆಚ್ಚು ಒಡ್ಡಿಕೊಳ್ಳುವಿಕೆ,ಕೆಲವು ಕ್ಯಾನ್ಸರ್ ಔಷಧಿಗಳ ಸೇವನೆ ಇವುಗಳಿಂದಲೂ ಮೂಳೆ ಕ್ಯಾನ್ಸರ್ ಉಂಟಾಗುತ್ತದೆ. ಮಕ್ಕಳು ಮತ್ತು ಯುವಜನರಲ್ಲಿ ಮೂಳೆಗಳು ಬೆಳವಣಿಗೆಯಾಗುತ್ತಿರುವುದರಿಂದ ಅವರು ಮೂಳೆ ಕ್ಯಾನ್ಸರ್‌ಗೆ ಗುರಿಯಾಗುವ ಅಪಾಯ ಹೆಚ್ಚಾಗಿರುತ್ತದೆ.

► ಮೂಳೆ ಕ್ಯಾನ್ಸರ್‌ನ ಲಕ್ಷಣಗಳು

ನೋವು: ಇದು ಮೊದಲ ಸಂಕೇತವಾಗಿದೆ. ನಿಧಾನವಾಗಿ ಆರಂಭಗೊಳ್ಳುವ ನೋವು ಕಾಲಕ್ರಮೇಣ ತೀವ್ರಗೊಳ್ಳುತ್ತದೆ ಮತ್ತು ಯಾವುದೇ ಚಿಕಿತ್ಸೆಗೂ ಬಗ್ಗುವುದಿಲ್ಲ. ಆದರೆ ಇಂತಹ ನೋವಿಗೆ ಕ್ಯಾನ್ಸರ್ ಅಲ್ಲದೆ ಸಂಧಿವಾತದಂತಹ ಇತರ ಕಾಯಿಲೆಗಳೂ ಕಾರಣವಾಗುತ್ತವೆ. ಹೀಗಾಗಿ ಇಂತಹ ನೋವಿನಿಂದ ನರಳುತ್ತಿದ್ದರೆ ಅದರ ಸ್ವರೂಪವನ್ನು ತಿಳಿದುಕೊಳ್ಳಲು ವೈದ್ಯರನ್ನು ಭೇಟಿಯಾಗಬೇಕಾಗುತ್ತದೆ.

ಮೂಳೆ ಮುರಿತ: ಕ್ಯಾನ್ಸರ್ ಗಡ್ಡೆಯು ಮೂಳೆಗಳನ್ನು ದುರ್ಬಲವಾಗಿಸುತ್ತದೆ,ಪರಿಣಾಮವಾಗಿ ಅದು ಸುಲಭವಾಗಿ ಮುರಿತಕ್ಕೊಳಗಾಗುತ್ತದೆ. ಯಾವುದೇ ಮೂಳೆಯ ಮೇಲೆ ಉಂಡೆ ಕಟ್ಟಿದಂತಹ ಬೆಳವಣಿಗೆ,ದಣಿವು,ಬಳಲಿಕೆ,ಮೂಳೆಯ ಭಾಗದಲ್ಲಿ ಊತ ಅಥವಾ ಕೆಂಪಗಾಗುವಿಕೆ,ಯಾವುದೇ ಕಾರಣವಿಲ್ಲದೆ ತೂಕ ಇಳಿಕೆ ಇವೆಲ್ಲ ಮೂಳೆ ಕ್ಯಾನ್ಸರ್‌ನ್ನು ಸೂಚಿಸಬಹುದು.

 ಹಿಂದೆಲ್ಲ ಮೂಳೆ ಕ್ಯಾನ್ಸರ್‌ಗೆ ಚಿಕಿತ್ಸೆಯಿರಲಿಲ್ಲ,ಹೀಗಾಗಿ ರೋಗಿಗಳು ಕೈಕಾಲುಗಳನ್ನು ಕಳೆದುಕೊಳ್ಳುವ ಅಪಾಯಕ್ಕೆ ಗುರಿಯಾಗುತ್ತಿದ್ದರು. ಆದರೆ ವೈದ್ಯಕೀಯ ಕ್ಷೇತ್ರವು ಮುಂದುವರಿದ ಪರಿಣಾಮ ಇಂದು ಮೂಳೆ ಕ್ಯಾನ್ಸರ್‌ನ್ನು ಸಕಾಲದಲ್ಲಿ ಪತ್ತೆ ಹಚ್ಚಿದರೆ ರೋಗಿಯನ್ನು ಸಂಪೂರ್ಣವಾಗಿ ಗುಣಮುಖ ಮಾಡಲು ಸಾಧ್ಯವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X