Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರವಾಹದಲ್ಲಿ ಮನೆ ಕಳೆದುಕೊಂಡ ‘ಕಾಮಿಡಿ...

ಪ್ರವಾಹದಲ್ಲಿ ಮನೆ ಕಳೆದುಕೊಂಡ ‘ಕಾಮಿಡಿ ಕಂಪನಿ’ ಕಲಾವಿದರಿಗೆ ಅಕುಲ್ ಬಾಲಾಜಿ ನೆರವು

ವಾರ್ತಾಭಾರತಿವಾರ್ತಾಭಾರತಿ23 Aug 2019 8:01 PM IST
share
ಪ್ರವಾಹದಲ್ಲಿ ಮನೆ ಕಳೆದುಕೊಂಡ ‘ಕಾಮಿಡಿ ಕಂಪನಿ’ ಕಲಾವಿದರಿಗೆ ಅಕುಲ್ ಬಾಲಾಜಿ ನೆರವು

ಬೆಂಗಳೂರು : ಇತ್ತೀಚೆಗೆ ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಿರುವ ಪ್ರವಾಹವು ‘ಕಲರ್ಸ್ ಕನ್ನಡ’ ಚಾನೆಲ್‌ನಲ್ಲಿ ಪ್ರಸಾರವಾಗುತ್ತಿರುವ ‘ಕಾಮಿಡಿ ಕಂಪನಿ’ ಎಂಬ ಹಾಸ್ಯ ಕಾರ್ಯಕ್ರಮದ ಇಬ್ಬರು ಸ್ಪರ್ಧಿಗಳ ಜೀವನವನ್ನೇ ಬುಡಮೇಲು ಮಾಡಿದೆ. ವಿನೋದ್ ಚಾರ್ಮಾಡಿ ಹಾಗೂ ಕುಮಾರ್ ಈಗಷ್ಟೇ ಬೆಳಕಿಗೆ ಬರುತ್ತಿರುವ ಪ್ರತಿಭೆಗಳು. ಆದರೆ ಇತ್ತೀಚಿನ ಪ್ರವಾಹದಲ್ಲಿ ಇವರಿಬ್ಬರ ಮನೆಗಳೂ ಕೊಚ್ಚಿಕೊಂಡು ಹೋಗಿವೆ.

ಮನೆ ಮಾತ್ರವಲ್ಲದೆ ತಮ್ಮ ಕುಟುಂಬದ ಜೀವನಕ್ಕೆ ಆಧಾರವಾಗಿದ್ದ ಹಸುಗಳು ಕೂಡಾ ಪ್ರವಾಹದಲ್ಲಿ ಹೋಗಿವೆ. ಹೊಸದಾಗಿ ಆರಂಭವಾಗಿರುವ ಈ ಹಾಸ್ಯ ಕಾರ್ಯಕ್ರಮದ ಎಪಿಸೋಡ್‌ಗಳು ಪ್ರಸಾರವಾಗುತ್ತಿವೆ, ನೋಡಿ ಎಂದು ಹೇಳಲೆಂದು ತಮ್ಮ ಮನೆಗಳಿಗೆ ಕರೆ ಮಾಡಿದಾಗಲೇ ಮನೆ ಪ್ರವಾಹಕ್ಕೆ ತುತ್ತಾಗಿರುವ ಆಘಾತಕಾರಿ ವಿಷಯ ಇವರಿಬ್ಬರಿಗೂ ಗೊತ್ತಾಗಿದ್ದು.

ನನ್ನ ಮನೆಯವರು ಇದೀಗ ದೊಡ್ಡಮ್ಮನ ಮನೆಯಲ್ಲಿ ಇದ್ದಾರೆ. ನನ್ನ ತಮ್ಮ ಮೂರ್ನಾಲ್ಕು ಜನರನ್ನು ಪ್ರವಾಹದಿಂದ ರಕ್ಷಿಸಿದ್ದಾನೆ. ಆದರೆ ನಮ್ಮ ಜೀವನಕ್ಕೆ ಆಧಾರವಾಗಿದ್ದ ದನ ಕರುಗಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ, ಎನ್ನುವಾಗ ವಿನೋದ್‌ನ ಕಣ್ಣಾಲಿಗಳು ತುಂಬಿ ಬರುತ್ತವೆ. ಕುಮಾರ್‌ನ ಕುಟುಂಬದ ಸದಸ್ಯರು ಇದೀಗ ಗಂಜಿ ಕೇಂದ್ರಗಳಲ್ಲಿ ವಾಸಿಸುತ್ತಿದ್ದಾರೆ.

ಈ ಕರುಣಾಜನಕ ಕತೆಯನ್ನು ಕೇಳಿದ ಕಾಮಿಡಿ ಕಂಪನಿ ನಿರೂಪಕ ಅಕುಲ್ ಬಾಲಾಜಿ ಇಬ್ಬರ ಕುಟುಂಬಗಳಿಗೂ ತಲಾ ಐವತ್ತು ಸಾವಿರ ರೂ.ಗಳ ನೆರವು ಘೋಷಿಸಿದರು. ಮಾತ್ರವಲ್ಲದೆ ರಾಜ್ಯದ ಎಲ್ಲರೂ ರಾಜ್ಯಾದ್ಯಂತ ಪ್ರವಾಹದಿಂದ ಸಂತ್ರಸ್ತರಾಗಿರುವವರ ನೆರವಿಗೆ ಧಾವಿಸುವಂತೆ ಮನವಿ ಮಾಡಿದರು.

ತಮ್ಮ ವೈಯಕ್ತಿಕ ನೋವಿನ ಹೊರತಾಗಿಯೂ ವಿನೋದ್ ಆ ಹಣವನ್ನು ತಮಗೆ ನೀಡುವ ಬದಲಾಗಿ ಚಾರ್ಮಾಡಿಯಲ್ಲಿರುವ ಬಡ ಕುಟುಂಬವೊಂದಕ್ಕೆ ನೀಡುವಂತೆ ಅಕುಲ್‌ರಲ್ಲಿ ಮನವಿ ಮಾಡಿದರು. ಮಾತ್ರವಲ್ಲದೆ ಭಾರತೀಯ ಸೇನೆ ಹಾಗೂ ಎನ್‌ಡಿಆರ್‌ಎಫ್ ತಂಡಗಳ ಕೆಲಸವನ್ನು ಕೊಂಡಾಡಿದರು.

ಕಾಮಿಡಿ ಕಂಪನಿ ಪ್ರತಿ ಶನಿವಾರ ಮತ್ತು ರವಿವಾರ ರಾತ್ರಿ 9:30ಕ್ಕೆ ‘ಕಲರ್ಸ್ ಕನ್ನಡ’ದಲ್ಲಿ ಪ್ರಸಾರವಾಗುತ್ತದೆ. ವಿನೋದ್ ಮತ್ತು ಕುಮಾರ್ ಅವರ ಪ್ರವಾಹಕ್ಕೆ ಸಿಲುಕಿರುವ ಕುಟುಂಬಗಳ ಬಗ್ಗೆ ಇನ್ನಷ್ಟು ವಿವರಗಳು ಈ ವಾರಾಂತ್ಯಕ್ಕೆ ಪ್ರಸಾರವಾಗಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X