Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಹಾರ ಪೂರೈಕೆ ಮಾಡುವ ದ್ವಿಚಕ್ರ ಸವಾರರ...

ಆಹಾರ ಪೂರೈಕೆ ಮಾಡುವ ದ್ವಿಚಕ್ರ ಸವಾರರ ಅಮಿತ ವೇಗಕ್ಕೆ ಕಡಿವಾಣ: ಕಮಿಷನರ್ ಹರ್ಷ

ಪೊಲೀಸ್ ಫೋನ್ ಇನ್ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ23 Aug 2019 9:47 PM IST
share
ಆಹಾರ ಪೂರೈಕೆ ಮಾಡುವ ದ್ವಿಚಕ್ರ ಸವಾರರ ಅಮಿತ ವೇಗಕ್ಕೆ ಕಡಿವಾಣ: ಕಮಿಷನರ್ ಹರ್ಷ

ಮಂಗಳೂರು, ಆ.23: ಆನ್‌ಲೈನ್ ಮೂಲಕ ಆರ್ಡರ್ ಪಡೆದು ಹೊಟೇಲ್‌ಗಳಿಂದ ಗ್ರಾಹಕರಿಗೆ ಆಹಾರ ಪೂರೈಕೆ ಮಾಡುವ ದ್ವಿಚಕ್ರ ಸವಾರರು ನಗರದಲ್ಲಿ ಅಮಿತ ವೇಗದಿಂದ ಸಂಚರಿಸುವುದನ್ನು ತಡೆಯಲು ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಆಯುಕ್ತ ಡಾ.ಹರ್ಷ ಪಿ.ಎಸ್. ಭರವಸೆ ನೀಡಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ನಡೆದ ಫೋನ್‌ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿ ಮಾತನಾಡಿದ ಅವರು ಅತಿ ವೇಗದ ಸಂಚಾರದ ಬಗ್ಗೆ ಪರಿಶೀಲನೆ ನಡೆಸಲು ಎಸಿಪಿ ಮಂಜುನಾಥ ಶೆಟ್ಟಿ ಸೂಚಿಸಿದರಲ್ಲದೆ, ಅಮಿತ ವೇಗಕ್ಕೆ ಕಡಿವಾಣ ಹಾಕಲಾಗುವುದು ಎಂದರು.

ವಿವಿಧ ಪ್ರಕರಣಗಳಿಗೆ ಸಂಬಂಧಿಸಿ ವಶಪಡಿಸಿಕೊಂಡ ವಾಹನಗಳನ್ನು ಪೊಲೀಸ್ ಠಾಣೆಗಳ ಮುಂದೆ ನಿಲ್ಲಿಸಲಾಗಿದೆ. ಇದನ್ನು ಶುಚಿತ್ವ ಮತ್ತು ಸೌಂದರ್ಯದ ದೃಷ್ಟಿಯಿಂದ ಸಕಾಲಕ್ಕೆ ವಿಲೇವಾರಿ ಮಾಡಬೇಕು ಎಂದು ವ್ಯಕ್ತಿಯೊಬ್ಬರು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಕೋಡಿಕಲ್‌ಗೆ ಕಂಕನಾಡಿಯಿಂದ ಬರುವ ಬಸ್ ದಿನಂಪ್ರತಿ ಮಧ್ಯಾಹ್ನ 3 ಟ್ರಿಪ್ ಕಟ್ ಮಾಡುತ್ತಿವೆ. ಸ್ಟೇಟ್‌ಬ್ಯಾಂಕ್‌ನಿಂದ 13 ಹಾಗೂ 19 ನಂಬರ್ ಬಸ್‌ಗಳು ಟ್ರಿಪ್ ಕಟ್ ಮಾಡುತ್ತಿವೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿವೆ ಎಂಬ ದೂರು ಕೇಳಿ ಬಂತು. ಈ ಬಗ್ಗೆ ಆರ್‌ಟಿಒ ಗಮನಕ್ಕೆ ತಂದು ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದರು.

ಕೆಲವು ಸಂಚಾರ ಪೊಲೀಸರ ಮೇಲೆ ಭ್ರಷ್ಟಾಚಾರ ಆರೋಪವಿದೆ. ಇದಕ್ಕಾಗಿ ಕೆಎಸ್ಸಾರ್ಟಿಸಿ ನಿರ್ವಾಹಕರ ಮಾದರಿಯಲ್ಲಿ ಡ್ಯೂಟಿಗೆ ಹಾಜರಾಗುವಾಗ ಮತ್ತು ಹೊರಡುವಾಗ ತಪಾಸಣೆ ನಡೆಸಬೇಕು ಎಂದು ಸಾರ್ವಜನಿಕರೊಬ್ಬರು ಸಲಹೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು ನಿಗದಿತ ಪ್ರಕರಣವಿದ್ದರೆ ನೇರವಾಗಿ ಗಮನಕ್ಕೆ ತನ್ನಿ ಅಥವಾ ಎಸಿಬಿ ಅಧಿಕಾರಿಗಳಿಗೆ ದೂರು ನೀಡಲು ಅವಕಾಶವಿದೆ ಎಂದು ಸಲಹೆ ನೀಡಿದರು.

ಕಟ್ಟಡ ನಿರ್ಮಾಣ ಸಂದರ್ಭ ದಿನವಿಡೀ ಸಿಮೆಂಟ್ ಮಿಕ್ಸರ್ ಲಾರಿಗಳು ರಸ್ತೆಯಲ್ಲೇ ನಿಲ್ಲುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗು ತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ವ್ಯಕ್ತಿಯೊಬ್ಬರು ಒತ್ತಾಯಿಸಿದರು. ಶಕ್ತಿನಗರದಲ್ಲಿ ಆಟೋ ಚಾಲಕರು ಹಗಲು ಹೊತ್ತು ಒಂದೂವರೆಪಟ್ಟು ಬಾಡಿಗೆ ವಸೂಲು ಮಾಡುತ್ತಿದ್ದಾರೆ ಎಂದು ಮಹಿಳೆಯೊಬ್ಬರು ದೂರಿದರು. ಈ ಬಗ್ಗೆ ಆಟೋ ರಿಕ್ಷಾದ ಮಾಹಿತಿ ಪಡೆದ ಆಯುಕ್ತರು ಪತ್ತೆ ಮಾಡಿ ವಿಚಾರಣೆ ನಡೆಸುವಂತೆ ಎಸಿಪಿ ಮಂಜುನಾಥ ಶೆಟ್ಟಿಗೆ ಸೂಚಿಸಿದರು.

ನಗರದಲ್ಲಿ ಹಲವು ಕಡೆ ನೋ ಪಾರ್ಕಿಂಗ್ ನಾಮಫಲಕ ಇಲ್ಲ. ಗೊತ್ತಾಗದೆ ವಾಹನ ನಿಲ್ಲಿಸಿದರೆ ಟ್ರೋಲ್ ಮಾಡಿಕೊಂಡು ಹೋಗುತ್ತಾರೆ. ಆದ್ದರಿಂದ ನೋ ಪಾರ್ಕಿಂಗ್ ನಾಮಫಲಕ ಅಳವಡಿಸಬೇಕು ಎಂದು ಸಾರ್ವಜನಿಕರೊಬ್ಬರು ಮನವಿ ಮಾಡಿದರು. ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಆಯುಕ್ತರು ಭರವಸೆ ನೀಡಿದರು.

ಡಿಸಿಪಿಗಳಾದ ಅರುಣಾಂಗ್‌ಶಿ ಗಿರಿ, ಲಕ್ಷ್ಮಿಗಣೇಶ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X