Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಾಯಕತ್ವದ ಮೊದಲ ಪರೀಕ್ಷೆಯಲ್ಲಿ ಹರ್ಮನ್...

ನಾಯಕತ್ವದ ಮೊದಲ ಪರೀಕ್ಷೆಯಲ್ಲಿ ಹರ್ಮನ್ ತೇರ್ಗಡೆ

ವಾರ್ತಾಭಾರತಿವಾರ್ತಾಭಾರತಿ23 Aug 2019 11:43 PM IST
share
ನಾಯಕತ್ವದ ಮೊದಲ ಪರೀಕ್ಷೆಯಲ್ಲಿ  ಹರ್ಮನ್ ತೇರ್ಗಡೆ

ಹೊಸದಿಲ್ಲಿ, ಆ.23: ಟೋಕಿಯೊದಲ್ಲಿ ಕೊನೆಗೊಂಡ ಒಲಿಂಪಿಕ್ ಟೆಸ್ಟ್ ಟೂರ್ನಿಯಲ್ಲಿ ಭಾರತದ ಹಾಕಿ ಯಶಸ್ಸು ಗಳಿಸಿರುವ ಹಿನ್ನೆಲೆಯಲ್ಲಿ ಭಾರತದ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಅವರು ಸಂತೃಪ್ತಿ ವ್ಯಕ್ತಪಡಿಸಿದ್ದಾರೆ.

 ವರ್ಲ್ಡ್ ನಂ.5 ಭಾರತ ಟೋಕಿಯೊಗೆ ತೆರಳಿದಾಗ ತಂಡದಲ್ಲಿ ಅನುಭವಿಗಳ ಕೊರತೆ ಕಾಡುತ್ತಿತ್ತು. ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿತ್ತು. ಹಿರಿಯರ ಅನುಪಸ್ಥಿತಿಯಲ್ಲಿ ನಾಯಕನಾಗಿ ಮೊದಲ ಬಾರಿ ಹರ್ಮನ್‌ಪ್ರೀತ್ ಸಿಂಗ್ ತಂಡವನ್ನು ಮುನ್ನಡೆಸಿದ್ದರು. ಅವರ ನಾಯಕತ್ವದಲ್ಲಿ ಯುವ ತಂಡ ಉತ್ತಮ ಪ್ರದರ್ಶನ ನೀಡಿದೆ. ಬುಧವಾರ ಫೈನಲ್‌ನಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ 5-0 ಅಂತರದಲ್ಲಿ ಜಯ ಗಳಿಸಿ ಪ್ರಶಸ್ತಿಯನ್ನು ಬಾಚಿಕೊಂಡಿದೆ.

     ‘‘ ಪ್ರತಿಯೊಬ್ಬರು ಕೈಜೋಡಿಸಿದರೆ ನಮಗೆ ನಮ್ಮ ಗುರಿಯನ್ನು ಯಶಸ್ವಿಯಾಗಿ ಸಾಧಿಸಲು ಸಾಧ್ಯ ಅದೇ ರೀತಿಯಲ್ಲಿ ನಮ್ಮ ತಂಡದ ಆಟಗಾರರು ಸಂಘಟಿತ ಪ್ರಯತ್ನ ನಡೆಸಿ ತಂಡದ ಯಶಸ್ವಿಗೆ ನೆರವಾಗಿದ್ದಾರೆ. ಎಲ್ಲರ ಸಹಕಾರದೊಂದಿಗೆ ತಂಡವನ್ನು ಮೊದಲ ಬಾರಿ ಮುನ್ನಡೆಸಲು ನನಗೆ ಅಪೂರ್ವ ಅವಕಾಶ ಸಿಕ್ಕಿದೆ. ಅನುಭವಿ ಆಟಗಾರರಿಗೆ ವಿಶ್ರಾಂತಿ ನೀಡಿದ ಕಾರಣದಿಂದಾಗಿ ನಮ್ಮದು ಯುವ ತಂಡವಾಗಿತ್ತು. ಯುವ ಆಟಗಾರರು ಸಿಕ್ಕಿದ ಅವಕಾಶವನ್ನು ಚೆನ್ನಾಗಿ ಬಳಿಸಿಕೊಂಡಿದ್ದಾರೆ. ಇದಕ್ಕಾಗಿ ತಂಡದ ಎಲ್ಲರನ್ನು ಅಭಿನಂದಿಸುತ್ತೇನೆ’’ ಎಂದು ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಹೇಳಿದ್ದಾರೆ.

 ‘‘ ನಮ್ಮ ತಂಡ ಜಪಾನ್, ಮಲೇಶ್ಯ ಮತ್ತು ನ್ಯೂಝಿಲ್ಯಾಂಡ್‌ನಂತಹ ತಂಡದ ವಿರುದ್ಧ ಚೆನ್ನಾಗಿ ಆಡಿದೆ. ನಾನು ಮೊದಲ ಬಾರಿ ನಾಯಕನಾಗಿ ಮುನ್ನಡೆಸಿದ ತಂ ಉತ್ತಮ ಪ್ರದರ್ಶನ ನೀಡಿರುವ ಹಿನ್ನೆಲೆಯಲ್ಲಿ ನನಗೆ ಸಂತಸವಾಗಿದೆ ’’ ಎಂದು 23ರ ಹರೆಯದ ಹರ್ಮನ್‌ಪ್ರೀತ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಭಾರತ ಒಲಿಂಪಿಕ್ ಟೆಸ್ಟ್ ಇವೆಂಟ್‌ನ ಮೊದಲ ಪಂದ್ಯದಲ್ಲಿ ಮಲೇಶ್ಯ ವಿರುದ್ಧ 6-0 ವಿಜಯ ಗಳಿಸುವ ಮೂಲಕ ಶುಭಾರಂಭ ಮಾಡಿತ್ತು. ಆದರೆ ಎರಡನೇ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ 1-2 ಅಂತರದಲ್ಲಿ ಸೋಲು ಅನುಭವಿಸಿತ್ತು. ಆದರೆ ಕೊನೆಯ ಪಂದ್ಯದಲ್ಲಿ ಆತಿಥೇಯ ಜಪಾನ್ ವಿರುದ್ಧ 6-3 ಅಂತರದಲ್ಲಿ ಜಯ ಗಳಿಸಿ ಫೈನಲ್‌ಗೆ ಪ್ರವೇಶ ಪಡೆದಿತ್ತು.

ಹರ್ಮನ್‌ಪ್ರೀತ್ ಸಿಂಗ್ ಎರಡು ಗೋಲುಗಳನ್ನು ದಾಖಲಿಸಿದ್ದರು. ಎರಡೂ ಗೋಲುಗಳನ್ನು ನ್ಯೂಝಿಲ್ಯಾಂಡ್ ವಿರುದ್ಧ ಗಳಿಸಿದ್ದರು. ನ್ಯೂಝಿಲ್ಯಾಂಡ್ ವಿರುದ್ಧ ಭಾರತ ಸೋಲು ಅನುಭವಿಸಿದ ಮೊದಲ ಪಂದ್ಯದಲ್ಲಿ ಗೋಲು ಗಳಿಸಿದ್ದರು. ಇನ್ನೊಂದು ಗೋಲು ಫೈನಲ್‌ನಲ್ಲಿ ದಾಖಲಿಸಿದ್ದರು.

  ಹರ್ಮನ್‌ಪ್ರೀತ್ ಸಿಂಗ್ ಮೇ 2015ರಲ್ಲಿ ಭುವನೇಶ್ವರ್‌ನಲ್ಲಿ ನಡೆದ ಜಪಾನ್ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಹರ್ಮನ್‌ಪ್ರೀತ್ ರಾಷ್ಟ್ರೀಯ ತಂಡ ಪ್ರವೇಶಿಸಿದ್ದರು. 2016 ರಿಯೋ ಒಲಿಂಪಿಕ್‌ನಲ್ಲಿ ಭಾರತದ ಪರ ಆಡಿದ ಓರ್ವ ಯುವ ಆಟಗಾರ ಎನಿಸಿಕೊಂಡಿದ್ದರು. ಆ ಬಳಿಕ 2016 ಮತ್ತು 2018ರಲ್ಲಿ ಎಫ್‌ಐಎಚ್ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಆಡಿದ್ದರು. ಕಾಮನ್‌ವೆಲ್ಸ್ ಗೇಮ್ಸ್, 2018ರಲ್ಲಿ ನಡೆದ ಏಶ್ಯನ್ ಗೇಮ್ಸ್ ಮತ್ತು ವಿಶ್ವಕಪ್‌ನಲ್ಲಿ ಭಾರತ ತಂಡದಲ್ಲಿ ಅವರು ಆಡಿದ್ದರು.

ಕಳೆದ ಒಲಿಂಪಿಕ್‌ನಲ್ಲಿ ಆಡಿದ್ದೇನೆ. ಟೋಕಿಯೋದಲ್ಲಿ 2020ರಲ್ಲಿ ನಡೆಯಲಿರುವ ಒಲಿಂಪಿಕ್‌ಗೆ ಅರ್ಹತೆ ಪಡೆಯಲು ಭಾರತ ಪ್ರಯತ್ನ ಮುಂದುವರಿಸಲಿದೆ ಎಂದು ನಾಯಕ ಹರ್ಮನ್‌ಪ್ರೀತ್ ಸಿಂಗ್ ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X