Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ನಿಮಗೆ ಕೆಲಸ ಹೋಗುವ ಭಯವಿಲ್ಲವೇ ?" ಎಂಬ...

"ನಿಮಗೆ ಕೆಲಸ ಹೋಗುವ ಭಯವಿಲ್ಲವೇ ?" ಎಂಬ 'ಭಕ್ತ ಬ್ಯಾನರ್ಜಿ' ಪ್ರಶ್ನೆಗೆ ರವೀಶ್ ಉತ್ತರವೇನು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ22 Aug 2019 5:33 PM IST
share
ನಿಮಗೆ ಕೆಲಸ ಹೋಗುವ ಭಯವಿಲ್ಲವೇ ? ಎಂಬ ಭಕ್ತ ಬ್ಯಾನರ್ಜಿ ಪ್ರಶ್ನೆಗೆ ರವೀಶ್ ಉತ್ತರವೇನು ಗೊತ್ತೇ ?

ಖ್ಯಾತ ವಿಶ್ಲೇಷಕ ಹಾಗು ವಿಡಂಬನಕಾರ ಆಕಾಶ್ ಬ್ಯಾನರ್ಜಿ ಅವರು ತಮ್ಮ "ಭಕ್ತ ಬ್ಯಾನರ್ಜಿ" ಅವತಾರದಲ್ಲಿ ಹಿರಿಯ ಪತ್ರಕರ್ತ ಹಾಗು ಇತ್ತೀಚಿಗೆ ರಮೋನ್ ಮ್ಯಾಗ್ಸೇಸೆ ಪ್ರಶಸ್ತಿ ಪುರಸ್ಕೃತ ರವೀಶ್ ಕುಮಾರ್ ಅವರ ಜೊತೆ ನಡೆಸಿದ ಸಂದರ್ಶನ ವ್ಯಾಪಕ ಚರ್ಚೆಗೆ ಒಳಗಾಗಿದೆ. 

ತನ್ನ ಯೂಟ್ಯೂಬ್ ಚಾನಲ್ ಗಾಗಿ ಈ ಸಂದರ್ಶನ ನಡೆಸಿರುವ ಬ್ಯಾನರ್ಜಿ ಅವರು ಸನ್ ಗ್ಲಾಸ್ ಹಾಕಿಕೊಂಡು ಕೇಸರಿ ಉಡುಪಿನಲ್ಲಿ ಮೋದಿ ಹಾಗು ಬಿಜೆಪಿ ಪರಮ ಅಭಿಮಾನಿಗಳಂತೆ (ಸಾಮಾಜಿಕ ಜಾಲತಾಣಗಳಲ್ಲಿ ಭಕ್ತರು ಎಂದೇ ಕುಖ್ಯಾತಿ ಪಡೆದವರು) ಕಾಣಿಸಿಕೊಂಡು ಸಾಮಾನ್ಯವಾಗಿ ಈ ಮೋದಿ ಅಭಿಮಾನಿಗಳು ಕೇಳುವ ಪ್ರಶ್ನೆಗಳನ್ನೇ ಅವರದ್ದೇ ಧಾಟಿಯಲ್ಲಿ ಕೇಳಿದ್ದು ವಿಶೇಷವಾಗಿತ್ತು. 

ತನ್ನನ್ನು 'ಮೋದಿ ವಿರೋಧಿ ' ಎನ್ನುವ ' ಭಕ್ತರ ' ಪ್ರಶ್ನೆಗೆ ಉತ್ತರಿಸಿರುವ ರವೀಶ್ ಕುಮಾರ್ "ನಾನು ಮೋದಿ ವಿರೋಧಿಯಲ್ಲ, ನಾನು ಪತ್ರಿಕೋದ್ಯಮ ಪರ ಅಷ್ಟೇ. ಜನರ ಬದುಕಿಗೆ ಸಂಬಂಧಿಸಿದ ಗಂಭೀರ ಪ್ರಶ್ನೆಗಳನ್ನು ಕೇಳುವುದು ನನ್ನ ಕರ್ತವ್ಯ. ಅದನ್ನು ನಾನು ಮಾಡುತ್ತಿದ್ದೇನೆ. ಉದ್ಯೋಗ, ಬೆಲೆಯೇರಿಕೆ, ಪರಿಸರ ಇತ್ಯಾದಿಗಳ ಕುರಿತು ಗಂಭೀರ ಪ್ರಶ್ನೆಗಳನ್ನು ನಾನು ಕೇಳಲೇಬೇಕು. ಅದನ್ನು ಕೇಳುತ್ತಿದ್ದೇನೆ. ಅದಕ್ಕೆ ನನ್ನ ಕಾರ್ಯಕ್ರಮಕ್ಕೆ ಬಿಜೆಪಿಯವರು ಬರುತ್ತಿಲ್ಲ. ನನ್ನ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ. ದೂರ ಕೂತು ನನ್ನನ್ನು ಮೋದಿ ವಿರೋಧಿ ಎಂದು ಬ್ರಾಂಡ್ ಮಾಡುತ್ತಿದ್ದಾರೆ " ಎಂದು ಹೇಳಿದ್ದಾರೆ. 

"ನಿಮಗೆ ಕೆಲಸ ಹೋಗುವ ಭಯವಿಲ್ಲವೇ?" ಎಂದು ಕೇಳಿದ್ದಕ್ಕೆ "ಇಲ್ಲಿ ಕೆಲಸವೂ ಹೋಗಬಹುದು, ಜೀವವೂ ಹೋಗಬಹುದು. ಅದಕ್ಕೇನೂ ಮಾಡಲಾಗದು. ಈ ಲೋಕಕ್ಕೆ ಬಂದ ಮೇಲೆ ಎಲ್ಲವನ್ನೂ ಎದುರಿಸಬೇಕು. " ಎಂದು ರವೀಶ್ ಹೇಳಿದ್ದಾರೆ. 

ಬಿಜೆಪಿ ಹಾಗು ಮೋದಿ ಅವರ ಪರವಾಗಿಯೇ ಸುದ್ದಿ ಪ್ರಸಾರ ಮಾಡುವ ಟಿವಿ ಚಾನಲ್ ಗಳು ಹಾಗು ನಿರೂಪಕರನ್ನು ತರಾಟೆಗೆ ತೆಗೆದುಕೊಂಡಿರುವ ರವೀಶ್, " ಅವರು ಮಾಡಿದಂತಹ ಪತ್ರಿಕೋದ್ಯಮ ನನಗೆ ಸಾಧ್ಯವಿಲ್ಲ. ನನ್ನ ಚಾನಲ್ ಗೆ ಟಿಆರ್ಪಿ ಇಲ್ಲ ಎಂದು ಹೇಳುವವರು ನನ್ನ ಬಗ್ಗೆ ಇಷ್ಟೊಂದು ತಲೆಕೆಡಿಸಿಕೊಂಡಿದ್ದು ಏಕೆ? ನಿಜವಾದ ಪ್ರಶ್ನೆಗಳನ್ನು ಅವರು ಕೇಳುತ್ತಿಲ್ಲ" ಎಂದು ಹೇಳಿದ್ದಾರೆ. 

ಗಂಭೀರ ವಿಷಯಗಳನ್ನು ತಮಾಷೆಯಾಗಿಯೇ ವಿವರಿಸುವ ಈ ವಿಡಿಯೋವನ್ನು ನೀವು ನೋಡಲೇಬೇಕು. ಇಲ್ಲಿದೆ ವಿಡಿಯೋ : 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X