ಬೀಚ್, ಟೆಂಪಲ್ ಟೂರಿಸಂಗೆ ಉತ್ತೇಜನ: ಕೋಟ ಶ್ರೀನಿವಾಸ ಪೂಜಾರಿ
ಮಂಗಳೂರು: ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಇಂದು ಮಂಗಳೂರಿಗೆ ಆಗಮಿಸಿದ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ನೆರೆ ಪರಿಹಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಪರಿಹಾರ ಕ್ರಮಗಳನ್ನು ಕೈಗೊಂಡಿದ್ದಾರೆ. ನೆರೆ ಸಂತ್ರಸ್ತರಿಗೆ ತುರ್ತು ಪರಿಹಾರವಾಗಿ ತಲಾ 10,000 ರೂ. ಈಗಾಗಲೇ ಪೂರ್ಣ ಪ್ರಮಾಣದಲ್ಲಿ ಸಂತ್ರಸ್ತರ ಖಾತೆಗೆ ಜಮಾ ಆಗಿದೆ ಎಂದು ಅವರು ಹೇಳಿದರು.
ನೆರೆ ಪರಿಸ್ಥಿತಿ ನಿಭಾಯಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಿರುವ ಬಗ್ಗೆ ಮುಖ್ಯಮಂತ್ರಿ ತಿಳಿಸಿದ್ದಾರೆ ಎಂದರು.
ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್, ಯೋಗೀಶ್ ಭಟ್, ರವಿಶಂಕರ್, ಕಸ್ತೂರಿ ವಂಕಿ, ಮೀನಾಕ್ಷಿ ಶಾಂತಿಗೋಡು ಹಾಗು ಇತರರು ಉಪಸ್ಥಿತರಿದ್ದರು.
Next Story