Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂಯುಕ್ತ ಬೇಸಾಯ ಯೋಜನೆಗೆ ರಾಜ್ಯ ಸರಕಾರ...

ಸಂಯುಕ್ತ ಬೇಸಾಯ ಯೋಜನೆಗೆ ರಾಜ್ಯ ಸರಕಾರ ಹಸಿರು ನಿಶಾನೆ

ವಾರ್ತಾಭಾರತಿವಾರ್ತಾಭಾರತಿ22 Aug 2019 10:09 PM IST
share
ಸಂಯುಕ್ತ ಬೇಸಾಯ ಯೋಜನೆಗೆ ರಾಜ್ಯ ಸರಕಾರ ಹಸಿರು ನಿಶಾನೆ

ಬೆಂಗಳೂರು, ಆ.22: ಹಿಂದಿನ ಮೈತ್ರಿ ಸರಕಾರದ ಬಜೆಟ್‌ನಲ್ಲಿ ಪ್ರಸ್ತಾಪಿಸಿದ್ದ ಸಂಯುಕ್ತ ಬೇಸಾಯ ಯೋಜನೆ ಜಾರಿಗೆ ತರಲು ಮುಂದಾಗಿರುವ ಬಿಜೆಪಿ ಸರಕಾರ, ಅದಕ್ಕಾಗಿ ಐದು ಕೋಟಿ ಅನುದಾನ ನೀಡುವ ಮೂಲಕ ಹಸಿರು ನಿಶಾನೆ ತೋರಿದೆ.

ರೈತರಿಗೆ ಅನುಕೂಲವಾಗುವಂತಹ ಯೋಜನೆ ಇದಾಗಿದ್ದು, ಸಹಕಾರ ವಲಯದಲ್ಲಿ ಕೃಷಿ ಇಲಾಖೆಯ ರೈತ ಉತ್ಪಾದಕರ ಸಂಸ್ಥೆಯ ಮಾದರಿಯಲ್ಲಿ 300 ಎಕರೆ ಕೃಷಿ ಭೂಮಿಯಲ್ಲಿ 100 ರೈತರನ್ನೊಳಗೊಂಡ 500 ಸಂಯುಕ್ತ ಬೇಸಾಯ ಸಹಕಾರ ಸಂಘಗಳನ್ನು ಸ್ಥಾಪನೆ ಮಾಡಲು ಆದೇಶಿಸಿದೆ.

ಪ್ರತಿ ಜಿಲ್ಲೆಯಲ್ಲಿ ಗರಿಷ್ಠ 20 ಸಂಘಗಳನ್ನು ರಚಿಸಲು ತಾಕೀತು ಮಾಡಲಾಗಿದ್ದು, ಸಹಕಾರ ಸಂಘಗಳ ಸ್ಥಾಪನೆ ಮತ್ತು ಒಂದು ವರ್ಷದ ಅವಧಿ ನಿರ್ವಹಣೆಗೆ ನೋಂದಣಿ, ತರಬೇತಿ, ಶಿಕ್ಷಣ, ಗೌರವಧನ, ಕಚೇರಿ ನಿರ್ವಹಣೆ ಸೇರಿ ಒಂದು ಲಕ್ಷ ರೂ. ಅನುದಾನವನ್ನು ಸರಕಾರ ನೀಡಲಿದೆ. ಡಿಸಿಸಿ ಬ್ಯಾಂಕ್‌ಗಳು ಈ ಸಂಘಗಳಿಗೆ ಅವಶ್ಯಕತೆಯಿರುವ ಸಾಲ ನೀಡಲು ಮುಂದಾಗಬೇಕು ಎಂದು ಆದೇಶದಲ್ಲಿದೆ.

ಜಿಲ್ಲಾ ಮಟ್ಟದ ಸಮಿತಿ ರಚನೆ: ಸಹಕಾರ ಸಂಘಗಳ ನಿರ್ವಹಣೆ ಮತ್ತು ಉಸ್ತುವಾರಿ ನೋಡಿಕೊಳ್ಳಲು ಜಿಲ್ಲೆ ಸಹಕಾರ ಸಂಘಗಳ ಉಪ ನಿಬಂಧಕರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗುತ್ತದೆ. ಅದರಲ್ಲಿ ತೋಟಗಾರಿಕೆ, ಕೃಷಿ, ಮೀನುಗಾರಿಕೆ ಮತ್ತು ಜಲಾನಯನ ಅಭಿವೃದ್ಧಿ ಇಲಾಖೆಗಳ ಜಿಲ್ಲಾ ಉಪ ನಿರ್ದೇಶಕರು ಸದಸ್ಯರಾಗಿ, ಜಿಲ್ಲಾ ಕೇಂದ್ರದಲ್ಲಿರುವ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಸಂಚಾಲಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಏನೇನು ಮಾಡಬೇಕಿದೆ: 100 ಅಥವಾ ಅದಕ್ಕಿಂತ ಹೆಚ್ಚಿನ ರೈತ ಕುಟುಂಬಗಳನ್ನು ಹೊಂದಿದ ಗ್ರಾಮದಲ್ಲಿ ಪ್ರತಿ ಒಂದು ಕುಟುಂಬದಿಂದ ಒಬ್ಬರನ್ನು ಒಳಗೊಂಡಂತೆ 100 ರೈತರನ್ನು ಆಯ್ಕೆ ಮಾಡಬೇಕು. ಅವರ ಮೂಲಕ ಸಂಯುಕ್ತ ಬೇಸಾಯ ಸಹಕಾರ ಸಂಘಗಳನ್ನು ಸ್ಥಾಪನೆ ಮಾಡಬೇಕು. ಅದರಲ್ಲಿ ಕನಿಷ್ಠ ಶೇ.70 ರಷ್ಟು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಸದಸ್ಯತ್ವ ನೀಡಬೇಕು ಎಂದು ಹೇಳಲಾಗಿದೆ.

ಶೂನ್ಯ ಬಂಡವಾಳಕ್ಕೆ ಆದ್ಯತೆ:

ಶೂನ್ಯ ಬಂಡವಾಳ ಬೇಸಾಯ ಕೃಷಿ ಚಟುವಟಿಕೆಗಳಿಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ತುರ್ತು ಅವಶ್ಯಕತೆಗಳಿಗಾಗಿ ಕೃಷಿ ಉತ್ಪನ್ನದ ಮೇಲೆ ಸರಕಾರದಲ್ಲಿ ಪ್ರಚಲಿತ ಯೋಜನೆಯಲ್ಲಿ ಸಾಲ ಪಡೆಯಬಹುದು. ನೀರಾವರಿ, ಹನಿ ನೀರಾವರಿ, ಯಂತ್ರೋಪಕರಣಗಳು, ಸಂಸ್ಕರಣೆ ಹಾಗೂ ಶೇಖರಣೆ, ಸಾಗಾಣಿಕೆಗೆ ಅವಶ್ಯವಾದ ಸವಲತ್ತು ಕಲ್ಪಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. 

ಕೃಷಿಗೆ ಸೀಮಿತ

ಸಹಕಾರ ಸಂಘಗಳನ್ನು ಸ್ಥಾಪನೆ ಮಾಡುವ ಸಂದರ್ಭದಲ್ಲಿ ಬೈಲಾ ರೂಪಿಸಬೇಕು. ಕೃಷಿ ವಿಸ್ತರಣೆ, ವೈಜ್ಞಾನಿಕ ಮಾದರಿಯಲ್ಲಿ ಕೃಷಿ, ಬೀಜ, ಗೊಬ್ಬರ, ಔಷಧಿ ಮುಂತಾದ ಕೃಷಿ ಪರಿಕರಗಳನ್ನು ಸಾಮೂಹಿಕವಾಗಿ ಖರೀದಿಸಲು ಕಂಪನಿಗಳ ಜತೆ ಒಪ್ಪಂದ ಮಾಡಿಕೊಂಡು ಸೂಕ್ತ ವ್ಯವಸ್ಥೆ ರೂಪಿಸಿಕೊಳ್ಳಬೇಕು. ಮಾರುಕಟ್ಟೆ ವ್ಯವಸ್ಥೆಗೂ ಸಂಘಗಳು ಮುಂದಾಗಬೇಕು ಎಂದು ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X