Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮ್ಯಾನ್ಮಾರ್ ಸೈನಿಕರ ಲೈಂಗಿಕ ಹಿಂಸಾಚಾರವು...

ಮ್ಯಾನ್ಮಾರ್ ಸೈನಿಕರ ಲೈಂಗಿಕ ಹಿಂಸಾಚಾರವು ‘ಜನಾಂಗೀಯ ಹತ್ಯೆ’ಯ ಸೂಚನೆಯಾಗಿತ್ತು: ವಿಶ್ವಸಂಸ್ಥೆ ವರದಿ

ವಾರ್ತಾಭಾರತಿವಾರ್ತಾಭಾರತಿ23 Aug 2019 8:46 PM IST
share
ಮ್ಯಾನ್ಮಾರ್ ಸೈನಿಕರ ಲೈಂಗಿಕ ಹಿಂಸಾಚಾರವು ‘ಜನಾಂಗೀಯ ಹತ್ಯೆ’ಯ ಸೂಚನೆಯಾಗಿತ್ತು: ವಿಶ್ವಸಂಸ್ಥೆ ವರದಿ

ವಿಶ್ವಸಂಸ್ಥೆ, ಆ. 23: 2017ರಲ್ಲಿ ಮ್ಯಾನ್ಮಾರ್ ಸೇನೆಯು ರೊಹಿಂಗ್ಯಾ ಮಹಿಳೆಯರು ಮತ್ತು ಬಾಲಕಿಯರ ಮೇಲೆ ನಡೆಸಿದ ಲೈಂಗಿಕ ಹಿಂಸಾಚಾರವು, ದೇಶದ ಪ್ರಮುಖ ಮುಸ್ಲಿಮ್ ಅಲ್ಪಸಂಖ್ಯಾತ ಜನಾಂಗವನ್ನು ನಾಶಪಡಿಸುವ ಸೇನೆಯ ಜನಾಂಗೀಯ ಹತ್ಯೆಯ ಉದ್ದೇಶವನ್ನು ಹೊಂದಿತ್ತು ಗುರುವಾರ ಪ್ರಕಟಗೊಂಡ ವಿಶ್ವಸಂಸ್ಥೆಯ ವರದಿಯೊಂದು ತಿಳಿಸಿದೆ.

ಜನಾಂಗೀಯ ಹತ್ಯೆಯ ಹೊಣೆಯನ್ನು ನಿಗದಿಪಡಿಸುವಲ್ಲಿ ಮ್ಯಾನ್ಮಾರ್ ಸರಕಾರ ವಿಫಲವಾಗಿದೆ ಎಂದು ಸ್ವತಂತ್ರ ತನಿಖಾಧಿಕಾರಿಗಳ ಸಮಿತಿಯೊಂದು ಸಿದ್ಧಪಡಿಸಿದ ವರದಿ ಹೇಳಿದೆ.

ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿಯು 2017ರಲ್ಲಿ ತನಿಖಾ ಸಮಿತಿಯನ್ನು ರಚಿಸಿತ್ತು.

 ಜನಾಂಗೀಯ ಹತ್ಯೆಯ ಕೃತ್ಯಗಳನ್ನು ನಡೆಸಿದವರನ್ನು ತನಿಖೆಗೊಳಪಡಿಸಿ ಶಿಕ್ಷಿಸುವ ತನ್ನ ಹೊಣೆಯನ್ನು ನಿಭಾಯಿಸುವಲ್ಲಿ ಮ್ಯಾನ್ಮಾರ್ ಸರಕಾರ ವಿಫಲವಾಗಿರುವುದರಿಂದ, ‘ಜನಾಂಗೀಯ ಹತ್ಯೆ ಸನ್ನದಿ’ನಂತೆ ಮ್ಯಾನ್ಮಾರ್ ಸರಕಾರವೇ ಇದಕ್ಕೆ ಹೊಣೆಯಾಗುತ್ತದೆ ಎಂದು ವರದಿ ಹೇಳಿದೆ.

2017ರ ಆಗಸ್ಟ್‌ನಲ್ಲಿ ಮ್ಯಾನ್ಮಾರ್‌ನ ರಖೈನ್ ರಾಜ್ಯದಲ್ಲಿ ಸೇನಾ ದಮನ ಕಾರ್ಯಾಚರಣೆ ಆರಂಭಗೊಂಡ ಬಳಿಕ ಸುಮಾರು 7.40 ಲಕ್ಷ ರೊಹಿಂಗ್ಯಾ ಮುಸ್ಲಿಮರು ನೆರೆಯ ಬಾಂಗ್ಲಾದೇಶಕ್ಕೆ ಪಲಾಯನಗೈದಿದ್ದಾರೆ.

‘‘ನೂರಾರು ರೊಹಿಂಗ್ಯಾ ಮಹಿಳೆಯರು ಮತ್ತು ಬಾಲಕಿಯರನ್ನು ಅತ್ಯಾಚಾರಗೈಯಲಾಗಿದೆ. ಈ ಪೈಕಿ 80 ಶೇಕಡದಷ್ಟು ಅತ್ಯಾಚಾರಗಳು ಸಾಮೂಹಿಕ ಅತ್ಯಾಚಾರಗಳಾಗಿದ್ದವು ಎಂಬುದನ್ನು ತನಿಖಾ ತಂಡ ನಿರ್ಧರಿಸಿದೆ. ಈ ಸಾಮೂಹಿಕ ಅತ್ಯಾಚಾರಗಳ ಪೈಕಿ 82 ಶೇಕಡದಷ್ಟನ್ನು ಮ್ಯಾನ್ಮಾರ್ ಸೇನೆ ನಡೆಸಿದೆ’’ ಎಂದು ವರದಿ ತಿಳಿಸಿದೆ.

 ಮ್ಯನ್ಮಾರ್‌ಗೆ ಭೇಟಿ ನೀಡಲು ವಿಶ್ವಸಂಸ್ಥೆಯ ತನಿಖಾಧಿಕಾರಿಗಳಿಗೆ ಮ್ಯಾನ್ಮಾರ್ ಸರಕಾರ ಅನುಮತಿ ನಿರಾಕರಿಸಿತ್ತು. ತನಿಖಾಧಿಕಾರಿಗಳು ಬಾಂಗ್ಲಾದೇಶ, ಥಾಯ್ಲೆಂಡ್ ಮತ್ತು ಮಲೇಶ್ಯಗಳಲ್ಲಿರುವ ನಿರಾಶ್ರಿತ ಶಿಬಿರಗಳಿಗೆ ಪ್ರಯಾಣಿಸಿ ನೆರವು ಗುಂಪುಗಳು, ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರು ಮತ್ತು ಅಂತರ್‌ಸರಕಾರಿ ಸಂಘಟನೆಗಳ ಸದಸ್ಯರನ್ನು ಭೇಟಿ ಮಾಡಿದ್ದರು.

ಜನಾಂಗೀಯ ಹತ್ಯೆ ಇಂಗಿತದ 6 ಸೂಚನೆಗಳು

ಮ್ಯಾನ್ಮಾರ್ ಸೇನೆಯ ಜನಾಂಗೀಯ ಹತ್ಯೆ ಇಂಗಿತದ ಐದು ಸೂಚನೆಗಳನ್ನು ವಿಶ್ವಸಂಸ್ಥೆಯ ತನಿಖಾಧಿಕಾರಿಗಳು ಆಗಸ್ಟ್ 2018ರ ವರದಿಯಲ್ಲಿ ಪಟ್ಟಿ ಮಾಡಿದ್ದಾರೆ. ಅವುಗಳೆಂದರೆ ಅವಹೇಳನಕಾರಿ ಭಾಷೆಯ ಬಳಕೆ; ಹಿಂಸೆಗೆ ಮುನ್ನ, ಹಿಂಸೆಯ ಅವಧಿಯಲ್ಲಿ ಮತ್ತು ನಂತರ ಸರಕಾರಿ ಅಧಿಕಾರಿಗಳು, ರಾಜಕಾರಣಿಗಳು, ಧಾರ್ಮಿಕ ನಾಯಕರು ಮತ್ತು ಸೇನಾಧಿಕಾರಿಗಳು ನೀಡುವ ನಿರ್ದಿಷ್ಟ ಹೇಳಿಕೆಗಳು; ತಾರತಮ್ಯಕಾರಿ ಯೋಜನೆಗಳು ಮತ್ತು ನೀತಿಗಳನ್ನು ಜಾರಿಗೆ ತರುವುದು; ವಿನಾಶಕ್ಕೆ ಸಂಘಟಿತ ಯೋಜನೆ ರೂಪಿಸುವುದು ಮತ್ತು ಅತ್ಯಂತ ಅಮಾನುಷ ಸೇನಾ ದಮನ ಕಾರ್ಯಾಚರಣೆ.

ಮಹಿಳೆಯರು ಮತ್ತು ಬಾಲಕಿಯರ ವಿರುದ್ಧ ನಡೆದ ಲೈಂಗಿಕ ಹಿಂಸಾಚಾರವು ಸೇನೆಯ ಜನಾಂಗೀಯ ಹತ್ಯೆಯ ಇಂಗಿತದ ಆರನೇ ಸೂಚನೆಯಾಗಿದೆ ಎಂಬ ನಿರ್ಧಾರಕ್ಕೆ ತನಿಖಾಧಿಕಾರಿಗಳು ಬಂದಿದ್ದಾರೆ ಎಂದು ನೂತನ ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X