ರಸ್ತೆಯಲ್ಲಿ ನಿರ್ಮಿಸಿದ್ದ ದೇವಾಲಯ ಪೊಲೀಸ್ ಭದ್ರತೆಯೊಂದಿಗೆ ತೆರವು
ಮಂಡ್ಯ, ಆ.21: ತಾಲೂಕಿನ ಹೆಮ್ಮಿಗೆ ಗ್ರಾಮದಲ್ಲಿ ರಸ್ತೆಯಲ್ಲಿ ನಿರ್ಮಿಸಿದ್ದ ಗಣೇಶನ ದೇವಾಲಯವನ್ನು ಕಂದಾಯ ಅಧಿಕಾರಿಗಳು ಪೊಲೀಸರ ಭದ್ರತೆಯೊಂದಿಗೆ ಬುಧವಾರ ತೆರವುಗೊಳಿಸಿದರು.
ಹೆದ್ದಾರಿಯಲ್ಲಿ ನಿರ್ಮಾಣವಾಗಿದ್ದ ದೇವಾಲಯದ ಬಗ್ಗೆ ಅದೇ ಗ್ರಾಮದ ಕೃಷ್ಣ ಎಂಬುವರು 2012ನೇ ಇಸವಿಯಲ್ಲಿ ದೂರು ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ಆದೇಶವಿದ್ದರೂ ತೆರವುಗೊಳಿಸಿರಲಿಲ್ಲ. ಹಾಗಾಗಿ ಕೃಷ್ಣ ಜಿಲ್ಲಾಧಿಕಾರಿ ಸೇರಿ ಇತರ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದರು.
ಬುಧವಾರ ಬೆಳಗ್ಗೆ ತಹಸೀಲ್ದಾರ್ ನಾಗೇಶ್ ನೇತೃತ್ವದಲ್ಲಿ ತೆರಳಿದ ಅಧಿಕಾರಿಗಳು, ಜೆಸಿಬಿ ಮೂಲಕ ದೇವಾಲಯವನ್ನು ತೆರವುಗೊಳಿಸಿದರು ಎಂದು ವರದಿಯಾಗಿದೆ.
Next Story