Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶ್ರೀಕೃಷ್ಣ ಜನ್ಮಾಷ್ಟಮಿ- ಮೊಸರುಕುಡಿಕೆಗೆ...

ಶ್ರೀಕೃಷ್ಣ ಜನ್ಮಾಷ್ಟಮಿ- ಮೊಸರುಕುಡಿಕೆಗೆ ಉಡುಪಿ ನಗರದಲ್ಲಿ ಬಂದೋಬಸ್ತ್

ವಾರ್ತಾಭಾರತಿವಾರ್ತಾಭಾರತಿ23 Aug 2019 9:30 PM IST
share
ಶ್ರೀಕೃಷ್ಣ ಜನ್ಮಾಷ್ಟಮಿ- ಮೊಸರುಕುಡಿಕೆಗೆ ಉಡುಪಿ ನಗರದಲ್ಲಿ ಬಂದೋಬಸ್ತ್

ಉಡುಪಿ, ಆ.23: ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರುಕುಡಿಕೆ ಕಾರ್ಯ ಕ್ರಮದ ಸಂಬಂಧ ಉಡುಪಿ ನಗರದಲ್ಲಿ ಭಕ್ತಾಧಿಗಳಿಗೆ ಯಾವುದೇ ತೊಂದರೆ ಹಾಗೂ ಅಹಿತಕರ ಘಟನೆ ಸಂಭವಿಸದಂತೆ ವ್ಯಾಪಕ ಬಂದೋಬಸ್ತ್ ಹಾಗೂ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಬಂದೋಬಸ್ತ್‌ಗಾಗಿ ಒಬ್ಬರು ಡಿವೈಎಸ್ಪಿ, ನಾಲ್ಕು ಪೊಲೀಸ್ ನಿರೀಕ್ಷಕರು, 12 ಪೊಲೀಸ್ ಉಪನಿರೀಕ್ಷರು, 39 ಸಹಾಯಕ ಪೊಲೀಸ್ ಉಪನಿರೀಕ್ಷಕರು, 236 ಪೊಲೀಸ್ ಸಿಬ್ಬಂದಿ, 40 ಹೋಂ ಗಾರ್ಡ್, ಒಂದು ಕ್ವಿಕ್ ರಿಯಾಕ್ಷನ್ ಟೀಮ್, ಒಂದು ವಿದ್ವಂಸಕ ಕೃತ್ಯ ತಪಾಸಣಾ ತಂಡ, ಮೂರು ಜಿಲ್ಲಾ ಸಶಸ್ತ್ರ ಪಡೆ ಹಾಗೂ ಎರಡು ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

ದೇವಸ್ಥಾನ, ಕಾರ್ಯಕ್ರಮಗಳ ಸ್ಥಳ, ಅನ್ನ ಸಂತರ್ಪಣೆ, ರಥಬೀದಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಬಂದೋಬಸ್ತ್ ಬಗ್ಗೆ ಅಧಿಕಾರಿ/ಸಿಬಂದಿಯವರನ್ನು ನಿಯುಕ್ತಿ ಗೊಳಿಸಲಾಗಿದ್ದು, ಸಂಚಾರ ನಿಯಂತ್ರಣಕ್ಕೆ ಸಂಚಾರ ವಿಭಾಗದ ಅಧಿಕಾರಿ/ ಸಿಬಂದಿಯವರನ್ನು ಬಳಸಿಕೊಳ್ಳಲಾಗಿದೆ. ದ್ವಿಚಕ್ರ ಮೊೆ ಲ್ ರೌಂಡ್ಸ್ ವ್ಯವಸ್ಥೆ ಯನ್ನೂ ಜಾರಿಗೊಳಿಸಲಾಗಿದೆ.

ಆಯಕಟ್ಟಿನ ಎಂಟು ಕಡೆಗಳಲ್ಲಿ ವಿಡಿಯೋಗ್ರಫಿಯನ್ನು ನಡೆಸಲಾಗುವುದು ಹಾಗೂ ಎರಡು ವಿಡಿಯೋಗ್ರಫಿಯನ್ನು ಮೊಸರುಕುಡಿಕೆ ಮೆರವಣಿಗೆಯಲ್ಲಿ ಬಳಸಿಕೊಳ್ಳಲಾಗುವುದು. ಅಲ್ಲದೆ ಸಿಸಿ ಕೆಮರಾ ವೀಕ್ಷಣೆಗೆ ಸಿಬಂದಿಯನ್ನು ನೇಮಿಸಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.

ಐಕಾನ್ ಹಾಗೂ ಕ್ಯಾಪ್ಟನ್ ಎಂಬ ಶ್ವಾನಗಳೊಂದಿಗೆ ಎರಡು ಶ್ವಾನದಳ ತಂಡಗಳು ಉಡುಪಿಯ ಶ್ರೀಕೃಷ್ಣ ಮಠ ಸೇರಿದಂತೆ ನಗರದ ವಿವಿಧೆ ಕಡೆಗಳಲ್ಲಿ ಬೆಳಗ್ಗೆ ಹಾಗೂ ಸಂಜೆ ವೇಳೆ ತಪಾಸಣಾ ಕಾರ್ಯ ನಡೆಸಿವೆ ಎಂದು ತಿಳಿದು ಬಂದಿದೆ.

ಸಾರ್ವಜನಿಕರಿಗೆ ಸೂಚನೆಗಳು

ಕೃಷ್ಟ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದ ಸಂಚಾರ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರು ತಮ್ಮ ವಾಹನಗಳನ್ನು ಕಲ್ಸಂಕ ರಾಯಲ್ ಗಾರ್ಡನ್‌ನಲ್ಲಿ ಪಾರ್ಕಿಂಗ್ ಮಾಡಬೇಕು. ಚಿನ್ನಾಭರಣ ಹಾಗೂ ಪೋಷಕರು ತಮ್ಮ ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕು. ಯಾವುದೇ ವದಂತಿಗಳಿಗೆ ಕಿವಿಗೊಡ ಬಾರದು ಎಂದು ಪೊಲೀಸ್ ಇಲಾಖೆ ಸೂಚನೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X