Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಸನ ಸಭೆಯಲ್ಲಿ ದಲಿತ ಪರ ಧ್ವನಿ...

ಶಾಸನ ಸಭೆಯಲ್ಲಿ ದಲಿತ ಪರ ಧ್ವನಿ ಕ್ಷೀಣಿಸಿದೆ: ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

ವಾರ್ತಾಭಾರತಿವಾರ್ತಾಭಾರತಿ23 Aug 2019 8:06 PM IST
share
ಶಾಸನ ಸಭೆಯಲ್ಲಿ ದಲಿತ ಪರ ಧ್ವನಿ ಕ್ಷೀಣಿಸಿದೆ: ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

ಕೋಲಾರ, ಆ.23: ಇಡೀ ಸಮಾಜಕ್ಕೆ ಕ್ಯಾನ್ಸರ್ ನಂತೆ ಆವರಿಸಿಕೊಂಡಿರುವ ಅಸ್ಪೃಶ್ಯತೆಗೆ ಚಿಕಿತ್ಸೆ ನೀಡಬೇಕಾದ ಸಂದರ್ಭದಲ್ಲಿ, ಶಾಸನ ಸಭೆಯಲ್ಲಿ ದಲಿತಪರ ಧ್ವನಿ ಕ್ಷೀಣವಾಗಿದೆ. ಇನ್ನಾದರೂ ಎಚ್ಚ ರವಹಿಸದಿದ್ದರೆ ಅಪಾಯ ತಪ್ಪಿದ್ದಲ್ಲ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಭಿಪ್ರಾಯ ವ್ಯಕ್ತಪಡಿಸಿದರು. 

ಇಲ್ಲಿನ ತೇರಹಳ್ಳಿ ಬೆಟ್ಟದ ಮೇಲಿನ ಶಿವಗಂಗೆಯ ಆದಿಮ ಸಾಂಸ್ಕೃತಿಕ ಕೇಂದ್ರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಮೂರು ದಿನಗಳ ರಾಜ್ಯ ಮಟ್ಟದ ಅಧ್ಯಯನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಬಿ.ಬಸವಲಿಂಗಪ್ಪನವರ ನಂತರ ಶಾಸನ ಸಭೆಯಲ್ಲಿ ದಲಿತರ ಪರ ಮಾತನಾಡುವ ಧ್ವನಿಯೇ ಇಲ್ಲವಾಗಿದೆ. ಇಂದಿನ ದಲಿತ ಜನಪ್ರತಿನಿಧಿಗಳಿಗೆ ಶಾಸನ ಸಭೆಯಲ್ಲಿ ಮಾತನಾಡಲೂ ಆಗದ ಸ್ಥಿತಿಗೆ ತಲುಪಿದ್ದಾರೆ ಎಂದು ಬೇಸರವ್ಯಕ್ತಪಡಿಸಿದರು. 

ಬಾಬಾ ಸಾಹೇಬ್ ಅಂಬೇಸ್ಕರ್ ತಮಗಾದ ಅವಮಾನಗಳನ್ನೇ ಸಾಧನೆಯ ಮೆಟ್ಟಿಲುಗಳಾಗಿಸಿಕೊಂಡರು. ಅದೇ ರೀತಿ ಕರ್ನಾಟಕದಲ್ಲಿ ದಸಂಸ ಸಂಸ್ಥಾಪಕ ಬಿ.ಕೃಷ್ಣಪ್ಪನವರು ಹೋರಾಟದ ಸಂದರ್ಭಗಳಲ್ಲೂ ಸಮಚಿತ್ತವನ್ನು, ದೂರದೃಷ್ಠಿಯನ್ನು ಕಳೆದುಕೊಂಡಿರಲಿಲ್ಲ, ಇಂದು ದಲಿತ ಹೋರಾಟಗಳು ಬ್ಲಾಕ್ ಮೇಲ್ ತಂತ್ರಗಳಾಗಿವೆ, ಲೆಟರ್ ಹೆಡ್ ಸಂಸ್ಕೃತಿ ಕೊನೆಯಾಗಬೇಕು. ದಲಿತ ಸಂಘಟನೆಗಳು ದಲಿತರಿಗೆ ದೇವಸ್ಥಾನ ಪ್ರವೇಶ ಮಾಡಬೇಕು ಎನ್ನುವ ಹೋರಾಟಗಳಿಗೆ ಸೀಮಿತವಾಗದೇ ದಲಿತರು ಗ್ರಾಮ ಪಂಚಾಯತ್ ನಿಂದ ಶಾಸನಸಭೆಗಳ ಆಡಳಿತ ಶಕ್ತಿಯಾಗಿ ಒಳ್ಳೆಯ ಕನಸುಗಳನ್ನು ದಲಿತರಿಗೆ ಕೊಡಬೇಕಾಗಿದೆ ಎಂದರು. ಶಾಸನಸಭೆಗಳು ಮಾತ್ರ ನಮಗೆ ಶಾಶ್ವತ ವಿಮೋಚನೆಗೆ ದಾರಿ ತೋರಬಲ್ಲದು ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಚಳುವಳಿ ನಾಯಕರ ಎದೆಯಲ್ಲಿ ಧೈರ್ಯ, ಸ್ಥೈರ್ಯ ಇದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಆದರೆ, ನಮ್ಮೊಳಗೇ ಅಂಬೇಡ್ಕರ್ ಚಿಂತನೆಗಳು ಚಿಗುರಬೇಕು. ಇಡೀ ಜಗತ್ತಿಗೇ ಆದರ್ಶವಾಗಿರುವ ಅಂಬೇಡ್ಕರ್ ನಮ್ಮ ಮನೆಗಳ,ಮುಂದಿನ ಪೀಳಿಗೆಯ ಮಕ್ಕಳ ಆದರ್ಶವಾದಾಗಬೇಕು ಎಂದು ಕರೆ ನೀಡಿದರು. 

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಮಾತನಾಡಿ, ನಲವತ್ತು ವರ್ಷಗಳ ಸುಧೀರ್ಘ ದಲಿತ ಚಳುವಳಿಯ ಇತಿಹಾಸದಲ್ಲಿ, ರಾಜ್ಯಾದ್ಯಂತ ಹಮ್ಮಿಕೊಂಡ ಬಹುತೇಕ ಹೋರಾಟಗಳು ಇಂಜಿನೀಯರ್ ಗಳ ಭಡ್ತಿಗೆ ಸೀಮಿತವಾಗ ತೊಡಗಿದ ಹಿನ್ನಲೆ ಚಳುವಳಿ ಛಿದ್ರವಾಗಿದೆ. ಪ್ರೊ.ಬಿ.ಕೃಷ್ಣಪ್ಪ ನವರ ದೂರದೃಷ್ಠಿಯ ಕಾರಣ ಇಂದಿಗೂ ಕಾರ್ಯಕರ್ತರ ಹಂತದಲ್ಲಿ ಚಳುವಳಿ ಇನ್ನೂ ಉಳಿದಿದೆ, ಕಾರ್ಯಕರ್ತರು ಮುಖಂಡರು ಅಪ್‍ಡೇಟ್ ಆಗಿರಬೇಕು, ಅಧ್ಯಯನ ಶಿಬಿರಗಳ ಮೂಲಕ ಜ್ಞಾನವನ್ನು ವೃದ್ಧಿಸಿಕೊಂಡು ತಮ್ಮ ವ್ಯಾಪ್ತಿಯಲ್ಲಿ ಸವಾಲಾಗಿ ನಿಲ್ಲುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಕಾರ್ಯೋನ್ಮುಖರಾಗಬೇಕು ಎಂದರು. 

ಮುಂದಿನ ಮೂರು ದಿನಗಳಲ್ಲಿ ಸುಮಾರು 6 ಗೋಷ್ಠಿಗಳಲ್ಲಿ ವಿವಿಧ ವಿಷಯಗಳನ್ನು ಆಧರಿಸಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿಷಯ ಮಂಡನೆ, ಚರ್ಚೆ, ಸಂವಾದಗಳ ಮೂಲಕ ಪ್ರಸ್ತುತ ಸನ್ನಿವೇಶದಲ್ಲಿ ಸಮಾಜದ ಎಲ್ಲಾ ರೀತಿಯ ಸವಾಲುಗಳಿಗೆ ತಮ್ಮನ್ನು ಅಣಿಯಾಗಿಸಿಕೊಳ್ಳಲು ಸನ್ನದ್ದರಾಗಬೇಕು ಎಂದು ಕರೆ ನೀಡಿದರು. 

ಕಾರ್ಯಕ್ರಮದಲ್ಲಿ ರಾಜ್ಯ ಸಂಘಟನಾ ಸಂಚಾಲಕ ಸೂಲಿಕುಂಟೆ ರಮೇಶ್, ಎಸ್.ಎನ್.ಮಲ್ಲಪ್ಪ, ವಿಜಯನರಸಿಂಹ, ಎಸ್.ವಿಘ್ನೇಶ್, ಜೆ.ಶ್ರೀನಿವಾಸಲು, ಮರೀಶ್ ನಾಗಣ್ಣವರ್, ನಾಗನಾಳ ಮುನಿಯಪ್ಪ, ಮುನಿಚೌಡಪ್ಪ, ಪುರಯಲ್ಲಪ್ಪ ಭಾಗವಹಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X