Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. Big Breaking News: ಐಎನ್ ಎಕ್ಸ್...

Big Breaking News: ಐಎನ್ ಎಕ್ಸ್ ಮೀಡಿಯಾ ಪ್ರಕರಣ: ಭಾರೀ ಹೈಡ್ರಾಮದ ನಂತರ ಪಿ.ಚಿದಂಬರಂ ಬಂಧನ

ವಾರ್ತಾಭಾರತಿವಾರ್ತಾಭಾರತಿ21 Aug 2019 9:53 PM IST
share
Big Breaking News: ಐಎನ್ ಎಕ್ಸ್ ಮೀಡಿಯಾ ಪ್ರಕರಣ: ಭಾರೀ ಹೈಡ್ರಾಮದ ನಂತರ ಪಿ.ಚಿದಂಬರಂ ಬಂಧನ

ಹೊಸದಿಲ್ಲಿ,ಆ.21: ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಕೇಂದ್ರ ವಿತ್ತ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರನ್ನು ಸಿಬಿಐ ಬುಧವಾರ ರಾತ್ರಿ ದಕ್ಷಿಣ ದಿಲ್ಲಿಯ ಜೋರಬಾಗ್‌ನಲ್ಲಿಯ ಅವರ ನಿವಾಸದಿಂದ ವಶಕ್ಕೆ ತೆಗೆದುಕೊಂಡಿದೆ. ವಿಚಾರಣೆಗಾಗಿ ಅವರನ್ನು ಸಿಬಿಐ ಕಚೇರಿಗೆ ಕರೆದೊಯ್ಯಲಾಗಿದೆ. ವಿಚಾರಣೆಯ ಬಳಿಕ ಅವರನ್ನು ಬಂಧಿಸಿ ಬುಧವಾರ ಸಿಬಿಐ ನ್ಯಾಯಾಲಯದಲ್ಲಿ ಹಾಜರುಪಡಿಸುವ ಸಾಧ್ಯತೆಗಳು ಬಲವಾಗಿವೆ. ಘೋಷಣೆಗಳನ್ನು ಕೂಗುತ್ತಿದ್ದ ಬೆಂಬಲಿಗರು,ಶಾಂತಿಯನ್ನು ಕಾಯ್ದುಕೊಳ್ಳಲು ಆಗಮಿಸಿದ್ದ ಪೊಲೀಸರು,ಮಾಧ್ಯಮ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಭಾರೀ ನಾಟಕೀಯ ವಿದ್ಯಮಾನಗಳ ನಡುವೆಯೇ ಸಿಬಿಐ ಅಧಿಕಾರಿಗಳು ಒಂದು ಗಂಟೆಗೂ ಹೆಚ್ಚಿನ ಕಾಲ ಪರದಾಡಿ,ಕೊನೆಗೂ ನಿವಾಸದ ಆವರಣ ಗೋಡೆ ಮತ್ತು ಛಾವಣಿಯನ್ನು ಹತ್ತಿ ಒಳ ಪ್ರವೇಶಿಸಿ ಚಿದಂಬರಂ ಅವರನ್ನು ತಮ್ಮ ವಶಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು 24 ಗಂಟೆಗಳಿಂದಲೂ ಸಿಬಿಐ ಹುಡುಕಾಡುತ್ತಿದ್ದ ಚಿದಂಬರಂ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಲು ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಪ್ರತ್ಯಕ್ಷರಾಗುವುದರೊಂದಿಗೆ ಸಿಬಿಐ ಅವರ ಬೆನ್ನಿಗೆ ಬಿದ್ದಿತ್ತು.

 ಬಂಧನದ ವಿರುದ್ಧ ಚಿದಂಬರಂ ಅವರಿಗೆ ಮಧ್ಯಂತರ ರಕ್ಷಣೆಯನ್ನು ವಿಸ್ತರಿಸಲು ಮಂಗಳವಾರ ದಿಲ್ಲಿ ಉಚ್ಚ ನ್ಯಾಯಾಲಯವು ನಿರಾಕರಿಸಿದ ಬಳಿಕ 73ರ ಹರೆಯದ ಚಿದಂಬರಂ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಅವರ ಬಂಧನಕ್ಕಾಗಿ ಸಿಬಿಐ ಎರಡು ಬಾರಿ ಅವರ ನಿವಾಸಕ್ಕೆ ತೆರಳಿದ್ದರೂ ಅವರು ಪತ್ತೆಯಾಗಿರಲಿಲ್ಲ. ಅವರು ದೇಶವನ್ನು ತೊರೆಯುವುದನ್ನು ತಡೆಯಲು ಅವರ ವಿರುದ್ಧ ಎರಡು ಲುಕ್‌ಔಟ್ ನೋಟಿಸ್‌ಗಳನ್ನು ಸಿಬಿಐ ಹೊರಡಿಸಿತ್ತು.

ಸುದ್ದಿಗೋಷ್ಠ್ಠಿಯಲ್ಲಿ ತನ್ನ ಸಂಕ್ಷಿಪ್ತ ಮಾತುಗಳನ್ನು ಮುಗಿಸಿದ ಚಿದಂಬರಂ ಪಕ್ಷದ ಹಿರಿಯ ನಾಯಕರೂ ಸರ್ವೋಚ್ಚ ನ್ಯಾಯಾಲಯದ ಖ್ಯಾತ ನ್ಯಾಯವಾದಿಗಳೂ ಆಗಿರುವ ಕಪಿಲ ಸಿಬಲ್ ಮತ್ತು ಅಭಿಷೇಕ ಮನು ಸಿಂಘ್ವಿ ಅವರೊಂದಿಗೆ ಕಾಂಗ್ರೆಸ್ ಕೇಂದ್ರ ಕಚೇರಿಯಿಂದ ಹೊರಟು ಜೋರ್‌ಬಾಗ್ ನಿವಾಸವನ್ನು ತಲುಪಿದ ಬೆನ್ನಿಗೇ ನಿವಾಸದ ಹೊರಗೆ ಭಾರೀ ಕೋಲಾಹಲ ಸೃಷ್ಟಿಯಾಗಿತ್ತು.

 2007ರಲ್ಲಿ ಕೇಂದ್ರ ವಿತ್ತ ಸಚಿವರಾಗಿದ್ದ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಒತ್ತಾಸೆಯ ಮೇರೆಗೆ ಐಎನ್‌ಎಕ್ಸ್ ಮೀಡಿಯಾ ಸಂಸ್ಥೆಯಲ್ಲಿ ಭಾರೀ ಮೊತ್ತದ ವಿದೇಶಿ ನೇರ ಹೂಡಿಕೆಗೆ ನಿಯಮಗಳನ್ನು ಉಲ್ಲಂಘಿಸಿ ಅನುಕೂಲವನ್ನು ಮಾಡಿಕೊಟ್ಟಿದ್ದ ಆರೋಪ ಅವರ ಮೇಲಿದೆ. ಈ ವಹಿವಾಟಿನಲ್ಲಿ ಕಾರ್ತಿ ಭಾರೀ ಮೊತ್ತದ ಲಂಚವನ್ನು ಪಡೆದಿದ್ದರು ಎಂದೂ ಆರೋಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X