ಪ.ಜಾತಿ/ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಉಡುಪಿ, ಆ.21: ಉಡುಪಿ ತಾಲೂಕಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡದ (ನವೀನ ವಿದ್ಯಾರ್ಥಿಗಳು ಹಾಗೂ ಕಳೆದ ಸಾಲಿನಲ್ಲಿ ಅರ್ಜಿ ಹಾಕದೇ ಇದ್ದ ವಿದ್ಯಾರ್ಥಿಗಳು) ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸಂಬಂಧಿಸಿದ ಶಾಲೆಗಳ ಮುಖ್ಯಸ್ಥರುಗಳು ವಿದ್ಯಾರ್ಥಿಗಳ ದಾಖಲೆಗಳೊಂದಿಗೆ ನೇರವಾಗಿ ಇಲಾಖೆಯ ವೆಬ್ಸೈಟ್ http://ssp.karnataka.gov.in ಅಥವಾ www.sw.kar.nic.in ಗೆ ಲಾಗಿನ್ ಆಗಿ ಸಂಪೂರ್ಣ ಮಾಹಿತಿಯನ್ನು ನೀಡಿ, ಕಡ್ಡಾಯವಾಗಿ ಆನ್ಲೈನ್ನಲ್ಲಿ ಅರ್ಜಿ ಗಳನ್ನು ದಾಖಲಿಸಬೇಕು.
1ರಿಂದ 8ನೇ ತರಗತಿ ವಿದ್ಯಾರ್ಥಿಯ ಪೋಷಕರ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂ.ಒಳಗಿರಬೇಕು. 9ರಿಂದ 10 ನೇ ತರಗತಿ ವಿದ್ಯಾರ್ಥಿಯ ಪೋಷಕರ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷ ರೂ. ಒಳಗಿರಬೇಕು. ವಿದ್ಯಾರ್ಥಿಯ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗೆ ವಿದ್ಯಾರ್ಥಿಯ ಆಧಾರ್ ಸಂಖ್ಯೆ ಸೀಡಿಂಗ್ ಮಾಡುವುದು ಕಡ್ಡಾಯವಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ದೂರವಾಣಿ:0820-2528884ನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.